ವೀರೇಂದ್ರ ಹೆಗ್ಗಡೆ ಅವರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಹಬ್ಬ ಆಚರಿಸಿದ ಹಿರಿಯ ನಟಿ ಶ್ರುತಿ

Updated on: Aug 20, 2024 | 3:10 PM

ಕನ್ನಡ ಚಿತ್ರರಂಗದ ಖ್ಯಾತ ನಟಿ ಶ್ರುತಿ ಅವರು ಈ ವರ್ಷ ಧರ್ಮಸ್ಥಳದಲ್ಲಿ ರಕ್ಷಾ ಬಂಧನ ಹಬ್ಬವನ್ನು ಸೆಲೆಬ್ರೇಟ್​ ಮಾಡಿದ್ದಾರೆ. ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಶ್ರುತಿ ರಾಖಿ ಕಟ್ಟಿದ್ದಾರೆ. ಅವರ ಜೊತೆ ಮಗಳು ಗೌರಿ ಕೂಡ ಹಾಜರಿದ್ದರು. ಈ ವಿಶೇಷ ಫೋಟೋಗಳು ಇಲ್ಲಿವೆ ನೋಡಿ..

1 / 5
ಹಿರಿಯ ಕಲಾವಿದೆ ಶ್ರುತಿ ಅವರು ಸಡಗರದಿಂದ ರಕ್ಷಾ ಬಂಧನ ಹಬ್ಬ ಆಚರಿಸಿದ್ದಾರೆ. ಈ ವರ್ಷದ ರಾಖಿ ಹಬ್ಬ ಅವರ ಪಾಲಿಗೆ ವಿಶೇಷವಾಗಿತ್ತು. ಯಾಕೆಂದರೆ, ಧರ್ಮಸ್ಥಳಕ್ಕೆ ತೆರಳಿ ಅವರು ರಕ್ಷಾ ಬಂಧನ ಸೆಲೆಬ್ರೇಟ್​ ಮಾಡಿದ್ದಾರೆ.

ಹಿರಿಯ ಕಲಾವಿದೆ ಶ್ರುತಿ ಅವರು ಸಡಗರದಿಂದ ರಕ್ಷಾ ಬಂಧನ ಹಬ್ಬ ಆಚರಿಸಿದ್ದಾರೆ. ಈ ವರ್ಷದ ರಾಖಿ ಹಬ್ಬ ಅವರ ಪಾಲಿಗೆ ವಿಶೇಷವಾಗಿತ್ತು. ಯಾಕೆಂದರೆ, ಧರ್ಮಸ್ಥಳಕ್ಕೆ ತೆರಳಿ ಅವರು ರಕ್ಷಾ ಬಂಧನ ಸೆಲೆಬ್ರೇಟ್​ ಮಾಡಿದ್ದಾರೆ.

2 / 5

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಶ್ರುತಿ ಅವರು ರಾಖಿ ಕಟ್ಟಿದ್ದಾರೆ. ಆ ಸಂದರ್ಭದ ಕೆಲವು ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಮಾಹಿತಿ ತಿಳಿಸಿದ್ದಾರೆ.

3 / 5

‘ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಹಾಗು ಪೂಜ್ಯರ ಆಶೀರ್ವಾದ ಪಡೆದು, ರಕ್ಷಾ ಬಂಧನದ ದಿನ ಅವರಿಗೆ ರಾಕೀ ಕಟ್ಟಿ ಆಶೀರ್ವಾದ ಪಡೆದ ನಾವು ಧನ್ಯ. ಶ್ರೀ ಮಂಜುನಾಥ ನಿಮ್ಮಲರಿಗೂ ಒಳ್ಳೆಯದು ಮಾಡಲಿ’ ಎಂದು ಶ್ರುತಿ ಪೋಸ್ಟ್ ಮಾಡಿದ್ದಾರೆ.

4 / 5

ಶ್ರುತಿ ಅವರು ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದಿದ್ದಾರೆ. ಶ್ರುತಿ ಮಗಳು ಗೌರಿ ಕೂಡ ಈ ವೇಳೆ ಉಪಸ್ಥಿತರಿದ್ದರು. ‘ನೀವೇ ಅದೃಷ್ಟವಂತರು’ ಎಂದು ಅಭಿಮಾನಿಗಳು ಈ ಪೋಸ್ಟ್​ಗೆ ಕಮೆಂಟ್​ ಮಾಡಿದ್ದಾರೆ.

5 / 5

ಚಿತ್ರರಂಗದಲ್ಲಿ ಶ್ರುತಿ ಅವರು ಸಖತ್​ ಬೇಡಿಕೆ ಹೊಂದಿದ್ದಾರೆ. ಪೋಷಕ ನಟಿಯಾಗಿ ಹಲವು ಸಿನಿಮಾಗಳಲ್ಲಿ ಅವರು ಅಭಿನಯಿಸುತ್ತಿದ್ದಾರೆ. ಸಿನಿಮಾ ಕೆಲಸದ ನಡುವೆ ಅವರು ಬಿಡುವು ಪಡೆದುಕೊಂಡು ಧರ್ಮಸ್ಥಳಕ್ಕೆ ತೆರಳಿದ್ದಾರೆ.

Loading...
Unable to load recommendations.
Follow Us