- Kannada News Photo gallery Kannadathi Serial Actress Ranjani Raghavan Attend Mysuru literature festival
ಒಂದು ವಿಶೇಷ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದ ‘ಕನ್ನಡತಿ’ ನಟಿ ರಂಜನಿ ರಾಘವನ್
‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಸಖತ್ ಸೈಲೆಂಟ್. ತುಂಬಾ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತಹ ಪರಿಸ್ಥಿತಿ ಬಂದರೆ ಅವರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಈ ಕಾರಣದಿಂದಲೂ ಅವರ ಪಾತ್ರ ಅನೇಕರಿಗೆ ಇಷ್ಟ.
Updated on: Jul 25, 2022 | 6:30 PM

ನಟಿ ರಂಜನಿ ರಾಘವನ್ ಅವರು ಹಲವು ಕಾರಣಗಳಿಗೆ ಇಷ್ಟವಾಗುತ್ತಾರೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಭುವನೇಶ್ವರಿ ಪಾತ್ರದ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದಾರೆ. ಅವರ ಈ ಪಾತ್ರ ಫ್ಯಾನ್ಸ್ಗೆ ಸಖತ್ ಇಷ್ಟವಾಗಿದೆ. ಚಿತ್ರ ಕೃಪೆ: Instagram

‘ಕನ್ನಡತಿ’ ಧಾರಾವಾಹಿಯಲ್ಲಿ ಭುವಿ ಸಖತ್ ಸೈಲೆಂಟ್. ತುಂಬಾ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತಹ ಪರಿಸ್ಥಿತಿ ಬಂದರೆ ಅವರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಈ ಕಾರಣದಿಂದಲೂ ಅವರ ಪಾತ್ರ ಅನೇಕರಿಗೆ ಇಷ್ಟ.ಚಿತ್ರ ಕೃಪೆ: Instagram

‘ಕನ್ನಡತಿ’ ಧಾರಾವಾಹಿ ಮೂಲಕ ಕನ್ನಡದ ಬಗ್ಗೆ ಪ್ರೀತಿ ಸಾರುವ ಪ್ರಯತ್ನ ಆಗುತ್ತಿದೆ. ನಿಜ ಜೀವನದಲ್ಲೂ ರಂಜನಿ ಅವರಿಗೆ ಕನ್ನಡದ ಮೇಲೆ ಅಪಾರ ಅಭಿಮಾನ ಇದೆ. ಅವರು ಸ್ವತಃ ಒಂದು ಕಥಾ ಸಂಕಲವನ್ನು ಹೊರ ತಂದಿದ್ದಾರೆ ಅನ್ನೋದು ವಿಶೇಷ. ಚಿತ್ರ ಕೃಪೆ: Instagram

ರಂಜನಿ ಅವರು ಇತ್ತೀಚೆಗೆ ‘ಮೈಸೂರು ಸಾಹಿತ್ಯ ಸಂಭ್ರಮ’ದಲ್ಲಿ ಭಾಗಿ ಆಗಿದ್ದರು. ಈ ಸುಂದರ ಕ್ಷಣಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರ ಕೃಪೆ: Instagram

ರಂಜನಿ ಅವರು ಹಿರಿತೆಯರೆಯಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈ ಚಿತ್ರಕ್ಕೆ ದಿಗಂತ್ ಹೀರೋ. ಚಿತ್ರ ಕೃಪೆ: Instagram




