AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ದೇಶಪ್ರೇಮ ಸಾರುವ ಈ ಕನ್ನಡ ಸಿನಿಮಾಗಳ ನೋಡಿ

Independence day: ದೇಶವೇ ಇಂದು 78ನೇ ಸ್ವಾತಂತ್ರ್ಯದಿನೋತ್ಸವ ಆಚರಣೆ ಮಾಡುತ್ತಿದೆ. ಕನ್ನಡದಲ್ಲಿ ಹಲವು ದೇಶಭಕ್ತಿಯ ಸಿನಿಮಾಗಳು ತೆರೆಗೆ ಬಂದಿವೆ. ಈ ಸ್ವಾತಂತ್ರ್ಯದಿನೋತ್ಸವಕ್ಕೆ ನೋಡಬಹುದಾದ ಕನ್ನಡ ಸಿನಿಮಾಗಳ ಪಟ್ಟಿ ಇಲ್ಲಿದೆ.

ಮಂಜುನಾಥ ಸಿ.
|

Updated on: Aug 15, 2024 | 10:30 AM

Share
ಡಾ ರಾಜ್​ಕುಮಾರ್, ಬಿ ಸರೋಜಾದೇವಿ ಇನ್ನಿತರೆ ಕೆಲವು ಮಹಾನ್ ನಟ ನಟಿಯರು ನಟಿಸಿರುವ ಕಿತ್ತೂರ ಚೆನ್ನಮ್ಮ ಸಿನಿಮಾ ದೇಶಪ್ರೇಮ ಸಾರುವ ಹಳೆಯ ಸಿನಿಮಾಗಳಲ್ಲಿ ಒಂದು. ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾಯ್ದೆಯಡಿ ಕಿತ್ತೂರು ಸಂಸ್ಥಾನವನ್ನು ವಶಪಡಿಸಿಕೊಳ್ಳಲು ಮುಂದಾದಾಗ ರಾಣಿ ಚೆನ್ನಮ್ಮ ಮಾಡಿದ ಹೋರಾಟದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. 1961 ರಲ್ಲಿ ಬಿಡುಗಡೆ ಆದ ಈ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿಯೂ ಲಭಿಸಿದೆ.

ಡಾ ರಾಜ್​ಕುಮಾರ್, ಬಿ ಸರೋಜಾದೇವಿ ಇನ್ನಿತರೆ ಕೆಲವು ಮಹಾನ್ ನಟ ನಟಿಯರು ನಟಿಸಿರುವ ಕಿತ್ತೂರ ಚೆನ್ನಮ್ಮ ಸಿನಿಮಾ ದೇಶಪ್ರೇಮ ಸಾರುವ ಹಳೆಯ ಸಿನಿಮಾಗಳಲ್ಲಿ ಒಂದು. ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾಯ್ದೆಯಡಿ ಕಿತ್ತೂರು ಸಂಸ್ಥಾನವನ್ನು ವಶಪಡಿಸಿಕೊಳ್ಳಲು ಮುಂದಾದಾಗ ರಾಣಿ ಚೆನ್ನಮ್ಮ ಮಾಡಿದ ಹೋರಾಟದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. 1961 ರಲ್ಲಿ ಬಿಡುಗಡೆ ಆದ ಈ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿಯೂ ಲಭಿಸಿದೆ.

1 / 7
1977 ರಲ್ಲಿ ಬಿಡುಗಡೆ ಆದ ‘ವೀರ ಸಿಂಧೂರ ಲಕ್ಷ್ಮಣ’ ಸಿನಿಮಾ ಸಹ ಸ್ವಾತಂತ್ರ್ಯ ಹೋರಾಟದ ಕುರಿತಾದ ಕತೆಯನ್ನು ಒಳಗೊಂಡಿದೆ. ಹುಣಸೂರು ಕೃಷ್ಣಮೂರ್ತಿ ನಿರ್ದೇಶನ ಮಾಡಿರುವ ಈ ಸಿನಿಮಾ ಕ್ರಾಂತಿಕಾರಿ ಸಿಂಧೂರ ಲಕ್ಷ್ಮಣನ ಹೋರಾಟದ ಕತೆಯನ್ನು ಒಳಗೊಂಡಿದೆ.

1977 ರಲ್ಲಿ ಬಿಡುಗಡೆ ಆದ ‘ವೀರ ಸಿಂಧೂರ ಲಕ್ಷ್ಮಣ’ ಸಿನಿಮಾ ಸಹ ಸ್ವಾತಂತ್ರ್ಯ ಹೋರಾಟದ ಕುರಿತಾದ ಕತೆಯನ್ನು ಒಳಗೊಂಡಿದೆ. ಹುಣಸೂರು ಕೃಷ್ಣಮೂರ್ತಿ ನಿರ್ದೇಶನ ಮಾಡಿರುವ ಈ ಸಿನಿಮಾ ಕ್ರಾಂತಿಕಾರಿ ಸಿಂಧೂರ ಲಕ್ಷ್ಮಣನ ಹೋರಾಟದ ಕತೆಯನ್ನು ಒಳಗೊಂಡಿದೆ.

2 / 7
ಗಿರೀಶ್ ಕಾಸರವಳ್ಳಿ ನಿರ್ದೇಶನದ ಕಾದಂಬರಿ ಆಧರಿತ ಸಿನಿಮಾ ‘ತಾಯಿ ಸಾಹೇಬ’ ಸಹ ಸ್ವಾತಂತ್ರ್ಯ ಹೋರಾಟದ ಕತೆಯನ್ನು ಒಳಗೊಂಡಿದೆ. ಸಿನಿಮಾದಲ್ಲಿ ಅಪ್ಪ ಸಾಹೇಬ ಹೆಸರಿನ ಸ್ವಾತಂತ್ರ್ಯ ಹೋರಾಟಗಾರ ಮತ್ತು ಆತನ ಪತ್ನಿಯ ಕತೆಯನ್ನು ಒಳಗೊಂಡಿದೆ. ಸಿನಿಮಾವು ಸ್ವಾತಂತ್ರ್ಯ ಹೋರಾಟ ಮತ್ತು ಭೂ ಚಳುವಳಿಯ ಕತೆಯನ್ನು ಒಳಗೊಂಡಿದೆ.

ಗಿರೀಶ್ ಕಾಸರವಳ್ಳಿ ನಿರ್ದೇಶನದ ಕಾದಂಬರಿ ಆಧರಿತ ಸಿನಿಮಾ ‘ತಾಯಿ ಸಾಹೇಬ’ ಸಹ ಸ್ವಾತಂತ್ರ್ಯ ಹೋರಾಟದ ಕತೆಯನ್ನು ಒಳಗೊಂಡಿದೆ. ಸಿನಿಮಾದಲ್ಲಿ ಅಪ್ಪ ಸಾಹೇಬ ಹೆಸರಿನ ಸ್ವಾತಂತ್ರ್ಯ ಹೋರಾಟಗಾರ ಮತ್ತು ಆತನ ಪತ್ನಿಯ ಕತೆಯನ್ನು ಒಳಗೊಂಡಿದೆ. ಸಿನಿಮಾವು ಸ್ವಾತಂತ್ರ್ಯ ಹೋರಾಟ ಮತ್ತು ಭೂ ಚಳುವಳಿಯ ಕತೆಯನ್ನು ಒಳಗೊಂಡಿದೆ.

3 / 7
ವಿಷ್ಣುವರ್ಧನ್ ನಟನೆಯ ‘ಮುತ್ತಿನ ಹಾರ’ ಸಿನಿಮಾ ಸಹ ದೇಶಪ್ರೇಮ ಸಾರುವ ಸಿನಿಮಾ. ಈ ಸಿನಿಮಾದಲ್ಲಿ ಸೈನಿಕರ ದೇಶಪ್ರೇಮ, ಅವರ ತ್ಯಾಗ ಬಲಿದಾನಗಳ ಕತೆಯನ್ನು ಹೇಳಲಾಗಿದೆ. ಜೊತೆಗೆ ಕೌಟುಂಬಿಕ ಮೌಲ್ಯಗಳ ಕತೆಯನ್ನೂ ಸಹ ಸಿನಿಮಾದಲ್ಲಿ ಬೆರೆಸಲಾಗಿದೆ. ಇದು ಕನ್ನಡದ ಆಲ್​ಟೈಮ್​ ಹಿಟ್ ಸಿನಿಮಾಗಳಲ್ಲಿ ಒಂದು.

ವಿಷ್ಣುವರ್ಧನ್ ನಟನೆಯ ‘ಮುತ್ತಿನ ಹಾರ’ ಸಿನಿಮಾ ಸಹ ದೇಶಪ್ರೇಮ ಸಾರುವ ಸಿನಿಮಾ. ಈ ಸಿನಿಮಾದಲ್ಲಿ ಸೈನಿಕರ ದೇಶಪ್ರೇಮ, ಅವರ ತ್ಯಾಗ ಬಲಿದಾನಗಳ ಕತೆಯನ್ನು ಹೇಳಲಾಗಿದೆ. ಜೊತೆಗೆ ಕೌಟುಂಬಿಕ ಮೌಲ್ಯಗಳ ಕತೆಯನ್ನೂ ಸಹ ಸಿನಿಮಾದಲ್ಲಿ ಬೆರೆಸಲಾಗಿದೆ. ಇದು ಕನ್ನಡದ ಆಲ್​ಟೈಮ್​ ಹಿಟ್ ಸಿನಿಮಾಗಳಲ್ಲಿ ಒಂದು.

4 / 7
ಶಿವರಾಜ್ ಕುಮಾರ್ ನಟನೆಯ ‘ಹಗಲುವೇಷ’ ಸಿನಿಮಾ ಸಹ ಅತ್ಯುತ್ತಮ ದೇಶಭಕ್ತಿ ಸಿನಿಮಾ. ಬ್ರಿಟೀಷ್ ಆಡಳಿತದ ವಿರುದ್ಧ ದಂಗೆ ಏಳುವ ಸಾಮಾನ್ಯ ವ್ಯಕ್ತಿಯ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದ ಹಾಡುಗಳು ಅದ್ಭುತವಾಗಿವೆ.

ಶಿವರಾಜ್ ಕುಮಾರ್ ನಟನೆಯ ‘ಹಗಲುವೇಷ’ ಸಿನಿಮಾ ಸಹ ಅತ್ಯುತ್ತಮ ದೇಶಭಕ್ತಿ ಸಿನಿಮಾ. ಬ್ರಿಟೀಷ್ ಆಡಳಿತದ ವಿರುದ್ಧ ದಂಗೆ ಏಳುವ ಸಾಮಾನ್ಯ ವ್ಯಕ್ತಿಯ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದ ಹಾಡುಗಳು ಅದ್ಭುತವಾಗಿವೆ.

5 / 7
ವಿಷ್ಣುವರ್ಧನ್ ನಟನೆಯ ‘ವೀರಪ್ಪ ನಾಯ್ಕ’ ಸೂಪರ್ ಹಿಟ್ ಆದ ದೇಶಪ್ರೇಮ ಹೊಂದಿದ ಸಿನಿಮಾ. ಈ ಸಿನಿಮಾವನ್ನು ಎಸ್ ನಾರಾಯಣ್ ನಿರ್ದೇಶನ ಮಾಡಿದ್ದರು. ಉಗ್ರಗಾಮಿಯಾದ ಮಗನನ್ನು ಕೊಲ್ಲುವ ದೇಶಪ್ರೇಮಿ ತಂದೆಯ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದ ಹಾಡುಗಳು ಅದ್ಭುತವಾಗಿವೆ.

ವಿಷ್ಣುವರ್ಧನ್ ನಟನೆಯ ‘ವೀರಪ್ಪ ನಾಯ್ಕ’ ಸೂಪರ್ ಹಿಟ್ ಆದ ದೇಶಪ್ರೇಮ ಹೊಂದಿದ ಸಿನಿಮಾ. ಈ ಸಿನಿಮಾವನ್ನು ಎಸ್ ನಾರಾಯಣ್ ನಿರ್ದೇಶನ ಮಾಡಿದ್ದರು. ಉಗ್ರಗಾಮಿಯಾದ ಮಗನನ್ನು ಕೊಲ್ಲುವ ದೇಶಪ್ರೇಮಿ ತಂದೆಯ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದ ಹಾಡುಗಳು ಅದ್ಭುತವಾಗಿವೆ.

6 / 7
ಸಿಪಿ ಯೋಗೀಶ್ವರ್ ನಟಿಸಿರುವ ‘ಸೈನಿಕ’ ಸಿನಿಮಾ ಸಹ ದೇಶಪ್ರೇಮ ಸಾರುವ ಸಿನಿಮಾ. ಇದು ಬ್ರಿಟೀಷರ ವಿರುದ್ಧದ ಹೋರಾಟದ ಕತೆ ಅಲ್ಲದಿದ್ದರೂ ಈ ಸಿನಿಮಾ ಸೈನಿಕರ ದೇಶಪ್ರೇಮ ಅವರ ಹೊರಾಟ, ತ್ಯಾಗ-ಬಲಿದಾನಗಳನ್ನು ಸಾರುವ ಸಿನಿಮಾ. ಈ ಬ್ಲಾಕ್ ಬಸ್ಟರ್ ಸಿನಿಮಾದ ಹಾಡುಗಳು ಸಹ ಬಹಳ ಜನಪ್ರಿಯ.

ಸಿಪಿ ಯೋಗೀಶ್ವರ್ ನಟಿಸಿರುವ ‘ಸೈನಿಕ’ ಸಿನಿಮಾ ಸಹ ದೇಶಪ್ರೇಮ ಸಾರುವ ಸಿನಿಮಾ. ಇದು ಬ್ರಿಟೀಷರ ವಿರುದ್ಧದ ಹೋರಾಟದ ಕತೆ ಅಲ್ಲದಿದ್ದರೂ ಈ ಸಿನಿಮಾ ಸೈನಿಕರ ದೇಶಪ್ರೇಮ ಅವರ ಹೊರಾಟ, ತ್ಯಾಗ-ಬಲಿದಾನಗಳನ್ನು ಸಾರುವ ಸಿನಿಮಾ. ಈ ಬ್ಲಾಕ್ ಬಸ್ಟರ್ ಸಿನಿಮಾದ ಹಾಡುಗಳು ಸಹ ಬಹಳ ಜನಪ್ರಿಯ.

7 / 7
Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?