AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಜೊತೆ ಜೊತೆಯಲಿ ಅನಿರುದ್ಧ ತೀರ್ಥಯಾತ್ರೆ; ವೈಷ್ಣೋ ದೇವಿ ಆಶೀರ್ವಾದ ಪಡೆದ ಕುಟುಂಬ

‘ಜೊತೆ ಜೊತೆಯಲಿ’ ಧಾರಾವಾಹಿ ನಟ ಅನಿರುದ್ಧ ಅವರು ಸಖತ್​ ಬ್ಯುಸಿ ಆಗಿದ್ದಾರೆ. ಅದರ ನಡುವೆಯೂ ಅವರು ಕುಟುಂಬಕ್ಕೆ ಸಮಯ ನೀಡುತ್ತಾರೆ. ಇತ್ತೀಚೆಗೆ ಅವರು ವೈಷ್ಣೋ ದೇವಿ ಸನ್ನಿಧಿಗೆ ತೆರಳಿ ಆಶೀರ್ವಾದ ಪಡೆದುಕೊಂಡು ಬಂದಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Oct 09, 2021 | 1:57 PM

ನಟ ಅನಿರುದ್ಧ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಶೂಟಿಂಗ್​ನಲ್ಲಿ ಎಷ್ಟೇ ಬ್ಯುಸಿ ಇದ್ದರೂ ಕೂಡ ಅವರು ಪತ್ನಿ ಮತ್ತು ಮಕ್ಕಳಿಗಾಗಿ ಸಮಯ ಮೀಸಲಿಡುತ್ತಾರೆ. ಇತ್ತೀಚೆಗೆ ಮಕ್ಕಳ ಜೊತೆ ಅನಿರುದ್ಧ ತೀರ್ಥಯಾತ್ರೆ ಮಾಡಿದ್ದಾರೆ.

Jothe Jotheyali actor Anirudh visits Vaishno Devi temple with children

1 / 6
‘ನಾವು ವೈಷ್ಣೋದೇವಿಗೆ ಹೋಗಿ ಬಂದೆವು. ಕೀರ್ತಿಯವರು ಕೆಲವು ವರ್ಷಗಳ ಹಿಂದೆ ಹೋಗಿ ಬಂದಿದ್ದಾರೆ. ಈ ಬಾರಿ ನಮ್ಮ ಜೊತೆ ಬಂದಿಲ್ಲ. ಸರ್ವೇ ಜನಃ ಸುಖಿನೋ ಭವಂತು. ತಾಯಿಯ ಅನುಗ್ರಹ ನಮ್ಮೆಲ್ಲರ ಮೇಲೂ ಇರಲಿ’ ಎಂದು ಅನಿರುದ್ಧ ಪೋಸ್ಟ್​ ಮಾಡಿದ್ದಾರೆ.

Jothe Jotheyali actor Anirudh visits Vaishno Devi temple with children

2 / 6
ಅನಿರುದ್ಧ ಅವರ ಮಕ್ಕಳು ಕೂಡ ಚೂಟಿಯಾಗಿದ್ದಾರೆ. ಡ್ಯಾನ್ಸ್​ ಮತ್ತು ನಟನೆಯಲ್ಲಿ ಆಸಕ್ತಿ ಹೊಂದಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರ ಫೋಟೋ ಮತ್ತು ವಿಡಿಯೋಗಳು ಆಗಾಗ ವೈರಲ್​ ಆಗುತ್ತವೆ.

ಅನಿರುದ್ಧ ಅವರ ಮಕ್ಕಳು ಕೂಡ ಚೂಟಿಯಾಗಿದ್ದಾರೆ. ಡ್ಯಾನ್ಸ್​ ಮತ್ತು ನಟನೆಯಲ್ಲಿ ಆಸಕ್ತಿ ಹೊಂದಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರ ಫೋಟೋ ಮತ್ತು ವಿಡಿಯೋಗಳು ಆಗಾಗ ವೈರಲ್​ ಆಗುತ್ತವೆ.

3 / 6
ಜಮ್ಮು ಕಾಶ್ಮೀರದಲ್ಲಿ ವೈಷ್ಣೋ ದೇವಿ ದೇವಸ್ಥಾನ ಇದೆ. ಶೂಟಿಂಗ್​ ನಡುವೆ ಬ್ರೇಕ್​ ಪಡೆದುಕೊಂಡ ಅನಿರುದ್ಧ ಅವರು ಮಕ್ಕಳ ಜೊತೆ ಪ್ರಯಾಣ ಬೆಳೆಸಿದ್ದರು. ದೇವರ ಆಶೀರ್ವಾದ ಪಡೆದು ಮರಳಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ವೈಷ್ಣೋ ದೇವಿ ದೇವಸ್ಥಾನ ಇದೆ. ಶೂಟಿಂಗ್​ ನಡುವೆ ಬ್ರೇಕ್​ ಪಡೆದುಕೊಂಡ ಅನಿರುದ್ಧ ಅವರು ಮಕ್ಕಳ ಜೊತೆ ಪ್ರಯಾಣ ಬೆಳೆಸಿದ್ದರು. ದೇವರ ಆಶೀರ್ವಾದ ಪಡೆದು ಮರಳಿದ್ದಾರೆ.

4 / 6
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ಜೊತೆ ಜೊತೆಯಲಿ’ ಸೀರಿಯಲ್​ ಮೂಲಕ ಅನಿರುದ್ಧ ಅವರು ಹೆಚ್ಚಿನ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಅವರ ನಟನೆಗೆ ಎಲ್ಲರಿಂದಲೂ ಮೆಚ್ಚುಗೆ ಕೇಳಿಬರುತ್ತಿದೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ಜೊತೆ ಜೊತೆಯಲಿ’ ಸೀರಿಯಲ್​ ಮೂಲಕ ಅನಿರುದ್ಧ ಅವರು ಹೆಚ್ಚಿನ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಅವರ ನಟನೆಗೆ ಎಲ್ಲರಿಂದಲೂ ಮೆಚ್ಚುಗೆ ಕೇಳಿಬರುತ್ತಿದೆ.

5 / 6
ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಕಾರಣದಿಂದಲೂ ಅನಿರುದ್ಧ ಅವರು ಆಗಾಗ ಗಮನ ಸೆಳೆಯುತ್ತಾರೆ. ಬೆಂಗಳೂರು ಸೇರಿದಂತೆ ಅನೇಕ ಊರುಗಳ ಸ್ವಚ್ಚತೆಗಾಗಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಅಭಿಯಾನ ಮಾಡುತ್ತಿದ್ದಾರೆ.

ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಕಾರಣದಿಂದಲೂ ಅನಿರುದ್ಧ ಅವರು ಆಗಾಗ ಗಮನ ಸೆಳೆಯುತ್ತಾರೆ. ಬೆಂಗಳೂರು ಸೇರಿದಂತೆ ಅನೇಕ ಊರುಗಳ ಸ್ವಚ್ಚತೆಗಾಗಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಅಭಿಯಾನ ಮಾಡುತ್ತಿದ್ದಾರೆ.

6 / 6
Follow us