AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನೆಂದು ಹೆಸರಿಡುವುದು? ಮೊದಲ ಬಾರಿ ಮಗು ಫೋಟೋ ಹಂಚಿಕೊಂಡ ನಟಿ ಭಾವನಾ

ನಟಿ ಭಾವನಾ ರಾಮಣ್ಣ ಅವರು ಇತ್ತೀಚೆಗೆ ಮಗುವಿನ ಜನ್ಮ ನೀಡಿದ್ದರು. ಈಗ ಅವರು ಫೋಟೋ ಹಂಚಿಕೊಂಡಿದ್ದಾರೆ. ಅದರ ಜೊತೆಗೆ ಒಂದು ಸುಂದರವಾದ ಕ್ಯಾಪ್ಷನ್ ಕೂಡ ನೀಡಿದ್​ದಾರೆ. ತಾಯ್ತನದ ಅನುಭವವನ್ನು ಅವರು ಪದಗಳಲ್ಲಿ ಹಿಡಿದಿಡಲು ಪ್ರಯತ್ನಿಸಿದ್ದಾರೆ. ಭಾವನಾ ಅವರ ಮನೆಯಲ್ಲೀಗ ಪುಟ್ಟ ಕಂದನ ಕಲರವ ಕೇಳುತ್ತಿದೆ.

ಮದನ್​ ಕುಮಾರ್​
|

Updated on: Sep 21, 2025 | 11:35 AM

Share
ಭಾವನಾ ರಾಮಣ್ಣ ಅವರು ಮದುವೆ ಆಗದೆಯೇ ಐವಿಎಫ್ ತಂತ್ರಜ್ಞಾನದ ಮೂಲಕ ಮಗು ಪಡೆದಿದ್ದಾರೆ. ಮಗುವಿನ ಕೈ ಇರುವ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾವನಾ ರಾಮಣ್ಣ ಅವರು ಮದುವೆ ಆಗದೆಯೇ ಐವಿಎಫ್ ತಂತ್ರಜ್ಞಾನದ ಮೂಲಕ ಮಗು ಪಡೆದಿದ್ದಾರೆ. ಮಗುವಿನ ಕೈ ಇರುವ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

1 / 5
ತಾಯಿ ಆಗಿರುವ ಭಾವನಾ ಅವರ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ‘ದೊಡ್ಡ ಮನೆ, ಪುಟ್ಟ ಕುಟುಂಬ… ಈಗ ನಮ್ಮ ಗೂಡಿಗೆ ಬಂದ ಹೊಸ ಪುಟ್ಟ ಹಕ್ಕಿಯ ಚುಯ್ ಚುಯ್ ನಾದ’ ಎಂದು ಅವರು ಬರೆದುಕೊಂಡಿದ್ದಾರೆ.

ತಾಯಿ ಆಗಿರುವ ಭಾವನಾ ಅವರ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ‘ದೊಡ್ಡ ಮನೆ, ಪುಟ್ಟ ಕುಟುಂಬ… ಈಗ ನಮ್ಮ ಗೂಡಿಗೆ ಬಂದ ಹೊಸ ಪುಟ್ಟ ಹಕ್ಕಿಯ ಚುಯ್ ಚುಯ್ ನಾದ’ ಎಂದು ಅವರು ಬರೆದುಕೊಂಡಿದ್ದಾರೆ.

2 / 5
‘ನಾನು ಮತ್ತು ನನ್ನ ತಂದೆ, ಬೆಳಗ್ಗೆ ಎದ್ದು ಮನೆಯಂಗಳದಲ್ಲಿ ಕಾಫಿ ಹೀರುತ್ತಾ ಕೂತರೆ, ಇಲ್ಲಿ ಹಕ್ಕಿಗಳದ್ದೇ ನಾದ ನಿನಾದ. ಹಕ್ಕಿಗಳ ಹಾಡು ಪಾಡು ಕೇಳುತ್ತಿದ್ದ ಮನೆಯಲ್ಲೀಗ, ಹೊಸದೊಂದು ಪುಟ್ಟ ಹಕ್ಕಿಯ ಸರಿಗಮ’ ಎಂದಿದ್ದಾರೆ ಭಾವನಾ.

‘ನಾನು ಮತ್ತು ನನ್ನ ತಂದೆ, ಬೆಳಗ್ಗೆ ಎದ್ದು ಮನೆಯಂಗಳದಲ್ಲಿ ಕಾಫಿ ಹೀರುತ್ತಾ ಕೂತರೆ, ಇಲ್ಲಿ ಹಕ್ಕಿಗಳದ್ದೇ ನಾದ ನಿನಾದ. ಹಕ್ಕಿಗಳ ಹಾಡು ಪಾಡು ಕೇಳುತ್ತಿದ್ದ ಮನೆಯಲ್ಲೀಗ, ಹೊಸದೊಂದು ಪುಟ್ಟ ಹಕ್ಕಿಯ ಸರಿಗಮ’ ಎಂದಿದ್ದಾರೆ ಭಾವನಾ.

3 / 5
‘ಮನೆಯ ಗೂಡಲ್ಲಿ ಚುಯ್ ಚುಯ್ ಸದ್ದು ಮಾಡುತ್ತಿರುವ ಈ ಪುಟ್ಟ ಹಕ್ಕಿಗೆ ಏನೆಂದು ಹೆಸರಿಡುವುದು? ನಮ್ಮನ್ನು ನಯವಾಗಿ ಬಂಧಿಸಿದ ಸುಂದರ ಬಲೆ, ಇದು ಹೊಸ ಪ್ರೀತಿಯ ಅಲೆ. ವಿನೂತನ ವಿಸ್ಮಯ’ ಎಂದು ಭಾವನಾ ಪೋಸ್ಟ್ ಮಾಡಿದ್ದಾರೆ.

‘ಮನೆಯ ಗೂಡಲ್ಲಿ ಚುಯ್ ಚುಯ್ ಸದ್ದು ಮಾಡುತ್ತಿರುವ ಈ ಪುಟ್ಟ ಹಕ್ಕಿಗೆ ಏನೆಂದು ಹೆಸರಿಡುವುದು? ನಮ್ಮನ್ನು ನಯವಾಗಿ ಬಂಧಿಸಿದ ಸುಂದರ ಬಲೆ, ಇದು ಹೊಸ ಪ್ರೀತಿಯ ಅಲೆ. ವಿನೂತನ ವಿಸ್ಮಯ’ ಎಂದು ಭಾವನಾ ಪೋಸ್ಟ್ ಮಾಡಿದ್ದಾರೆ.

4 / 5
ಭಾವನಾ ಅವರು ‘ಏನೆಂದು ಹೆಸರಿಡಲಿ’ ಅಂತ ಬರೆದುಕೊಂಡಿರುವುದರಿಂದ ಕಮೆಂಟ್ ಮೂಲಕ ಅಭಿಮಾನಿಗಳು ಒಂದಷ್ಟು ಹೆಸರುಗಳನ್ನು ಸೂಚಿಸುತ್ತಿದ್ದಾರೆ. ಫೋಟೋ ನೋಡಿದ ಎಲ್ಲರಿಗೂ ಖುಷಿ ಆಗಿದೆ.

ಭಾವನಾ ಅವರು ‘ಏನೆಂದು ಹೆಸರಿಡಲಿ’ ಅಂತ ಬರೆದುಕೊಂಡಿರುವುದರಿಂದ ಕಮೆಂಟ್ ಮೂಲಕ ಅಭಿಮಾನಿಗಳು ಒಂದಷ್ಟು ಹೆಸರುಗಳನ್ನು ಸೂಚಿಸುತ್ತಿದ್ದಾರೆ. ಫೋಟೋ ನೋಡಿದ ಎಲ್ಲರಿಗೂ ಖುಷಿ ಆಗಿದೆ.

5 / 5
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು