
ನಟ ಅನಿರುದ್ಧ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಶೂಟಿಂಗ್ನಲ್ಲಿ ಎಷ್ಟೇ ಬ್ಯುಸಿ ಇದ್ದರೂ ಕೂಡ ಅವರು ಪತ್ನಿ ಮತ್ತು ಮಕ್ಕಳಿಗಾಗಿ ಸಮಯ ಮೀಸಲಿಡುತ್ತಾರೆ. ಇತ್ತೀಚೆಗೆ ಮಕ್ಕಳ ಜೊತೆ ಅನಿರುದ್ಧ ತೀರ್ಥಯಾತ್ರೆ ಮಾಡಿದ್ದಾರೆ.

‘ನಾವು ವೈಷ್ಣೋದೇವಿಗೆ ಹೋಗಿ ಬಂದೆವು. ಕೀರ್ತಿಯವರು ಕೆಲವು ವರ್ಷಗಳ ಹಿಂದೆ ಹೋಗಿ ಬಂದಿದ್ದಾರೆ. ಈ ಬಾರಿ ನಮ್ಮ ಜೊತೆ ಬಂದಿಲ್ಲ. ಸರ್ವೇ ಜನಃ ಸುಖಿನೋ ಭವಂತು. ತಾಯಿಯ ಅನುಗ್ರಹ ನಮ್ಮೆಲ್ಲರ ಮೇಲೂ ಇರಲಿ’ ಎಂದು ಅನಿರುದ್ಧ ಪೋಸ್ಟ್ ಮಾಡಿದ್ದಾರೆ.

ಅನಿರುದ್ಧ ಅವರ ಮಕ್ಕಳು ಕೂಡ ಚೂಟಿಯಾಗಿದ್ದಾರೆ. ಡ್ಯಾನ್ಸ್ ಮತ್ತು ನಟನೆಯಲ್ಲಿ ಆಸಕ್ತಿ ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಫೋಟೋ ಮತ್ತು ವಿಡಿಯೋಗಳು ಆಗಾಗ ವೈರಲ್ ಆಗುತ್ತವೆ.

ಜಮ್ಮು ಕಾಶ್ಮೀರದಲ್ಲಿ ವೈಷ್ಣೋ ದೇವಿ ದೇವಸ್ಥಾನ ಇದೆ. ಶೂಟಿಂಗ್ ನಡುವೆ ಬ್ರೇಕ್ ಪಡೆದುಕೊಂಡ ಅನಿರುದ್ಧ ಅವರು ಮಕ್ಕಳ ಜೊತೆ ಪ್ರಯಾಣ ಬೆಳೆಸಿದ್ದರು. ದೇವರ ಆಶೀರ್ವಾದ ಪಡೆದು ಮರಳಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ಜೊತೆ ಜೊತೆಯಲಿ’ ಸೀರಿಯಲ್ ಮೂಲಕ ಅನಿರುದ್ಧ ಅವರು ಹೆಚ್ಚಿನ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಅವರ ನಟನೆಗೆ ಎಲ್ಲರಿಂದಲೂ ಮೆಚ್ಚುಗೆ ಕೇಳಿಬರುತ್ತಿದೆ.

ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಕಾರಣದಿಂದಲೂ ಅನಿರುದ್ಧ ಅವರು ಆಗಾಗ ಗಮನ ಸೆಳೆಯುತ್ತಾರೆ. ಬೆಂಗಳೂರು ಸೇರಿದಂತೆ ಅನೇಕ ಊರುಗಳ ಸ್ವಚ್ಚತೆಗಾಗಿ ಅವರು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಮಾಡುತ್ತಿದ್ದಾರೆ.