AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಮರ್ಜೆನ್ಸಿ’ ಬಿಡುಗಡೆ ಮತ್ತೆ ಮುಂದಕ್ಕೆ; ಕಂಗನಾ ಸಿನಿಮಾಗೆ ಹಲವು ಅಡೆತಡೆ

ಕಂಗನಾ ರಣಾವತ್​ ಅವರು ‘ಎಮರ್ಜೆನ್ಸಿ’ ಚಿತ್ರದ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಿಡುಗಡೆಗೂ ಮುನ್ನವೇ ಈ ಸಿನಿಮಾ ವಿವಾದಕ್ಕೆ ಕಾರಣ ಆಗಿದೆ. ಸೆ.6ಕ್ಕೆ ಈ ಚಿತ್ರ ರಿಲೀಸ್​ ಆಗುವುದು ಅನುಮಾನ ಎನ್ನಲಾಗಿದೆ. ಸೆನ್ಸಾರ್​ ಪ್ರಮಾಣ ಪತ್ರ ಸಿಗುವುದು ತಡವಾಗಿದೆ. ಅಲ್ಲದೇ ಸಿಖ್​ ಸಮುದಾಯದಿಂದಲೂ ‘ಎಮರ್ಜೆನ್ಸಿ’ ಸಿನಿಮಾದ ಬಿಡುಗಡೆಗೆ ವಿರೋಧ ವ್ಯಕ್ತವಾಗುತ್ತಿದೆ.

ಮದನ್​ ಕುಮಾರ್​
|

Updated on: Sep 01, 2024 | 9:34 PM

Share
ರಣಾವತ್​ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ಅಂತಿಮವಾಗಿ ಸೆಪ್ಟೆಂಬರ್​ 6ರಂದು ತೆರೆಕಾಣಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಈಗ ಒಂದು ಬ್ಯಾಡ್​ ನ್ಯೂಸ್​ ಕೇಳಿಬಂದಿದೆ. ‘ಎಮರ್ಜೆನ್ಸಿ’ ಸಿನಿಮಾದ ರಿಲೀಸ್​ ದಿನಾಂಕ ಮತ್ತೆ ಮುಂದಕ್ಕೆ ಹೋಗಿದೆ ಎಂಬ ಮಾಹಿತಿ ಸಿಕ್ಕಿದೆ. ಈ ಚಿತ್ರಕ್ಕೆ ಅನೇಕ ಅಡೆತಡೆಗಳು ಎದುರಾಗುತ್ತಿವೆ.

ರಣಾವತ್​ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ಅಂತಿಮವಾಗಿ ಸೆಪ್ಟೆಂಬರ್​ 6ರಂದು ತೆರೆಕಾಣಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಈಗ ಒಂದು ಬ್ಯಾಡ್​ ನ್ಯೂಸ್​ ಕೇಳಿಬಂದಿದೆ. ‘ಎಮರ್ಜೆನ್ಸಿ’ ಸಿನಿಮಾದ ರಿಲೀಸ್​ ದಿನಾಂಕ ಮತ್ತೆ ಮುಂದಕ್ಕೆ ಹೋಗಿದೆ ಎಂಬ ಮಾಹಿತಿ ಸಿಕ್ಕಿದೆ. ಈ ಚಿತ್ರಕ್ಕೆ ಅನೇಕ ಅಡೆತಡೆಗಳು ಎದುರಾಗುತ್ತಿವೆ.

1 / 5
ಈಗಾಗಲೇ ತಿಳಿದಿರುವಂತೆ ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇಂದಿರಾ ಗಾಂಧಿ ಕುರಿತಾದ ಕಥೆ ಇದೆ. ತುರ್ತು ಪರಿಸ್ಥಿತಿಯ ದಿನಗಳನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದೆ. ಇದು ವಿವಾದಾತ್ಮಕ ವಿಷಯ ಆದ್ದರಿಂದ ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡುವುದು ಕಷ್ಟ ಆಗುತ್ತಿದೆ. ಸಿನಿಮಾ ರಿಲೀಸ್​ ಬಳಿಕ ಎದುರಾಗಬಹುದಾದ ಸಮಸ್ಯೆಗಳನ್ನು ತಪ್ಪಿಸಲು ಸೆನ್ಸಾರ್​ ಮಂಡಳಿ ಈಗಲೇ ಎಚ್ಚರಿಕೆ ವಹಿಸುತ್ತಿದೆ.

ಈಗಾಗಲೇ ತಿಳಿದಿರುವಂತೆ ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇಂದಿರಾ ಗಾಂಧಿ ಕುರಿತಾದ ಕಥೆ ಇದೆ. ತುರ್ತು ಪರಿಸ್ಥಿತಿಯ ದಿನಗಳನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದೆ. ಇದು ವಿವಾದಾತ್ಮಕ ವಿಷಯ ಆದ್ದರಿಂದ ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡುವುದು ಕಷ್ಟ ಆಗುತ್ತಿದೆ. ಸಿನಿಮಾ ರಿಲೀಸ್​ ಬಳಿಕ ಎದುರಾಗಬಹುದಾದ ಸಮಸ್ಯೆಗಳನ್ನು ತಪ್ಪಿಸಲು ಸೆನ್ಸಾರ್​ ಮಂಡಳಿ ಈಗಲೇ ಎಚ್ಚರಿಕೆ ವಹಿಸುತ್ತಿದೆ.

2 / 5
ಸೆನ್ಸಾರ್​ ಮಂಡಳಿಯವರು ‘ಎಮರ್ಜೆನ್ಸಿ’ ಚಿತ್ರತಂಡಕ್ಕೆ ಒಂದಷ್ಟು ಸೂಚನೆಗಳನ್ನು ನೀಡಿದ್ದಾರೆ. ಕೆಲವು ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚಿಸಲಾಗಿದೆ. ಅಲ್ಲದೇ, ಸಿನಿಮಾಗೆ ಯಾವ ಪ್ರಮಾಣ ಪತ್ರ ನೀಡಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಕೆಲವು ಸ್ಪಷ್ಟನೆಗಳು ಬೇಕಿರುವುದರಿಂದ ಚಿತ್ರತಂಡಕ್ಕೆ ನೋಟಿಸ್​ ನೀಡುವುದು ಬಾಕಿ ಇದೆ.

ಸೆನ್ಸಾರ್​ ಮಂಡಳಿಯವರು ‘ಎಮರ್ಜೆನ್ಸಿ’ ಚಿತ್ರತಂಡಕ್ಕೆ ಒಂದಷ್ಟು ಸೂಚನೆಗಳನ್ನು ನೀಡಿದ್ದಾರೆ. ಕೆಲವು ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚಿಸಲಾಗಿದೆ. ಅಲ್ಲದೇ, ಸಿನಿಮಾಗೆ ಯಾವ ಪ್ರಮಾಣ ಪತ್ರ ನೀಡಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಕೆಲವು ಸ್ಪಷ್ಟನೆಗಳು ಬೇಕಿರುವುದರಿಂದ ಚಿತ್ರತಂಡಕ್ಕೆ ನೋಟಿಸ್​ ನೀಡುವುದು ಬಾಕಿ ಇದೆ.

3 / 5
ಆ ನೋಟಿಸ್​ಗೆ ಚಿತ್ರತಂಡದವರು ಉತ್ತರ ನೀಡಬೇಕಿದೆ. ಅಷ್ಟರ ನಂತರ ಸೆನ್ಸಾರ್​ ಮಂಡಳಿಯಿಂದ ಬದಲಾವಣೆ ಸೂಚಿಸಿದರೆ ಸೆಪ್ಟೆಂಬರ್​ 6ರೊಳಗೆ ಕೆಲಸ ಪೂರ್ಣಗೊಳ್ಳುವುದು ಕಷ್ಟ ಆಗಲಿದೆ. ಈ ಕಾರಣದಿಂದ ಸಿನಿಮಾದ ಬಿಡುಗಡೆಯನ್ನು ಮುಂದೂಡುವುದು ಅನಿವಾರ್ಯ ಎನ್ನಲಾಗಿದೆ. ‘ಎಮರ್ಜೆನ್ಸಿ’ ಸಿನಿಮಾಗೆ ಸಿಖ್​ ಸಮುದಾಯದವರಿಂದಲೂ ಆಕ್ಷೇಪ ವ್ಯಕ್ತವಾಗಿದೆ.

ಆ ನೋಟಿಸ್​ಗೆ ಚಿತ್ರತಂಡದವರು ಉತ್ತರ ನೀಡಬೇಕಿದೆ. ಅಷ್ಟರ ನಂತರ ಸೆನ್ಸಾರ್​ ಮಂಡಳಿಯಿಂದ ಬದಲಾವಣೆ ಸೂಚಿಸಿದರೆ ಸೆಪ್ಟೆಂಬರ್​ 6ರೊಳಗೆ ಕೆಲಸ ಪೂರ್ಣಗೊಳ್ಳುವುದು ಕಷ್ಟ ಆಗಲಿದೆ. ಈ ಕಾರಣದಿಂದ ಸಿನಿಮಾದ ಬಿಡುಗಡೆಯನ್ನು ಮುಂದೂಡುವುದು ಅನಿವಾರ್ಯ ಎನ್ನಲಾಗಿದೆ. ‘ಎಮರ್ಜೆನ್ಸಿ’ ಸಿನಿಮಾಗೆ ಸಿಖ್​ ಸಮುದಾಯದವರಿಂದಲೂ ಆಕ್ಷೇಪ ವ್ಯಕ್ತವಾಗಿದೆ.

4 / 5
ಇಂದಿರಾ ಗಾಂಧಿ ಹತ್ಯೆ ಮತ್ತು ಪಂಜಾಬ್​ ಗಲಭೆ ಬಗ್ಗೆ ಸಿನಿಮಾದಲ್ಲಿ ತೋರಿಸಬಾರದು ಎಂಬ ಒತ್ತಾಯ ಕೇಳಿಬಂದಿದೆ ಎಂದು ಸ್ವತಃ ಕಂಗನಾ ಟ್ವೀಟ್​ ಮಾಡಿದ್ದಾರೆ. ಟ್ರೇಲರ್​ ಬಿಡುಗಡೆ ಆದ ಬಳಿಕ ಈ ಚಿತ್ರಕ್ಕೆ ಸಿಖ್​ ಸಮುದಾಯದವರ ವಿರೋಧ ಹೆಚ್ಚಾಯಿತು. ಈ ಬಗ್ಗೆ ಕೋರ್ಟ್​ನಲ್ಲೂ ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾದ ರಿಲೀಸ್​ ಇನ್ನಷ್ಟು ತಡವಾಗಲಿದೆ. ಸಿನಿಮಾದ ಹೊಸ ರಿಲೀಸ್​ ದಿನಾಂಕ ತಿಳಿಯಲು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇಂದಿರಾ ಗಾಂಧಿ ಹತ್ಯೆ ಮತ್ತು ಪಂಜಾಬ್​ ಗಲಭೆ ಬಗ್ಗೆ ಸಿನಿಮಾದಲ್ಲಿ ತೋರಿಸಬಾರದು ಎಂಬ ಒತ್ತಾಯ ಕೇಳಿಬಂದಿದೆ ಎಂದು ಸ್ವತಃ ಕಂಗನಾ ಟ್ವೀಟ್​ ಮಾಡಿದ್ದಾರೆ. ಟ್ರೇಲರ್​ ಬಿಡುಗಡೆ ಆದ ಬಳಿಕ ಈ ಚಿತ್ರಕ್ಕೆ ಸಿಖ್​ ಸಮುದಾಯದವರ ವಿರೋಧ ಹೆಚ್ಚಾಯಿತು. ಈ ಬಗ್ಗೆ ಕೋರ್ಟ್​ನಲ್ಲೂ ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾದ ರಿಲೀಸ್​ ಇನ್ನಷ್ಟು ತಡವಾಗಲಿದೆ. ಸಿನಿಮಾದ ಹೊಸ ರಿಲೀಸ್​ ದಿನಾಂಕ ತಿಳಿಯಲು ಫ್ಯಾನ್ಸ್​ ಕಾಯುತ್ತಿದ್ದಾರೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ