AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಮರ್ಜೆನ್ಸಿ’ ಬಿಡುಗಡೆ ಮತ್ತೆ ಮುಂದಕ್ಕೆ; ಕಂಗನಾ ಸಿನಿಮಾಗೆ ಹಲವು ಅಡೆತಡೆ

ಕಂಗನಾ ರಣಾವತ್​ ಅವರು ‘ಎಮರ್ಜೆನ್ಸಿ’ ಚಿತ್ರದ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಿಡುಗಡೆಗೂ ಮುನ್ನವೇ ಈ ಸಿನಿಮಾ ವಿವಾದಕ್ಕೆ ಕಾರಣ ಆಗಿದೆ. ಸೆ.6ಕ್ಕೆ ಈ ಚಿತ್ರ ರಿಲೀಸ್​ ಆಗುವುದು ಅನುಮಾನ ಎನ್ನಲಾಗಿದೆ. ಸೆನ್ಸಾರ್​ ಪ್ರಮಾಣ ಪತ್ರ ಸಿಗುವುದು ತಡವಾಗಿದೆ. ಅಲ್ಲದೇ ಸಿಖ್​ ಸಮುದಾಯದಿಂದಲೂ ‘ಎಮರ್ಜೆನ್ಸಿ’ ಸಿನಿಮಾದ ಬಿಡುಗಡೆಗೆ ವಿರೋಧ ವ್ಯಕ್ತವಾಗುತ್ತಿದೆ.

ಮದನ್​ ಕುಮಾರ್​
|

Updated on: Sep 01, 2024 | 9:34 PM

Share
ರಣಾವತ್​ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ಅಂತಿಮವಾಗಿ ಸೆಪ್ಟೆಂಬರ್​ 6ರಂದು ತೆರೆಕಾಣಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಈಗ ಒಂದು ಬ್ಯಾಡ್​ ನ್ಯೂಸ್​ ಕೇಳಿಬಂದಿದೆ. ‘ಎಮರ್ಜೆನ್ಸಿ’ ಸಿನಿಮಾದ ರಿಲೀಸ್​ ದಿನಾಂಕ ಮತ್ತೆ ಮುಂದಕ್ಕೆ ಹೋಗಿದೆ ಎಂಬ ಮಾಹಿತಿ ಸಿಕ್ಕಿದೆ. ಈ ಚಿತ್ರಕ್ಕೆ ಅನೇಕ ಅಡೆತಡೆಗಳು ಎದುರಾಗುತ್ತಿವೆ.

ರಣಾವತ್​ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ಅಂತಿಮವಾಗಿ ಸೆಪ್ಟೆಂಬರ್​ 6ರಂದು ತೆರೆಕಾಣಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಈಗ ಒಂದು ಬ್ಯಾಡ್​ ನ್ಯೂಸ್​ ಕೇಳಿಬಂದಿದೆ. ‘ಎಮರ್ಜೆನ್ಸಿ’ ಸಿನಿಮಾದ ರಿಲೀಸ್​ ದಿನಾಂಕ ಮತ್ತೆ ಮುಂದಕ್ಕೆ ಹೋಗಿದೆ ಎಂಬ ಮಾಹಿತಿ ಸಿಕ್ಕಿದೆ. ಈ ಚಿತ್ರಕ್ಕೆ ಅನೇಕ ಅಡೆತಡೆಗಳು ಎದುರಾಗುತ್ತಿವೆ.

1 / 5
ಈಗಾಗಲೇ ತಿಳಿದಿರುವಂತೆ ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇಂದಿರಾ ಗಾಂಧಿ ಕುರಿತಾದ ಕಥೆ ಇದೆ. ತುರ್ತು ಪರಿಸ್ಥಿತಿಯ ದಿನಗಳನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದೆ. ಇದು ವಿವಾದಾತ್ಮಕ ವಿಷಯ ಆದ್ದರಿಂದ ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡುವುದು ಕಷ್ಟ ಆಗುತ್ತಿದೆ. ಸಿನಿಮಾ ರಿಲೀಸ್​ ಬಳಿಕ ಎದುರಾಗಬಹುದಾದ ಸಮಸ್ಯೆಗಳನ್ನು ತಪ್ಪಿಸಲು ಸೆನ್ಸಾರ್​ ಮಂಡಳಿ ಈಗಲೇ ಎಚ್ಚರಿಕೆ ವಹಿಸುತ್ತಿದೆ.

ಈಗಾಗಲೇ ತಿಳಿದಿರುವಂತೆ ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇಂದಿರಾ ಗಾಂಧಿ ಕುರಿತಾದ ಕಥೆ ಇದೆ. ತುರ್ತು ಪರಿಸ್ಥಿತಿಯ ದಿನಗಳನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದೆ. ಇದು ವಿವಾದಾತ್ಮಕ ವಿಷಯ ಆದ್ದರಿಂದ ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡುವುದು ಕಷ್ಟ ಆಗುತ್ತಿದೆ. ಸಿನಿಮಾ ರಿಲೀಸ್​ ಬಳಿಕ ಎದುರಾಗಬಹುದಾದ ಸಮಸ್ಯೆಗಳನ್ನು ತಪ್ಪಿಸಲು ಸೆನ್ಸಾರ್​ ಮಂಡಳಿ ಈಗಲೇ ಎಚ್ಚರಿಕೆ ವಹಿಸುತ್ತಿದೆ.

2 / 5
ಸೆನ್ಸಾರ್​ ಮಂಡಳಿಯವರು ‘ಎಮರ್ಜೆನ್ಸಿ’ ಚಿತ್ರತಂಡಕ್ಕೆ ಒಂದಷ್ಟು ಸೂಚನೆಗಳನ್ನು ನೀಡಿದ್ದಾರೆ. ಕೆಲವು ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚಿಸಲಾಗಿದೆ. ಅಲ್ಲದೇ, ಸಿನಿಮಾಗೆ ಯಾವ ಪ್ರಮಾಣ ಪತ್ರ ನೀಡಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಕೆಲವು ಸ್ಪಷ್ಟನೆಗಳು ಬೇಕಿರುವುದರಿಂದ ಚಿತ್ರತಂಡಕ್ಕೆ ನೋಟಿಸ್​ ನೀಡುವುದು ಬಾಕಿ ಇದೆ.

ಸೆನ್ಸಾರ್​ ಮಂಡಳಿಯವರು ‘ಎಮರ್ಜೆನ್ಸಿ’ ಚಿತ್ರತಂಡಕ್ಕೆ ಒಂದಷ್ಟು ಸೂಚನೆಗಳನ್ನು ನೀಡಿದ್ದಾರೆ. ಕೆಲವು ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚಿಸಲಾಗಿದೆ. ಅಲ್ಲದೇ, ಸಿನಿಮಾಗೆ ಯಾವ ಪ್ರಮಾಣ ಪತ್ರ ನೀಡಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಕೆಲವು ಸ್ಪಷ್ಟನೆಗಳು ಬೇಕಿರುವುದರಿಂದ ಚಿತ್ರತಂಡಕ್ಕೆ ನೋಟಿಸ್​ ನೀಡುವುದು ಬಾಕಿ ಇದೆ.

3 / 5
ಆ ನೋಟಿಸ್​ಗೆ ಚಿತ್ರತಂಡದವರು ಉತ್ತರ ನೀಡಬೇಕಿದೆ. ಅಷ್ಟರ ನಂತರ ಸೆನ್ಸಾರ್​ ಮಂಡಳಿಯಿಂದ ಬದಲಾವಣೆ ಸೂಚಿಸಿದರೆ ಸೆಪ್ಟೆಂಬರ್​ 6ರೊಳಗೆ ಕೆಲಸ ಪೂರ್ಣಗೊಳ್ಳುವುದು ಕಷ್ಟ ಆಗಲಿದೆ. ಈ ಕಾರಣದಿಂದ ಸಿನಿಮಾದ ಬಿಡುಗಡೆಯನ್ನು ಮುಂದೂಡುವುದು ಅನಿವಾರ್ಯ ಎನ್ನಲಾಗಿದೆ. ‘ಎಮರ್ಜೆನ್ಸಿ’ ಸಿನಿಮಾಗೆ ಸಿಖ್​ ಸಮುದಾಯದವರಿಂದಲೂ ಆಕ್ಷೇಪ ವ್ಯಕ್ತವಾಗಿದೆ.

ಆ ನೋಟಿಸ್​ಗೆ ಚಿತ್ರತಂಡದವರು ಉತ್ತರ ನೀಡಬೇಕಿದೆ. ಅಷ್ಟರ ನಂತರ ಸೆನ್ಸಾರ್​ ಮಂಡಳಿಯಿಂದ ಬದಲಾವಣೆ ಸೂಚಿಸಿದರೆ ಸೆಪ್ಟೆಂಬರ್​ 6ರೊಳಗೆ ಕೆಲಸ ಪೂರ್ಣಗೊಳ್ಳುವುದು ಕಷ್ಟ ಆಗಲಿದೆ. ಈ ಕಾರಣದಿಂದ ಸಿನಿಮಾದ ಬಿಡುಗಡೆಯನ್ನು ಮುಂದೂಡುವುದು ಅನಿವಾರ್ಯ ಎನ್ನಲಾಗಿದೆ. ‘ಎಮರ್ಜೆನ್ಸಿ’ ಸಿನಿಮಾಗೆ ಸಿಖ್​ ಸಮುದಾಯದವರಿಂದಲೂ ಆಕ್ಷೇಪ ವ್ಯಕ್ತವಾಗಿದೆ.

4 / 5
ಇಂದಿರಾ ಗಾಂಧಿ ಹತ್ಯೆ ಮತ್ತು ಪಂಜಾಬ್​ ಗಲಭೆ ಬಗ್ಗೆ ಸಿನಿಮಾದಲ್ಲಿ ತೋರಿಸಬಾರದು ಎಂಬ ಒತ್ತಾಯ ಕೇಳಿಬಂದಿದೆ ಎಂದು ಸ್ವತಃ ಕಂಗನಾ ಟ್ವೀಟ್​ ಮಾಡಿದ್ದಾರೆ. ಟ್ರೇಲರ್​ ಬಿಡುಗಡೆ ಆದ ಬಳಿಕ ಈ ಚಿತ್ರಕ್ಕೆ ಸಿಖ್​ ಸಮುದಾಯದವರ ವಿರೋಧ ಹೆಚ್ಚಾಯಿತು. ಈ ಬಗ್ಗೆ ಕೋರ್ಟ್​ನಲ್ಲೂ ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾದ ರಿಲೀಸ್​ ಇನ್ನಷ್ಟು ತಡವಾಗಲಿದೆ. ಸಿನಿಮಾದ ಹೊಸ ರಿಲೀಸ್​ ದಿನಾಂಕ ತಿಳಿಯಲು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇಂದಿರಾ ಗಾಂಧಿ ಹತ್ಯೆ ಮತ್ತು ಪಂಜಾಬ್​ ಗಲಭೆ ಬಗ್ಗೆ ಸಿನಿಮಾದಲ್ಲಿ ತೋರಿಸಬಾರದು ಎಂಬ ಒತ್ತಾಯ ಕೇಳಿಬಂದಿದೆ ಎಂದು ಸ್ವತಃ ಕಂಗನಾ ಟ್ವೀಟ್​ ಮಾಡಿದ್ದಾರೆ. ಟ್ರೇಲರ್​ ಬಿಡುಗಡೆ ಆದ ಬಳಿಕ ಈ ಚಿತ್ರಕ್ಕೆ ಸಿಖ್​ ಸಮುದಾಯದವರ ವಿರೋಧ ಹೆಚ್ಚಾಯಿತು. ಈ ಬಗ್ಗೆ ಕೋರ್ಟ್​ನಲ್ಲೂ ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾದ ರಿಲೀಸ್​ ಇನ್ನಷ್ಟು ತಡವಾಗಲಿದೆ. ಸಿನಿಮಾದ ಹೊಸ ರಿಲೀಸ್​ ದಿನಾಂಕ ತಿಳಿಯಲು ಫ್ಯಾನ್ಸ್​ ಕಾಯುತ್ತಿದ್ದಾರೆ.

5 / 5
Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್