ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು(international Women kabaddi player) ಆತ್ಮಹತ್ಯೆ (Suicide)ಮಾಡಿಕೊಂಡಿದ್ದಾರೆ.
ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅರಿಶಿನಕುಂಟೆ ಆದರ್ಶನಗರದ ನಿವಾಸದಲ್ಲಿ ಯುವತಿ ಧನಲಕ್ಷ್ಮೀ(25) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೊನ್ನೆ ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀ, ತಂದೆ ಹಾಗೂ ತಮ್ಮ ಮನೆಯಲ್ಲಿರುವಾಗಲೇ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅನುಮಾನಗೊಂಡ ತಂದೆ ರೂಮ್ಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಮೂಲತಃ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕೆ.ತಿಮ್ಮಲಾಪುರ ನಿವಾಸಿಯಾಗಿರುವ ಧನಲಕ್ಷ್ಮೀ, ಕಳೆದ 5 ವರ್ಷದಿಂದ ನೆಲಮಂಗಲದ ಅರಿಶಿನಕುಂಟೆ ಆದರ್ಶನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬ್ಬಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮೀ, ಕಾಡುಗೋಡಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.
ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವುದೋ ವಿಚಾರದಲ್ಲಿ ಮನನೊಂದು ತನ್ನಷ್ಟಕ್ಕೆ ತಾನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಯುವತಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮೊನ್ನೇ ಅಷ್ಟೇ ಮೈಸೂರು ಸುತ್ತಾಡಿ ಬಂದಿದ್ದ ಧನಲಕ್ಷ್ಮೀ ಏಕಾಏಕಿ ಇಂದು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಅಚ್ಚರಿಕೆಗೆ ಕಾರಣವಾಗಿದೆ,
ತಂದೆ ಹಾಗೂ ತಮ್ಮ ಮನೆಯಲ್ಲಿರುವಾಗಲೇ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.