
ನಟ ಜಗ್ಗೇಶ್ ಅವರು ತುಂಬಾನೇ ಕಷ್ಟದಿಂದ ಚಿತ್ರರಂಗಕ್ಕೆ ಬಂದವರು. ಚಿತ್ರರಂಗದ ಆರಂಭದ ದಿನಗಳಲ್ಲೂ ಅವರು ಕಷ್ಟಗಳನ್ನು ಎದುರಿಸಿದ್ದರು. ಈಗ ಅವರ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ.

‘ಮಠ’ ಗುರುಪ್ರಸಾದ್ ಹಾಗೂ ಜಗ್ಗೇಶ್ ಕಾಂಬಿನೇಷನ್ನಲ್ಲಿ ಈಗ ‘ರಂಗನಾಯಕ’ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡೋಕೆ ಇಂದು ಸುದ್ದಿಗೋಷ್ಠಿ ಕರೆಯಲಾಗಿತ್ತು.

‘ನಾನು ಮತ್ತೆ ಸೆಟ್ಗೆ ಮರಳಿದ್ದೇನೆ. ಈ ಖುಷಿ ಎರಡು ವರ್ಷದಿಂದ ನಿಂತು ಹೋಗಿತ್ತು. ಬ್ಯೂಟಿಫುಲ್ ಇಂಡಸ್ಟ್ರಿಯಲ್ಲಿ ನಾವಿದೀವಿ ಎನ್ನುವ ಹೆಮ್ಮೆ ನನಗೆ ಇದೆ. ಆದರೆ, ಈ ಕೊರೊನಾದಿಂದ ತಾಂತ್ರಿಕ ವರ್ಗದವರಿಗೆ ಎಷ್ಟು ತೊಂದರೆ ಆಗಿರಬಹುದು ಎಂದು ಯೋಚಿಸುತ್ತಿದ್ದೆ. ಇಂದು ನಾವು ಯಾಂತ್ರಿಕ ಬದುಕಲ್ಲಿ ಬದುಕ್ತಾ ಇದೀವಿ’ ಎಂದರು ಜಗ್ಗೇಶ್.

‘ಅಂದು ತುಂಬಾ ಭಾವುಕರಾಗುತ್ತಿದ್ದೆವು. ಅಂದು ಸೆಟ್ಗೆ ಬಂದರೆ ಅದೆಷ್ಟೇ ದೊಡ್ಡ ನಟ ಇರಲಿ ಎಲ್ಲರನ್ನೂ ಮಾತನಾಡಿಸುತ್ತಿದ್ದರು. ಸೆಟ್ನಲ್ಲಿ ಯಾರಿಗಾದರೂ ಸಂಭಾವನೆ ಸಿಕ್ಕಿಲ್ಲ ಎಂದರೆ ಕೆಲ ನಟರು ನಿರ್ಮಾಪಕರಿಗೆ ನೇರವಾಗಿ ಕ್ಲಾಸ್ ತೆಗೆದುಕೊಳ್ಳುತ್ತಿದ್ದರು’ ಎಂದಿದ್ದಾರೆ ಜಗ್ಗೇಶ್.

‘ಗಣೇಶ ಹಬ್ಬ ಬಂದಿತ್ತು. ಮನೆಯಲ್ಲಿ ಹಣ ಇದೆಯೇ ಎಂದು ಹೆಂಡತಿ ಕೇಳಿದೆ. ಹೆಂಡತಿ ಇಲ್ಲ ಎಂದಳು. ಈ ವೇಳೆ 200 ರೂಪಾಯಿ ಕೊಡಿ ಎಂದು ರವಿಚಂದ್ರನ್ಗೆ ಕೇಳಿದೆ. ಆಗ ಅವರು ಐದುನೂರು ಕೊಟ್ಟರು’ ಎಂದು ಹಳೆಯ ದಿನಗಳನ್ನು ಅವರು ನೆನೆದಿದ್ದಾರೆ.

‘ಕೊವಿಡ್ ನಿಧಾನವಾಗಿ ಕಡಿಮೆ ಆಗುತ್ತಿದೆ. ಈ ಬಗ್ಗೆ ಮಾತನಾಡಿರುವ ಅವರು, ಈಗ ಕಷ್ಟಕಾಲ ಮುಗಿದು ಸಿನಿಮಾ ಶುರುವಾಗಿದೆ. ಈ ವರ್ಷ ನಾಲ್ಕು ಸಿನಿಮಾ ಸಿಕ್ತು. ಅದು ದೊಡ್ಡ ಬಜೆಟ್ ಚಿತ್ರ ಅನ್ನೋದು ಖುಷಿಯ ವಿಚಾರ’ ಎಂದರು ಜಗ್ಗೇಶ್.

ರಂಗನಾಯಕ ಸಿನಿಮಾ ದೊಡ್ಡ ಬಜೆಟ್ನಲ್ಲಿ ಮೂಡಿ ಬರುತ್ತಿದೆ. ಅದ್ದೂರಿ ಸೆಟ್ ಕೂಡ ಹಾಕಲಾಗಿದೆ.