AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kadalekai Parishe: ಇಂದಿನಿಂದ ಶುರು ಐತಿಹಾಸಿಕ ಕಡಲೆಕಾಯಿ ಪರಿಷೆ; ಬಡವರ ಬಾದಾಮಿ ಸವಿಯಲು ಸಜ್ಜಾಗಿರುವ ಸಿಟಿ ಮಂದಿ!

ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಇಂದಿನ ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ಆರಂಭವಾಗಲಿದ್ದು, ದೊಡ್ಡ ಬಸವಣ್ಣನ ದೇಗುಲದಲ್ಲಿ ಅಭಿಷೇಕದೊಂದಿಗೆ ಚಾಲನೆ ಪಡೆಯಲಿದೆ. ಈ ವರ್ಷ ಐದು ದಿನಗಳ ಕಾಲ ನಡೆಯಲಿರುವ ಈ ಜಾತ್ರೆಯು ಪ್ಲಾಸ್ಟಿಕ್ ಮುಕ್ತವಾಗಿದ್ದು, ಲಕ್ಷಾಂತರ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ. ನೆರೆ ರಾಜ್ಯಗಳಿಂದಲೂ ವ್ಯಾಪಾರಿಗಳು ಆಗಮಿಸಿದ್ದು, ಬಸವನಗುಡಿ ಹಬ್ಬದ ವಾತಾವರಣದಿಂದ ಕಂಗೊಳಿಸುತ್ತಿದೆ.

ಶಾಂತಮೂರ್ತಿ
| Edited By: |

Updated on: Nov 17, 2025 | 8:27 AM

Share
ಬಸವನಗುಡಿಯ ಐತಿಹಾಸಿಕ ಕಡಲೆಕಾಯಿ ಪರಿಷೆ ಕಾರ್ತಿಕ ಮಾಸದ ಕೊನೆ ಸೋಮವಾರವಾದ ಇಂದು ಆರಂಭವಾಗಲಿದೆ. ಇಂದು ಬೆಳಗ್ಗೆ ಬಸವನಗುಡಿಯ  ಡೊಡ್ಡ ಬಸವಣ್ಣನ ದೇಗುಲದಲ್ಲಿ ಕಡಲೆಕಾಯಿ ಅಭಿಷೇಕ ಮಾಡುವ ಮೂಲಕ  ಕಡಲೆಕಾಯಿ ಪರಿಷೆಗೆ ಚಾಲನೆ ಸಿಗಲಿದೆ. ದೊಡ್ಡ ಗಣಪತಿ ಗುಡಿ, ದೊಡ್ಡ ಬಸವಣ್ಣನ ದೇಗುಲಕ್ಕೆ ನಿನ್ನೆಯಿಂದಲೇ ಭಕ್ತರು ಭೇಟಿ ನೀಡುತ್ತಿದ್ದು, ಕಡಲೆಕಾಯಿಪರಿಷೆ ಕಣ್ತುಂಬಿಕೊಳ್ಳಲು ಕಾತುರರಾಗಿದ್ದಾರೆ.

ಬಸವನಗುಡಿಯ ಐತಿಹಾಸಿಕ ಕಡಲೆಕಾಯಿ ಪರಿಷೆ ಕಾರ್ತಿಕ ಮಾಸದ ಕೊನೆ ಸೋಮವಾರವಾದ ಇಂದು ಆರಂಭವಾಗಲಿದೆ. ಇಂದು ಬೆಳಗ್ಗೆ ಬಸವನಗುಡಿಯ ಡೊಡ್ಡ ಬಸವಣ್ಣನ ದೇಗುಲದಲ್ಲಿ ಕಡಲೆಕಾಯಿ ಅಭಿಷೇಕ ಮಾಡುವ ಮೂಲಕ ಕಡಲೆಕಾಯಿ ಪರಿಷೆಗೆ ಚಾಲನೆ ಸಿಗಲಿದೆ. ದೊಡ್ಡ ಗಣಪತಿ ಗುಡಿ, ದೊಡ್ಡ ಬಸವಣ್ಣನ ದೇಗುಲಕ್ಕೆ ನಿನ್ನೆಯಿಂದಲೇ ಭಕ್ತರು ಭೇಟಿ ನೀಡುತ್ತಿದ್ದು, ಕಡಲೆಕಾಯಿಪರಿಷೆ ಕಣ್ತುಂಬಿಕೊಳ್ಳಲು ಕಾತುರರಾಗಿದ್ದಾರೆ.

1 / 5
ಪರಿಷೆಗೆ ಈಗಾಗಲೇ ಬಸವನಗುಡಿಯ ಬೀದಿಗಳು ಮಧುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ರಸ್ತೆಯ ಎರಡು ಬದಿಗಳಲ್ಲಿ ಬಡವರ ಬಾದಾಮಿ ಕಡಲೆಕಾಯಿಯ ರಾಶಿ ಹಾಜರ್ ಆಗಿದೆ. ಪ್ರತಿ ವರ್ಷ ಎರಡು ದಿನಕ್ಕೆ ಮುಗಿಯುತ್ತಿದ್ದ ಕಡಲೆಕಾಯಿ ಪರಿಷೆಯನ್ನು ಇದೇ ಮೊದಲ ಬಾರಿಗೆ ಐದು ದಿನಗಳ ಕಾಲ ನಡೆಸಲು ಮುಂದಾಗಿದ್ದು, ಈಗಾಗಲೇ ಬೇರೆ ಬೇರೆ ಭಾಗಗಳಿಂದ ಆಗಮಿಸಿರುವ ವ್ಯಾಪಾರಿಗಳು ತಮ್ಮ ತಮ್ಮ ಜಾಗ ಗುರುತಿಸಿ ಕಡಲೆಕಾಯಿ ರಾಶಿ ಹಾಕಿದ್ದಾರೆ.

ಪರಿಷೆಗೆ ಈಗಾಗಲೇ ಬಸವನಗುಡಿಯ ಬೀದಿಗಳು ಮಧುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ರಸ್ತೆಯ ಎರಡು ಬದಿಗಳಲ್ಲಿ ಬಡವರ ಬಾದಾಮಿ ಕಡಲೆಕಾಯಿಯ ರಾಶಿ ಹಾಜರ್ ಆಗಿದೆ. ಪ್ರತಿ ವರ್ಷ ಎರಡು ದಿನಕ್ಕೆ ಮುಗಿಯುತ್ತಿದ್ದ ಕಡಲೆಕಾಯಿ ಪರಿಷೆಯನ್ನು ಇದೇ ಮೊದಲ ಬಾರಿಗೆ ಐದು ದಿನಗಳ ಕಾಲ ನಡೆಸಲು ಮುಂದಾಗಿದ್ದು, ಈಗಾಗಲೇ ಬೇರೆ ಬೇರೆ ಭಾಗಗಳಿಂದ ಆಗಮಿಸಿರುವ ವ್ಯಾಪಾರಿಗಳು ತಮ್ಮ ತಮ್ಮ ಜಾಗ ಗುರುತಿಸಿ ಕಡಲೆಕಾಯಿ ರಾಶಿ ಹಾಕಿದ್ದಾರೆ.

2 / 5
ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಇಡೀ ಬಸವನಗುಡಿಯ ಸುತ್ತಮುತ್ತ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಈ ಬಾರಿ ಕಡಲೆಕಾಯಿ ಪರಿಷೆಯನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಹೊರಟಿದ್ದು, ಈಗಾಗಲೇ ಸ್ವಯಂಸೇವಕರು, ಕಾಲೇಜು ವಿದ್ಯಾರ್ಥಿಗಳು ವ್ಯಾಪಾರಿಗಳಿಗೆ ಪೇಪರ್ ಬ್ಯಾಗ್​ಗಳನ್ನು ವಿತರಿಸಿ ಪ್ಲಾಸ್ಟಿಕ್ ಬಳಸದಂತೆ ಅರಿವು ಮೂಡಿಸುತ್ತಿದ್ದಾರೆ.

ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಇಡೀ ಬಸವನಗುಡಿಯ ಸುತ್ತಮುತ್ತ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಈ ಬಾರಿ ಕಡಲೆಕಾಯಿ ಪರಿಷೆಯನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಹೊರಟಿದ್ದು, ಈಗಾಗಲೇ ಸ್ವಯಂಸೇವಕರು, ಕಾಲೇಜು ವಿದ್ಯಾರ್ಥಿಗಳು ವ್ಯಾಪಾರಿಗಳಿಗೆ ಪೇಪರ್ ಬ್ಯಾಗ್​ಗಳನ್ನು ವಿತರಿಸಿ ಪ್ಲಾಸ್ಟಿಕ್ ಬಳಸದಂತೆ ಅರಿವು ಮೂಡಿಸುತ್ತಿದ್ದಾರೆ.

3 / 5
ಕಡಲೆಕಾಯಿಪರಿಷೆಯಲ್ಲಿ ತಮಿಳುನಾಡು, ಆಂಧ್ರಪ್ರದೇಶ ಸೇರಿ ನೆರೆ ರಾಜ್ಯಗಳ ವ್ಯಾಪಾರಿಗಳು ಕೂಡ ಆಗಮಿಸಿದ್ದು, ವಿವಿಧ ಬಗೆಯ ಕಡಲೆಕಾಯಿಗಳು ಸಿಟಿಮಂದಿಯ ನಾಲಿಗೆ ರುಚಿ ಹೆಚ್ಚಿಸಲು ಸಜ್ಜಾಗಿವೆ. ಇನ್ನು ಲಕ್ಷಾಂತರ ಜನರು ಸೇರುವ ನಿರೀಕ್ಷೆ ಇರುವುದರಿಂದ ಪೊಲೀಸ್ ಇಲಾಖೆ ಕೂಡ ಭದ್ರತೆಗೆ ಸಜ್ಜಾಗಿದ್ದು, ದೇಗುಲದ ಸುತ್ತಮುತ್ತ, ಪರಿಷೆ ನಡೆಯುವ ಬೀದಿಗಳಲ್ಲಿ ಈಗಾಗಲೇ ನಿಗಾ ಇಟ್ಟಿದ್ದಾರೆ. ಇಡೀ ರಸ್ತೆಯಲ್ಲಿ ಬಗೆ ಬಗೆಯ ಮಳಿಗೆಗಳು ತಲೆ ಎತ್ತಿದ್ದು, ಜಾತ್ರೆ ಸಂಭ್ರಮಕ್ಕೆ ಮೆರುಗು ತುಂಬಲು ಸಜ್ಜಾಗಿವೆ.

ಕಡಲೆಕಾಯಿಪರಿಷೆಯಲ್ಲಿ ತಮಿಳುನಾಡು, ಆಂಧ್ರಪ್ರದೇಶ ಸೇರಿ ನೆರೆ ರಾಜ್ಯಗಳ ವ್ಯಾಪಾರಿಗಳು ಕೂಡ ಆಗಮಿಸಿದ್ದು, ವಿವಿಧ ಬಗೆಯ ಕಡಲೆಕಾಯಿಗಳು ಸಿಟಿಮಂದಿಯ ನಾಲಿಗೆ ರುಚಿ ಹೆಚ್ಚಿಸಲು ಸಜ್ಜಾಗಿವೆ. ಇನ್ನು ಲಕ್ಷಾಂತರ ಜನರು ಸೇರುವ ನಿರೀಕ್ಷೆ ಇರುವುದರಿಂದ ಪೊಲೀಸ್ ಇಲಾಖೆ ಕೂಡ ಭದ್ರತೆಗೆ ಸಜ್ಜಾಗಿದ್ದು, ದೇಗುಲದ ಸುತ್ತಮುತ್ತ, ಪರಿಷೆ ನಡೆಯುವ ಬೀದಿಗಳಲ್ಲಿ ಈಗಾಗಲೇ ನಿಗಾ ಇಟ್ಟಿದ್ದಾರೆ. ಇಡೀ ರಸ್ತೆಯಲ್ಲಿ ಬಗೆ ಬಗೆಯ ಮಳಿಗೆಗಳು ತಲೆ ಎತ್ತಿದ್ದು, ಜಾತ್ರೆ ಸಂಭ್ರಮಕ್ಕೆ ಮೆರುಗು ತುಂಬಲು ಸಜ್ಜಾಗಿವೆ.

4 / 5
 ಆಧುನಿಕತೆಯ ಭರಾಟೆ ಮಧ್ಯೆ, ಕೆಲಸ, ಜೀವನದ ಜಂಜಾಟದಲ್ಲಿ ಸುಸ್ತಾಗಿದ್ದ ಸಿಟಿಮಂದಿ ಇದೀಗ ಕಡಲೆಕಾಯಿ ಪರಿಷೆಯಲ್ಲಿ ರೌಂಡ್ ಹಾಕಿ ರಿಲ್ಯಾಕ್ಸ್ ಆಗೋಕೆ ಸಜ್ಜಾಗಿದ್ದಾರೆ. ಇತ್ತ ಕಡಲೆಕಾಯಿ ಬೆಲೆ ಬೆಳೆದು ಕಾದುಕುಳಿತ ವ್ಯಾಪಾರಿಗಳು ಕೂಡ ಲಾಭದ ನಿರೀಕ್ಷೆಯಲ್ಲಿದ್ದಾರೆ.

ಆಧುನಿಕತೆಯ ಭರಾಟೆ ಮಧ್ಯೆ, ಕೆಲಸ, ಜೀವನದ ಜಂಜಾಟದಲ್ಲಿ ಸುಸ್ತಾಗಿದ್ದ ಸಿಟಿಮಂದಿ ಇದೀಗ ಕಡಲೆಕಾಯಿ ಪರಿಷೆಯಲ್ಲಿ ರೌಂಡ್ ಹಾಕಿ ರಿಲ್ಯಾಕ್ಸ್ ಆಗೋಕೆ ಸಜ್ಜಾಗಿದ್ದಾರೆ. ಇತ್ತ ಕಡಲೆಕಾಯಿ ಬೆಲೆ ಬೆಳೆದು ಕಾದುಕುಳಿತ ವ್ಯಾಪಾರಿಗಳು ಕೂಡ ಲಾಭದ ನಿರೀಕ್ಷೆಯಲ್ಲಿದ್ದಾರೆ.

5 / 5
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ