ಅದ್ದೂರಿ ಸೆಟ್, ದೊಡ್ಡ ಬಜೆಟ್; ಇದು ಜಗ್ಗೇಶ್​ ‘ರಂಗನಾಯಕ’ ಸ್ಪೆಷಲ್

‘ಮಠ’, ‘ಎದ್ದೇಳು ಮಂಜುನಾಥ’ದಂಥ ಹಿಟ್ ಸಿನಿಮಾಗಳನ್ನು ನೀಡಿದ ಖ್ಯಾತಿ ಗುರುಪ್ರಸಾದ್ ಅವರಿಗೆ ಸಲ್ಲುತ್ತದೆ. ಜಗ್ಗೇಶ್ ಹಾಗೂ ಅವರ ಕಾಂಬಿನೇಷನ್ನಲ್ಲಿ ಬಂದ ಈ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಹಿಟ್ ಆಗಿದ್ದವು.

| Updated By: ರಾಜೇಶ್ ದುಗ್ಗುಮನೆ

Updated on: Aug 19, 2021 | 6:39 PM

ನಟ ಜಗ್ಗೇಶ್​ ಅವರು ತುಂಬಾನೇ ಕಷ್ಟದಿಂದ ಚಿತ್ರರಂಗಕ್ಕೆ ಬಂದವರು. ಚಿತ್ರರಂಗದ ಆರಂಭದ ದಿನಗಳಲ್ಲೂ ಅವರು ಕಷ್ಟಗಳನ್ನು ಎದುರಿಸಿದ್ದರು. ಈಗ ಅವರ ಕೈಯಲ್ಲಿ  ಸಾಕಷ್ಟು ಸಿನಿಮಾಗಳಿವೆ.

ನಟ ಜಗ್ಗೇಶ್​ ಅವರು ತುಂಬಾನೇ ಕಷ್ಟದಿಂದ ಚಿತ್ರರಂಗಕ್ಕೆ ಬಂದವರು. ಚಿತ್ರರಂಗದ ಆರಂಭದ ದಿನಗಳಲ್ಲೂ ಅವರು ಕಷ್ಟಗಳನ್ನು ಎದುರಿಸಿದ್ದರು. ಈಗ ಅವರ ಕೈಯಲ್ಲಿ  ಸಾಕಷ್ಟು ಸಿನಿಮಾಗಳಿವೆ.

1 / 7
‘ಮಠ’ ಗುರುಪ್ರಸಾದ್​ ಹಾಗೂ ಜಗ್ಗೇಶ್​ ಕಾಂಬಿನೇಷನ್​ನಲ್ಲಿ ಈಗ ‘ರಂಗನಾಯಕ’ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡೋಕೆ ಇಂದು ಸುದ್ದಿಗೋಷ್ಠಿ ಕರೆಯಲಾಗಿತ್ತು.

‘ಮಠ’ ಗುರುಪ್ರಸಾದ್​ ಹಾಗೂ ಜಗ್ಗೇಶ್​ ಕಾಂಬಿನೇಷನ್​ನಲ್ಲಿ ಈಗ ‘ರಂಗನಾಯಕ’ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡೋಕೆ ಇಂದು ಸುದ್ದಿಗೋಷ್ಠಿ ಕರೆಯಲಾಗಿತ್ತು.

2 / 7
‘ನಾನು ಮತ್ತೆ ಸೆಟ್​ಗೆ ಮರಳಿದ್ದೇನೆ. ಈ ಖುಷಿ ಎರಡು ವರ್ಷದಿಂದ ನಿಂತು ಹೋಗಿತ್ತು. ಬ್ಯೂಟಿಫುಲ್​ ಇಂಡಸ್ಟ್ರಿಯಲ್ಲಿ ನಾವಿದೀವಿ ಎನ್ನುವ ಹೆಮ್ಮೆ ನನಗೆ ಇದೆ. ಆದರೆ, ಈ ಕೊರೊನಾದಿಂದ ತಾಂತ್ರಿಕ ವರ್ಗದವರಿಗೆ ಎಷ್ಟು ತೊಂದರೆ ಆಗಿರಬಹುದು ಎಂದು ಯೋಚಿಸುತ್ತಿದ್ದೆ. ಇಂದು ನಾವು ಯಾಂತ್ರಿಕ ಬದುಕಲ್ಲಿ ಬದುಕ್ತಾ ಇದೀವಿ’ ಎಂದರು ಜಗ್ಗೇಶ್​.

‘ನಾನು ಮತ್ತೆ ಸೆಟ್​ಗೆ ಮರಳಿದ್ದೇನೆ. ಈ ಖುಷಿ ಎರಡು ವರ್ಷದಿಂದ ನಿಂತು ಹೋಗಿತ್ತು. ಬ್ಯೂಟಿಫುಲ್​ ಇಂಡಸ್ಟ್ರಿಯಲ್ಲಿ ನಾವಿದೀವಿ ಎನ್ನುವ ಹೆಮ್ಮೆ ನನಗೆ ಇದೆ. ಆದರೆ, ಈ ಕೊರೊನಾದಿಂದ ತಾಂತ್ರಿಕ ವರ್ಗದವರಿಗೆ ಎಷ್ಟು ತೊಂದರೆ ಆಗಿರಬಹುದು ಎಂದು ಯೋಚಿಸುತ್ತಿದ್ದೆ. ಇಂದು ನಾವು ಯಾಂತ್ರಿಕ ಬದುಕಲ್ಲಿ ಬದುಕ್ತಾ ಇದೀವಿ’ ಎಂದರು ಜಗ್ಗೇಶ್​.

3 / 7
‘ಅಂದು ತುಂಬಾ ಭಾವುಕರಾಗುತ್ತಿದ್ದೆವು. ಅಂದು ಸೆಟ್​ಗೆ ಬಂದರೆ ಅದೆಷ್ಟೇ ದೊಡ್ಡ ನಟ ಇರಲಿ ಎಲ್ಲರನ್ನೂ ಮಾತನಾಡಿಸುತ್ತಿದ್ದರು. ಸೆಟ್​ನಲ್ಲಿ ಯಾರಿಗಾದರೂ ಸಂಭಾವನೆ ಸಿಕ್ಕಿಲ್ಲ ಎಂದರೆ ಕೆಲ ನಟರು ನಿರ್ಮಾಪಕರಿಗೆ ನೇರವಾಗಿ ಕ್ಲಾಸ್​ ತೆಗೆದುಕೊಳ್ಳುತ್ತಿದ್ದರು’ ಎಂದಿದ್ದಾರೆ ಜಗ್ಗೇಶ್​.

‘ಅಂದು ತುಂಬಾ ಭಾವುಕರಾಗುತ್ತಿದ್ದೆವು. ಅಂದು ಸೆಟ್​ಗೆ ಬಂದರೆ ಅದೆಷ್ಟೇ ದೊಡ್ಡ ನಟ ಇರಲಿ ಎಲ್ಲರನ್ನೂ ಮಾತನಾಡಿಸುತ್ತಿದ್ದರು. ಸೆಟ್​ನಲ್ಲಿ ಯಾರಿಗಾದರೂ ಸಂಭಾವನೆ ಸಿಕ್ಕಿಲ್ಲ ಎಂದರೆ ಕೆಲ ನಟರು ನಿರ್ಮಾಪಕರಿಗೆ ನೇರವಾಗಿ ಕ್ಲಾಸ್​ ತೆಗೆದುಕೊಳ್ಳುತ್ತಿದ್ದರು’ ಎಂದಿದ್ದಾರೆ ಜಗ್ಗೇಶ್​.

4 / 7
‘ಗಣೇಶ ಹಬ್ಬ ಬಂದಿತ್ತು. ಮನೆಯಲ್ಲಿ ಹಣ ಇದೆಯೇ ಎಂದು ಹೆಂಡತಿ ಕೇಳಿದೆ. ಹೆಂಡತಿ ಇಲ್ಲ ಎಂದಳು. ಈ ವೇಳೆ 200 ರೂಪಾಯಿ ಕೊಡಿ ಎಂದು ರವಿಚಂದ್ರನ್​ಗೆ ಕೇಳಿದೆ. ಆಗ ಅವರು ಐದುನೂರು ಕೊಟ್ಟರು’ ಎಂದು ಹಳೆಯ ದಿನಗಳನ್ನು ಅವರು ನೆನೆದಿದ್ದಾರೆ.

‘ಗಣೇಶ ಹಬ್ಬ ಬಂದಿತ್ತು. ಮನೆಯಲ್ಲಿ ಹಣ ಇದೆಯೇ ಎಂದು ಹೆಂಡತಿ ಕೇಳಿದೆ. ಹೆಂಡತಿ ಇಲ್ಲ ಎಂದಳು. ಈ ವೇಳೆ 200 ರೂಪಾಯಿ ಕೊಡಿ ಎಂದು ರವಿಚಂದ್ರನ್​ಗೆ ಕೇಳಿದೆ. ಆಗ ಅವರು ಐದುನೂರು ಕೊಟ್ಟರು’ ಎಂದು ಹಳೆಯ ದಿನಗಳನ್ನು ಅವರು ನೆನೆದಿದ್ದಾರೆ.

5 / 7
‘ಕೊವಿಡ್​ ನಿಧಾನವಾಗಿ ಕಡಿಮೆ ಆಗುತ್ತಿದೆ. ಈ ಬಗ್ಗೆ ಮಾತನಾಡಿರುವ ಅವರು, ಈಗ ಕಷ್ಟಕಾಲ ಮುಗಿದು ಸಿನಿಮಾ ಶುರುವಾಗಿದೆ. ಈ ವರ್ಷ ನಾಲ್ಕು ಸಿನಿಮಾ ಸಿಕ್ತು. ಅದು ದೊಡ್ಡ ಬಜೆಟ್​ ಚಿತ್ರ ಅನ್ನೋದು ಖುಷಿಯ ವಿಚಾರ’ ಎಂದರು ಜಗ್ಗೇಶ್​.

‘ಕೊವಿಡ್​ ನಿಧಾನವಾಗಿ ಕಡಿಮೆ ಆಗುತ್ತಿದೆ. ಈ ಬಗ್ಗೆ ಮಾತನಾಡಿರುವ ಅವರು, ಈಗ ಕಷ್ಟಕಾಲ ಮುಗಿದು ಸಿನಿಮಾ ಶುರುವಾಗಿದೆ. ಈ ವರ್ಷ ನಾಲ್ಕು ಸಿನಿಮಾ ಸಿಕ್ತು. ಅದು ದೊಡ್ಡ ಬಜೆಟ್​ ಚಿತ್ರ ಅನ್ನೋದು ಖುಷಿಯ ವಿಚಾರ’ ಎಂದರು ಜಗ್ಗೇಶ್​.

6 / 7
ರಂಗನಾಯಕ ಸಿನಿಮಾ ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿದೆ. ಅದ್ದೂರಿ ಸೆಟ್​ ಕೂಡ ಹಾಕಲಾಗಿದೆ.

ರಂಗನಾಯಕ ಸಿನಿಮಾ ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿದೆ. ಅದ್ದೂರಿ ಸೆಟ್​ ಕೂಡ ಹಾಕಲಾಗಿದೆ.

7 / 7
Follow us