‘ಕಮಲ್ ಶ್ರೀದೇವಿ’ ಸಿನಿಮಾಗೆ ಚಿತ್ರೀಕರಣ ಮುಕ್ತಾಯ; ಶೀರ್ಷಿಕೆಯಿಂದಲೇ ಗಮನ ಸೆಳೆದ ಚಿತ್ರ
ಸಚಿನ್ ಚೆಲುವರಾಯ ಸ್ವಾಮಿ, ರಮೇಶ್ ಇಂದಿರಾ, ಕಿಶೋರ್, ಸಂಗೀತಾ ಭಟ್ ಮುಂತಾದವರು ‘ಕಮಲ್ ಶ್ರೀದೇವಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರೀಕರಣ ಮುಗಿಸಿಕೊಂಡಿರುವ ಈ ಚಿತ್ರತಂಡ ಈಗ ಪ್ರಚಾರ ಕಾರ್ಯದ ಕಡೆಗೆ ಗಮನ ಹರಿಸಿದೆ. ಸುನೀಲ್ ಅವರು ‘ಕಮಲ್ ಶ್ರೀದೇವಿ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.
Updated on: Jul 07, 2025 | 4:52 PM

‘ಕಮಲ್ ಶ್ರೀದೇವಿ’ ಸಿನಿಮಾಗೆ 63 ದಿನಗಳ ಚಿತ್ರೀಕರಣ ಕಾಲ ಚಿತ್ರೀಕರಣ ಮಾಡಲಾಗಿದೆ. ಮೈಸೂರಿನಲ್ಲಿ ಶೂಟಿಂಗ್ ಮುಕ್ತಾಯ ಆಗಿದೆ. ಬಳಿಕ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯಕ್ಕೆ ಚಿತ್ರತಂಡದಿಂದ ಚಾಲನೆ ನೀಡಲಾಗಿದೆ.

ಈ ಸಿನಿಮಾದ ನಾಯಕ ನಟ ಸಚಿನ್ ಚೆಲುವರಾಯ ಸ್ವಾಮಿ, ಅವರ ಪತ್ನಿ ಶ್ರೀಮತಿ ಆಕಾಂಕ್ಷಾ ಪಟಮಕ್ಕಿ, ಸಹ-ನಿರ್ಮಾಪಕ ರಾಜವರ್ಧನ್, ನಿರ್ದೇಶಕರಾದ ಸುನೀಲ್ ಮತ್ತು ಚಿತ್ರತಂಡದವರು ಈ ವೇಳೆ ಭಾಗಿಯಾಗಿದ್ದರು. ‘ಕಮಲ್ ಶ್ರೀದೇವಿ’ ಬಿಡುಗಡೆಗೆ ತಯಾರಿ ನಡೆಯುತ್ತಿದೆ.

ಎನ್. ಚೆಲುವರಾಯ ಸ್ವಾಮಿ ಅವರು ‘ಕಮಲ್ ಶ್ರೀದೇವಿ’ ಸಿನಿಮಾವನ್ನು ಅರ್ಪಿಸಲಿದ್ದಾರೆ. ‘ಸ್ವರ್ಣಾಂಬಿಕ ಪಿಕ್ಚರ್ಸ್ ಬ್ಯಾನರ್’ ಮೂಲಕ ಬಿ.ಕೆ. ಧನಲಕ್ಷ್ಮೀ ಅವರು ನಿರ್ಮಾಣ ಮಾಡುತ್ತಿದ್ದಾರೆ. Barnswallow ಕಂಪನಿಯ ರಾಜವರ್ಧನ್ ಅವರು ಸಹ-ನಿರ್ಮಾಪಕರಾಗಿದ್ದಾರೆ.

ಸಚಿನ್ ಚೆಲುವರಾಯ ಸ್ವಾಮಿ ಜೊತೆಗೆ ಈ ಚಿತ್ರದಲ್ಲಿ ಕಿಶೋರ್, ಸಂಗೀತಾ ಭಟ್, ರಮೇಶ್ ಇಂದಿರಾ ಸೇರಿದಂತೆ ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಸಂಪೂರ್ಣ ಕ್ರಿಯೇಟಿವ್ ಜವಾಬ್ದಾರಿಯನ್ನು ರಾಜವರ್ಧನ್ ಹೊತ್ತಿಕೊಂಡಿದ್ದಾರೆ. ಈ ಚಿತ್ರದ ಶೀರ್ಷಿಕೆ ಗಮನ ಸೆಳೆದಿದೆ.

ಟೈಟಲ್ ಕಾರಣಕ್ಕೆ ‘ಕಮಲ್ ಶ್ರೀದೇವಿ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಮೊದಲು ಕ್ರಿಯೇಟೀವ್ ಕಾನ್ಸೆಪ್ಟ್ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ‘ಎಲ್ಲವೂ ಅಂದುಕೊಂಡಂತೆ ನಡೆದಿದೆ. ಆಗಸ್ಟ್, ಸೆಪ್ಟೆಂಬರ್ ವೇಳೆಗೆ ರಿಲೀಸ್ ಮಾಡುತ್ತೇವೆ’ ಎಂದಿದ್ದಾರೆ ಚಿತ್ರತಂಡದವರು.

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್ ಇಂಟರ್ನೆಟ್) ಸಂಸ್ಥೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್ ಸಾಹಿತ್ಯದ ವಿದ್ಯಾರ್ಥಿ.
Read More




