AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yoga Day: ಮೂರು ಲಕ್ಷಕ್ಕೂ ಹೆಚ್ಚು ಜನರೊಂದಿಗೆ ಯೋಗ ಮಾಡಿದ ಪ್ರಧಾನಿ ಮೋದಿ: ಇಲ್ಲಿವೆ ಫೋಟೋಸ್​

ವಿಶಾಖಪಟ್ಟಣದಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅದ್ಧೂರಿಯಾಗಿ ನಡೆಯಿತು. ಪ್ರಧಾನಿ ನರೇಂದ್ರ ಮೋದಿ 3 ಲಕ್ಷಕ್ಕೂ ಹೆಚ್ಚು ಜನರೊಂದಿಗೆ ಯೋಗ ಮಾಡಿದರು. ಈ ವೇಳೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಡಿಸಿಎಂ ಪವನ್​ ಕಲ್ಯಾಣ್​​ ಸೇರಿ ಹಲವು ಸಚಿವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇಲ್ಲಿವೆ ಫೋಟೋಸ್​.

ಗಂಗಾಧರ​ ಬ. ಸಾಬೋಜಿ
|

Updated on:Jun 21, 2025 | 10:20 AM

Share
ಇಂದು ದೇಶಾದ್ಯಂತ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಇತ್ತ ವಿಶಾಖಪಟ್ಟಣಂನಲ್ಲಿ ಅದ್ಧೂರಿಯಾಗಿ ಯೋಗ ದಿನಾಚರಣೆಗೆ ವೇದಿಕೆ ಸಜ್ಜು ಮಾಡಲಾಗಿತ್ತು. ಬೆಳಗ್ಗೆ 6.30ಕ್ಕೆ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ ಸುಮಾರು 3 ಲಕ್ಷಕ್ಕೂ ಹೆಚ್ಚು ಜನರೊಂದಿಗೆ ಯೋಗ ಮಾಡಿದ್ದಾರೆ.

ಇಂದು ದೇಶಾದ್ಯಂತ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಇತ್ತ ವಿಶಾಖಪಟ್ಟಣಂನಲ್ಲಿ ಅದ್ಧೂರಿಯಾಗಿ ಯೋಗ ದಿನಾಚರಣೆಗೆ ವೇದಿಕೆ ಸಜ್ಜು ಮಾಡಲಾಗಿತ್ತು. ಬೆಳಗ್ಗೆ 6.30ಕ್ಕೆ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ ಸುಮಾರು 3 ಲಕ್ಷಕ್ಕೂ ಹೆಚ್ಚು ಜನರೊಂದಿಗೆ ಯೋಗ ಮಾಡಿದ್ದಾರೆ.

1 / 8
ವಿಶಾಖಪಟ್ಟಣಂನ ಆರ್‌.ಕೆ.ಬೀಚ್‌ನಿಂದ ಭೋಗಪುರಂವರೆಗೆ 26 ಕಿ.ಮೀ ಉದ್ದದ ಕಾರಿಡಾರ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ವ್ಯವಸ್ಥೆ ಮಾಡಲಾಗಿತ್ತು.

ವಿಶಾಖಪಟ್ಟಣಂನ ಆರ್‌.ಕೆ.ಬೀಚ್‌ನಿಂದ ಭೋಗಪುರಂವರೆಗೆ 26 ಕಿ.ಮೀ ಉದ್ದದ ಕಾರಿಡಾರ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ವ್ಯವಸ್ಥೆ ಮಾಡಲಾಗಿತ್ತು.

2 / 8
ಯೋಗ ಕೇವಲ ವ್ಯಾಯಾಮವಲ್ಲ, ಅದು ಒಂದು ಜೀವನದ ಭಾಗ. ಪ್ರತಿಯೊಬ್ಬರು ಯೋಗ ಮಾಡುವಂತೆ ಪ್ರಧಾನಿ ಮೋದಿ ಹೇಳಿದ್ದಾರೆ.

ಯೋಗ ಕೇವಲ ವ್ಯಾಯಾಮವಲ್ಲ, ಅದು ಒಂದು ಜೀವನದ ಭಾಗ. ಪ್ರತಿಯೊಬ್ಬರು ಯೋಗ ಮಾಡುವಂತೆ ಪ್ರಧಾನಿ ಮೋದಿ ಹೇಳಿದ್ದಾರೆ.

3 / 8
ಯೋಗ ಎಂದರೆ ಎಲ್ಲರೂ ಒಂದಾಗುವುದು. ಇಡೀ ವಿಶ್ವವೇ ಯೋಗ ದಿನ ಆಚರಿಸುತ್ತಿರುವುದು ಸಾಧಾರಣ ವಿಷಯವಲ್ಲ.
ಯೋಗ ಇಂದು ವಿಶ್ವವನ್ನೇ ಒಂದು ಮಾಡಿದೆ. ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ ಎಂದಿದ್ದಾರೆ ಪ್ರಧಾನಿ ಮೋದಿ.

ಯೋಗ ಎಂದರೆ ಎಲ್ಲರೂ ಒಂದಾಗುವುದು. ಇಡೀ ವಿಶ್ವವೇ ಯೋಗ ದಿನ ಆಚರಿಸುತ್ತಿರುವುದು ಸಾಧಾರಣ ವಿಷಯವಲ್ಲ. ಯೋಗ ಇಂದು ವಿಶ್ವವನ್ನೇ ಒಂದು ಮಾಡಿದೆ. ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ ಎಂದಿದ್ದಾರೆ ಪ್ರಧಾನಿ ಮೋದಿ.

4 / 8
ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಕೂಡ ಯೋಗ ಮಾಡುವ ಮೂಲಕ ಯೋಗ ದಿನವನ್ನು ಆಚರಿಸಿದ್ದಾರೆ. ಇದೇ ವೇಳೆ ಮಾತನಾಡಿರುವ ಅವರು ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಕೀರ್ತಿ ಪ್ರಧಾನಿ ಮೋದಿಗೆ ಸಲ್ಲಬೇಕು ಎಂದು ಹೇಳಿದ್ದಾರೆ.

ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಕೂಡ ಯೋಗ ಮಾಡುವ ಮೂಲಕ ಯೋಗ ದಿನವನ್ನು ಆಚರಿಸಿದ್ದಾರೆ. ಇದೇ ವೇಳೆ ಮಾತನಾಡಿರುವ ಅವರು ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಕೀರ್ತಿ ಪ್ರಧಾನಿ ಮೋದಿಗೆ ಸಲ್ಲಬೇಕು ಎಂದು ಹೇಳಿದ್ದಾರೆ.

5 / 8
ಡಿಸಿಎಂ ಪವನ್ ಕಲ್ಯಾಣ್ ಕೂಡ ಪ್ರಧಾನಿ ಮೋದಿ ಅವರೊಂದಿಗೆ ಯೋಗ ಮಾಡಿದರು. ಈ ವೇಳೆ ಮಾತನಾಡಿದ ಅವರು ಯೋಗದ ಮಹತ್ವವನ್ನು ವಿಶ್ವಕ್ಕೆ ಪರಿಚಯಿಸಿದ್ದು ಪ್ರಧಾನಿ ಮೋದಿ ಎಂದು ಹೇಳಿದ್ದಾರೆ.

ಡಿಸಿಎಂ ಪವನ್ ಕಲ್ಯಾಣ್ ಕೂಡ ಪ್ರಧಾನಿ ಮೋದಿ ಅವರೊಂದಿಗೆ ಯೋಗ ಮಾಡಿದರು. ಈ ವೇಳೆ ಮಾತನಾಡಿದ ಅವರು ಯೋಗದ ಮಹತ್ವವನ್ನು ವಿಶ್ವಕ್ಕೆ ಪರಿಚಯಿಸಿದ್ದು ಪ್ರಧಾನಿ ಮೋದಿ ಎಂದು ಹೇಳಿದ್ದಾರೆ.

6 / 8
ಕಾರ್ಯಕ್ರಮದಲ್ಲಿ ಸುಮಾರು 25,000 ಬುಡಕಟ್ಟು ವಿದ್ಯಾರ್ಥಿಗಳಿಂದ 108 ನಿಮಿಷಗಳ ಕಾಲ ಸೂರ್ಯ ನಮಸ್ಕಾರ ಪ್ರದರ್ಶನ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಸುಮಾರು 25,000 ಬುಡಕಟ್ಟು ವಿದ್ಯಾರ್ಥಿಗಳಿಂದ 108 ನಿಮಿಷಗಳ ಕಾಲ ಸೂರ್ಯ ನಮಸ್ಕಾರ ಪ್ರದರ್ಶನ ಮಾಡಲಾಗಿದೆ.

7 / 8
ವಿಶಾಖಪಟ್ಟಣಂನಲ್ಲಿ ಯೋಗದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿಗೆ ಸಿಎಂ ಚಂದ್ರಬಾಬು ನಾಯ್ಡು ಮತ್ತು ಡಿಸಿಎಂ ಪವನ್​ ಕಲ್ಯಾಣ್​​ ಸನ್ಮಾನಿಸಿದರು.

ವಿಶಾಖಪಟ್ಟಣಂನಲ್ಲಿ ಯೋಗದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿಗೆ ಸಿಎಂ ಚಂದ್ರಬಾಬು ನಾಯ್ಡು ಮತ್ತು ಡಿಸಿಎಂ ಪವನ್​ ಕಲ್ಯಾಣ್​​ ಸನ್ಮಾನಿಸಿದರು.

8 / 8

Published On - 9:16 am, Sat, 21 June 25

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ