ಯಲ್ಲಾಪುರ ಬಳಿ ಇಂಟರ್​ಸಿಟಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ದುರ್ಮರಣ; 25ಕ್ಕೂ ಹೆಚ್ಚು ಮಂದಿಗೆ ಗಾಯ

Edited By: ಆಯೇಷಾ ಬಾನು

Updated on: Jul 22, 2023 | 11:07 AM

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಅಪಘಾತಕ್ಕೀಡಾಗಿದೆ. ಇಂಟರ್​ಸಿಟಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

1 / 5
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಂಟರ್​ಸಿಟಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಂಟರ್​ಸಿಟಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

2 / 5

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮೂವರ ಸ್ಥಿತಿ ಗಂಭೀರವಾಗಿದೆ.

3 / 5

ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

4 / 5

ಅಪಘಾತಗೊಂಡ ಬಸ್​ನಲ್ಲಿ 30 ಜನ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

5 / 5

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದ ಭೀಕರ ಅಪಘಾತಕ್ಕೆ ಮಳೆ, ಕೆಸರು ತುಂಬಿದ ರಸ್ತೆ ಹಾಗೂ ವಿದ್ಯುತ್ ತಂತಿಗಳು ಕಾರಣ ಎಂದು ತಿಳಿದು ಬಂದಿದೆ.

Published On - 10:14 am, Sat, 22 July 23

Loading...
Unable to load recommendations.
Follow Us