AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜನಾದ್ರಿ ಬೆಟ್ಟದಲ್ಲಿ ರಿಷಬ್ ಶೆಟ್ಟಿ ‘ಜೈ ಹನುಮಾನ್’ ಮುಹೂರ್ತ: ಚಿತ್ರಗಳು ಇಲ್ಲಿವೆ ನೋಡಿ

Rishab Shetty: ಕಾಂತಾರ ಚಾಪ್ಟರ್ 1 ಸೂಪರ್ ಸಕ್ಸಸ್ ಬಳಿಕ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಯವರು ಬಹುನಿರೀಕ್ಷಿತ ಜೈ ಹನುಮಾನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ಮುಹೂರ್ತ ನೆರವೇರಿದೆ. ಮುಹೂರ್ತದ ಚಿತ್ರಗಳು ಇಲ್ಲಿವೆ ನೋಡಿ...

ಮಂಜುನಾಥ ಸಿ.
|

Updated on:Feb 22, 2026 | 5:19 PM

Share
ಕಾಂತಾರ ಚಾಪ್ಟರ್ 1 ಯಶಸ್ಸಿನ ಬಳಿಕ ರಿಷಬ್ ಶೆಟ್ಟಿಯವರು ಬಹುನಿರೀಕ್ಷಿತ ಜೈ ಹನುಮಾನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ಮುಹೂರ್ತ ನೆರವೇರಿದೆ.

ಕಾಂತಾರ ಚಾಪ್ಟರ್ 1 ಯಶಸ್ಸಿನ ಬಳಿಕ ರಿಷಬ್ ಶೆಟ್ಟಿಯವರು ಬಹುನಿರೀಕ್ಷಿತ ಜೈ ಹನುಮಾನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ಮುಹೂರ್ತ ನೆರವೇರಿದೆ.

1 / 5
2 ವರ್ಷಗಳ ಹಿಂದೆ 'ಹನು-ಮ್ಯಾನ್' ಚಿತ್ರ ನಿರ್ದೇಶಿಸಿದ್ದ ಪ್ರಶಾಂತ್ ವರ್ಮಾ ಇದೀಗ ಸೀಕ್ವೆಲ್ ಸಿನಿಮಾ ಮಾಡ್ತಿದ್ದಾರೆ. ತೆಲುಗು ಚಿತ್ರರಂಗದ ಪ್ರಖ್ಯಾತ ಬ್ಯಾನರ್  ಮೈತ್ರಿ ಮೂವೀ ಮೇಕರ್ಸ್‌ನ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಟೀ ಸಿರೀಸ್ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ.

2 ವರ್ಷಗಳ ಹಿಂದೆ 'ಹನು-ಮ್ಯಾನ್' ಚಿತ್ರ ನಿರ್ದೇಶಿಸಿದ್ದ ಪ್ರಶಾಂತ್ ವರ್ಮಾ ಇದೀಗ ಸೀಕ್ವೆಲ್ ಸಿನಿಮಾ ಮಾಡ್ತಿದ್ದಾರೆ. ತೆಲುಗು ಚಿತ್ರರಂಗದ ಪ್ರಖ್ಯಾತ ಬ್ಯಾನರ್ ಮೈತ್ರಿ ಮೂವೀ ಮೇಕರ್ಸ್‌ನ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಟೀ ಸಿರೀಸ್ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ.

2 / 5
ಟೀ ಸಿರೀಸ್ ಮುಖ್ಯಸ್ಥ ಭೂಷಣ್ ಕುಮಾರ್ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದರು. ವಿತರಕ ಅನಿಲ್ ಥಡಾನಿ ಕ್ಯಾಮೆರಾಗೆ ಚಾಲನೆ ನೀಡಿದರು. ರಿಷಬ್ ಶೆಟ್ಟಿ ಜೊತೆ ಪತ್ನಿ ಪ್ರಗತಿ ಶೆಟ್ಟಿ, ನಿರ್ದೇಶಕ‌ ಪ್ರಶಾಂತ್ ವರ್ಮಾ, ನಿರ್ಮಾಪಕರಾದ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್, ನಟ ತೇಜ್ ಸಜ್ಜಾ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.‌ ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಸಿನಿಮಾಗೆ ಪೂಜೆ ಮಾಡಿರುವುದು ವಿಶೇಷ.

ಟೀ ಸಿರೀಸ್ ಮುಖ್ಯಸ್ಥ ಭೂಷಣ್ ಕುಮಾರ್ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದರು. ವಿತರಕ ಅನಿಲ್ ಥಡಾನಿ ಕ್ಯಾಮೆರಾಗೆ ಚಾಲನೆ ನೀಡಿದರು. ರಿಷಬ್ ಶೆಟ್ಟಿ ಜೊತೆ ಪತ್ನಿ ಪ್ರಗತಿ ಶೆಟ್ಟಿ, ನಿರ್ದೇಶಕ‌ ಪ್ರಶಾಂತ್ ವರ್ಮಾ, ನಿರ್ಮಾಪಕರಾದ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್, ನಟ ತೇಜ್ ಸಜ್ಜಾ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.‌ ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಸಿನಿಮಾಗೆ ಪೂಜೆ ಮಾಡಿರುವುದು ವಿಶೇಷ.

3 / 5
ಈ 'ಜೈ ಹನುಮಾನ್‌' ಸಿನಿಮಾವು ನಿರ್ದೇಶಕ ಪ್ರಶಾಂತ್ ವರ್ಮಾ ಅವರೇ ಕ್ರಿಯೇಟ್ ಮಾಡಿರುವ 'ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್' ಅಡಿಯಲ್ಲಿ ತಯಾರಾಗಲಿದೆ. ಶೀಘ್ರದಲ್ಲೇ ಶೂಟಿಂಗ್ ಶುರುವಾಗಲಿದೆ‌.

ಈ 'ಜೈ ಹನುಮಾನ್‌' ಸಿನಿಮಾವು ನಿರ್ದೇಶಕ ಪ್ರಶಾಂತ್ ವರ್ಮಾ ಅವರೇ ಕ್ರಿಯೇಟ್ ಮಾಡಿರುವ 'ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್' ಅಡಿಯಲ್ಲಿ ತಯಾರಾಗಲಿದೆ. ಶೀಘ್ರದಲ್ಲೇ ಶೂಟಿಂಗ್ ಶುರುವಾಗಲಿದೆ‌.

4 / 5
ಜೈ ಹನುಮಾನ್ ಸಿನಿಮಾಗೆ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ, ಎಸ್. ತಿರುನಾವುಕ್ಕರಸು ಛಾಯಾಗ್ರಾಹಣ, ಶ್ರೀನಾಗೇಂದ್ರ ತಂಗಳ ನಿರ್ಮಾಣ ವಿನ್ಯಾಸ ಚಿತ್ರಕ್ಕಿದೆ. ಭಾರಿ ಅದ್ಧೂರಿಯಾಗಿ ಸಿನಿಮಾ ಮೂಡಿಬರಲಿದೆ ಎನ್ನಲಾಗುತ್ತಿದೆ.

ಜೈ ಹನುಮಾನ್ ಸಿನಿಮಾಗೆ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ, ಎಸ್. ತಿರುನಾವುಕ್ಕರಸು ಛಾಯಾಗ್ರಾಹಣ, ಶ್ರೀನಾಗೇಂದ್ರ ತಂಗಳ ನಿರ್ಮಾಣ ವಿನ್ಯಾಸ ಚಿತ್ರಕ್ಕಿದೆ. ಭಾರಿ ಅದ್ಧೂರಿಯಾಗಿ ಸಿನಿಮಾ ಮೂಡಿಬರಲಿದೆ ಎನ್ನಲಾಗುತ್ತಿದೆ.

5 / 5

Published On - 5:17 pm, Sun, 22 February 26

Follow Us
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ