Kanniyakumari: ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ಮೋದಿ ಧ್ಯಾನ , ಇಲ್ಲಿದೆ ಫೋಟೋ

ಪ್ರಧಾನಿ ಮೋದಿ ಅವರು ಗುರುವಾರ ಕನ್ಯಾಕುಮಾರಿಗೆ ಭೇಟಿ ನೀಡಿ, ಭಗವತಿ ಅಮ್ಮನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಜೂನ್ 1ರಂದು ಅಂತಿಮ ಹಂತದ ಮತದಾನ ನಡೆಯಲಿದೆ. ಅದಕ್ಕೂ ಮೊದಲು ಅವರು ಗುರುವಾರ ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಅವರ ಕೊನೆಯ ಚುನಾವಣಾ ಪ್ರಚಾರ ನಡೆಸಿದರು. ಇದೀಗ ಮೋದಿ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಧ್ಯಾನಕ್ಕೆ ಮಾಡುತ್ತಿದ್ದಾರೆ. ಆ ಫೋಟೋಗಳು ಇಲ್ಲಿದೆ.

| Updated By: ಅಕ್ಷಯ್​ ಪಲ್ಲಮಜಲು​​

Updated on: May 31, 2024 | 10:53 AM

ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡುಗಳ ಕಾಲ ತಮ್ಮ ಧ್ಯಾನದ ಸಮಯವನ್ನು ಕನ್ಯಾಕುಮಾರಿಯಲ್ಲಿ ಕಳೆಯಲಿದ್ದಾರೆ. ನೆನ್ನೆ (ಮೇ30) ಪ್ರಧಾನಿ ಮೋದಿ ಅವರು ಕನ್ಯಾಕುಮಾರಿಗೆ ಬಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡುಗಳ ಕಾಲ ತಮ್ಮ ಧ್ಯಾನದ ಸಮಯವನ್ನು ಕನ್ಯಾಕುಮಾರಿಯಲ್ಲಿ ಕಳೆಯಲಿದ್ದಾರೆ. ನೆನ್ನೆ (ಮೇ30) ಪ್ರಧಾನಿ ಮೋದಿ ಅವರು ಕನ್ಯಾಕುಮಾರಿಗೆ ಬಂದಿದ್ದಾರೆ.

1 / 7
ಸಂಜೆ ತಮಿಳುನಾಡಿನ ವಿವೇಕಾನಂದ ರಾಕ್ ಸ್ಮಾರಕಕ್ಕೆ ಆಗಮಿಸಿ,  ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಧ್ಯಾನ ಮಂಟಪದಲ್ಲಿ ಪ್ರಧಾನಿ ಮೋದಿಯವರು ಧ್ಯಾನ ಮಾಡಿದೆ. ಮೇ 30ರಿಂದ ಜೂನ್​​​ 1ರವರೆಗೆ ಇಲ್ಲಿ ಧ್ಯಾನ ಮಾಡಲಿದ್ದಾರೆ. ಇನ್ನು ಇದಕ್ಕೂ ಮುನ್ನ ಮೋದಿ 7 ಹಂತದ ಚುನಾವಣಾ ರ್ಯಾಲಿಯನ್ನು ನಡೆಸಿದ್ದಾರೆ. ಇದೀಗ ಅಗಾಧ ಶಕ್ತಿಗಾಗಿ, ದೇಶದ ಮುಂದಿನ ಭವಿಷ್ಯಕ್ಕಾಗಿ ಮೋದಿ ಅವರು ಕನ್ಯಾಕುಮಾರಿಗೆ ಆಗಮಿಸಿದ್ದಾರೆ ಎಂದು ಹೇಳಿದ್ದಾರೆ.

ಸಂಜೆ ತಮಿಳುನಾಡಿನ ವಿವೇಕಾನಂದ ರಾಕ್ ಸ್ಮಾರಕಕ್ಕೆ ಆಗಮಿಸಿ, ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಧ್ಯಾನ ಮಂಟಪದಲ್ಲಿ ಪ್ರಧಾನಿ ಮೋದಿಯವರು ಧ್ಯಾನ ಮಾಡಿದೆ. ಮೇ 30ರಿಂದ ಜೂನ್​​​ 1ರವರೆಗೆ ಇಲ್ಲಿ ಧ್ಯಾನ ಮಾಡಲಿದ್ದಾರೆ. ಇನ್ನು ಇದಕ್ಕೂ ಮುನ್ನ ಮೋದಿ 7 ಹಂತದ ಚುನಾವಣಾ ರ್ಯಾಲಿಯನ್ನು ನಡೆಸಿದ್ದಾರೆ. ಇದೀಗ ಅಗಾಧ ಶಕ್ತಿಗಾಗಿ, ದೇಶದ ಮುಂದಿನ ಭವಿಷ್ಯಕ್ಕಾಗಿ ಮೋದಿ ಅವರು ಕನ್ಯಾಕುಮಾರಿಗೆ ಆಗಮಿಸಿದ್ದಾರೆ ಎಂದು ಹೇಳಿದ್ದಾರೆ.

2 / 7
ಇಂದು ಕನ್ಯಾಕುಮಾರಿಯ ಭಗವತಿ ಅಮ್ಮನ್ ದೇವಸ್ಥಾನದಲ್ಲಿ ಪ್ರಧಾನಮಂತ್ರಿ ಪ್ರಾರ್ಥನೆ ಸಲ್ಲಿಸಿದರು. ಜೂನ್ 1ರಂದು ಅಂತಿಮ ಹಂತದ ಮತದಾನ ನಡೆಯಲಿದೆ. ಅದಕ್ಕೂ ಮೊದಲು ಅವರು ಗುರುವಾರ ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಅವರ ಕೊನೆಯ ಚುನಾವಣಾ ಪ್ರಚಾರ ನಡೆಸಿದ್ದಾರೆ. ಇನ್ನು ಮೋದಿ ಧ್ಯಾನಕ್ಕೆ ಸಿದ್ಧವಾಗಿರುವ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ.

ಇಂದು ಕನ್ಯಾಕುಮಾರಿಯ ಭಗವತಿ ಅಮ್ಮನ್ ದೇವಸ್ಥಾನದಲ್ಲಿ ಪ್ರಧಾನಮಂತ್ರಿ ಪ್ರಾರ್ಥನೆ ಸಲ್ಲಿಸಿದರು. ಜೂನ್ 1ರಂದು ಅಂತಿಮ ಹಂತದ ಮತದಾನ ನಡೆಯಲಿದೆ. ಅದಕ್ಕೂ ಮೊದಲು ಅವರು ಗುರುವಾರ ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಅವರ ಕೊನೆಯ ಚುನಾವಣಾ ಪ್ರಚಾರ ನಡೆಸಿದ್ದಾರೆ. ಇನ್ನು ಮೋದಿ ಧ್ಯಾನಕ್ಕೆ ಸಿದ್ಧವಾಗಿರುವ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ.

3 / 7
ಈ ವಿಡಿಯೋದಲ್ಲಿ ಮೋದಿ ಅವರು 'ಧೋತಿ' ಧರಿಸಿ, ಮೈಮೇಲೆ ಕೇಸರಿ ಶಾಲನ್ನು ಹೊದ್ದುಕೊಂಡಿದ್ದಾರೆ. ಶ್ರೀ ಕನ್ಯಾಕುಮಾರಿ ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ಭಗವತಿ ಅಮ್ಮನವರಿಗೆ ಪೂಜೆ ಸಲ್ಲಿಸಿದರು. ನಂತರ, ಅವರು ಧ್ಯಾನಕ್ಕಾಗಿ ವಿವೇಕಾನಂದ ರಾಕ್ ಸ್ಮಾರಕಕ್ಕೆ ಹೋಗಿದ್ದಾರೆ. ಇದೀಗ ಅಲ್ಲಿ ಧ್ಯಾನವನ್ನು ಆರಂಭಿಸಿದ್ದಾರೆ.

ಈ ವಿಡಿಯೋದಲ್ಲಿ ಮೋದಿ ಅವರು 'ಧೋತಿ' ಧರಿಸಿ, ಮೈಮೇಲೆ ಕೇಸರಿ ಶಾಲನ್ನು ಹೊದ್ದುಕೊಂಡಿದ್ದಾರೆ. ಶ್ರೀ ಕನ್ಯಾಕುಮಾರಿ ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ಭಗವತಿ ಅಮ್ಮನವರಿಗೆ ಪೂಜೆ ಸಲ್ಲಿಸಿದರು. ನಂತರ, ಅವರು ಧ್ಯಾನಕ್ಕಾಗಿ ವಿವೇಕಾನಂದ ರಾಕ್ ಸ್ಮಾರಕಕ್ಕೆ ಹೋಗಿದ್ದಾರೆ. ಇದೀಗ ಅಲ್ಲಿ ಧ್ಯಾನವನ್ನು ಆರಂಭಿಸಿದ್ದಾರೆ.

4 / 7
ಸ್ವಾಮಿ ವಿವೇಕಾನಂದರು ಅದೇ ಬಂಡೆಯ ಮೇಲೆ ಧ್ಯಾನ ಮಾಡಿದ್ದರಿಂದ ಅವರ ಜೀವನದಲ್ಲಿ ಇದು ಮಹತ್ತರವಾದ ಮಹತ್ವವನ್ನು ಹೊಂದಿದೆ. ವಿವೇಕಾನಂದರು ದೇಶ-ವಿದೇಶಗಳನ್ನು ಸುತ್ತಿ, ಕೊನೆಗೆ ಇಲ್ಲಿಗೆ ಬಂದದ್ದು ಮೂರು ದಿನಗಳ ಕಾಲ ಧ್ಯಾನ ಮಾಡಿದರು. ಇನ್ನು ಹಿಂದೂ ಪುರಾಣಗಳ ಪ್ರಕಾರ, ಪಾರ್ವತಿ ದೇವಿಯು ಶಿವನಿಗಾಗಿ ಈ  ಸ್ಥಳದಲ್ಲಿ ಧ್ಯಾನ ಮಾಡುತ್ತಾಳೆ ಎಂದು ಹೇಳಲಾಗಿದೆ. ಕನ್ಯಾಕುಮಾರಿಯು ಭಾರತದ ದಕ್ಷಿಣದ ತುದಿಯಲ್ಲಿದೆ, ಇಲ್ಲಿ ದೇಶದ ಪೂರ್ವ ಮತ್ತು ಪಶ್ಚಿಮ ಕರಾವಳಿಗಳು ಸಂಗಮಿಸುತ್ತವೆ. ಇದು ಹಿಂದೂ ಮಹಾಸಾಗರ, ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರವನ್ನು ಛೇದಿಸುವ ಬಿಂದುವಾಗಿದೆ.

ಸ್ವಾಮಿ ವಿವೇಕಾನಂದರು ಅದೇ ಬಂಡೆಯ ಮೇಲೆ ಧ್ಯಾನ ಮಾಡಿದ್ದರಿಂದ ಅವರ ಜೀವನದಲ್ಲಿ ಇದು ಮಹತ್ತರವಾದ ಮಹತ್ವವನ್ನು ಹೊಂದಿದೆ. ವಿವೇಕಾನಂದರು ದೇಶ-ವಿದೇಶಗಳನ್ನು ಸುತ್ತಿ, ಕೊನೆಗೆ ಇಲ್ಲಿಗೆ ಬಂದದ್ದು ಮೂರು ದಿನಗಳ ಕಾಲ ಧ್ಯಾನ ಮಾಡಿದರು. ಇನ್ನು ಹಿಂದೂ ಪುರಾಣಗಳ ಪ್ರಕಾರ, ಪಾರ್ವತಿ ದೇವಿಯು ಶಿವನಿಗಾಗಿ ಈ ಸ್ಥಳದಲ್ಲಿ ಧ್ಯಾನ ಮಾಡುತ್ತಾಳೆ ಎಂದು ಹೇಳಲಾಗಿದೆ. ಕನ್ಯಾಕುಮಾರಿಯು ಭಾರತದ ದಕ್ಷಿಣದ ತುದಿಯಲ್ಲಿದೆ, ಇಲ್ಲಿ ದೇಶದ ಪೂರ್ವ ಮತ್ತು ಪಶ್ಚಿಮ ಕರಾವಳಿಗಳು ಸಂಗಮಿಸುತ್ತವೆ. ಇದು ಹಿಂದೂ ಮಹಾಸಾಗರ, ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರವನ್ನು ಛೇದಿಸುವ ಬಿಂದುವಾಗಿದೆ.

5 / 7
ಜೂನ್ 4ರಂದು ಲೋಕಸಭಾ ಚುನಾವಣಾ ಫಲಿತಾಂಶಗಳು ಪ್ರಕಟವಾಗಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಇಲ್ಲಿಗೆ ಭೇಟಿ ನೀಡಿರುವುದು ಅಚ್ಚರಿಯನ್ನು ತಂದಿದೆ. 2019 ರಲ್ಲಿ ಕೂಡ ಪಿಎಂ ಮೋದಿ ಅವರು ಕೇದಾರನಾಥಕ್ಕೆ ಇದೇ ರೀತಿಯ ಪ್ರವಾಸವನ್ನು ಮಾಡಿದ್ದರು. ಅಲ್ಲಿ ಗುಹೆಯಲ್ಲಿ ಧ್ಯಾನ ಮಾಡಿದರು.  ಶ್ರೀ ಅರುಳ್ಮಿಗು ರಾಮನಾಥಸ್ವಾಮಿ ದೇವಸ್ಥಾನ, ಶ್ರೀ ರಂಗನಾಥಸ್ವಾಮಿ ದೇವಸ್ಥಾನ, ಕೋತಂಡರಾಮಸ್ವಾಮಿ ದೇವಸ್ಥಾನ ಮುಂತಾದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದರು.

ಜೂನ್ 4ರಂದು ಲೋಕಸಭಾ ಚುನಾವಣಾ ಫಲಿತಾಂಶಗಳು ಪ್ರಕಟವಾಗಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಇಲ್ಲಿಗೆ ಭೇಟಿ ನೀಡಿರುವುದು ಅಚ್ಚರಿಯನ್ನು ತಂದಿದೆ. 2019 ರಲ್ಲಿ ಕೂಡ ಪಿಎಂ ಮೋದಿ ಅವರು ಕೇದಾರನಾಥಕ್ಕೆ ಇದೇ ರೀತಿಯ ಪ್ರವಾಸವನ್ನು ಮಾಡಿದ್ದರು. ಅಲ್ಲಿ ಗುಹೆಯಲ್ಲಿ ಧ್ಯಾನ ಮಾಡಿದರು. ಶ್ರೀ ಅರುಳ್ಮಿಗು ರಾಮನಾಥಸ್ವಾಮಿ ದೇವಸ್ಥಾನ, ಶ್ರೀ ರಂಗನಾಥಸ್ವಾಮಿ ದೇವಸ್ಥಾನ, ಕೋತಂಡರಾಮಸ್ವಾಮಿ ದೇವಸ್ಥಾನ ಮುಂತಾದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದರು.

6 / 7
ಈ ಹಿಂದೆ ಪ್ರಧಾನಿ ಮೋದಿ ಅವರು ತಮಿಳುನಾಡಿನಲ್ಲಿ ಚುನಾವಣೆ ಪ್ರಚಾರವನ್ನು ನಡೆಸಿದ್ದರು. ಭಾರತೀಯ ಜನತಾ ಪಕ್ಷ (ಬಿಜೆಪಿ) ದಕ್ಷಿಣ ಭಾರತದಲ್ಲಿ ಅಧಿಕಾರಕ್ಕೆ ತರಬೇಕು ಎಂಬ ಪ್ರಯತ್ನವನ್ನು ಮಾಡಿದ್ದಾರೆ. ಇದರ ಜತೆಗೆ  ತಮ್ಮ ಚುನಾವಣಾ ಪ್ರಚಾರ ಭಾಷಣಗಳಲ್ಲಿ ಪ್ರಧಾನಿಯವರು ತಮಿಳು ಸಂಸ್ಕೃತಿಯನ್ನೂ ಪ್ರಚಾರ ಮಾಡಿದರು.

ಈ ಹಿಂದೆ ಪ್ರಧಾನಿ ಮೋದಿ ಅವರು ತಮಿಳುನಾಡಿನಲ್ಲಿ ಚುನಾವಣೆ ಪ್ರಚಾರವನ್ನು ನಡೆಸಿದ್ದರು. ಭಾರತೀಯ ಜನತಾ ಪಕ್ಷ (ಬಿಜೆಪಿ) ದಕ್ಷಿಣ ಭಾರತದಲ್ಲಿ ಅಧಿಕಾರಕ್ಕೆ ತರಬೇಕು ಎಂಬ ಪ್ರಯತ್ನವನ್ನು ಮಾಡಿದ್ದಾರೆ. ಇದರ ಜತೆಗೆ ತಮ್ಮ ಚುನಾವಣಾ ಪ್ರಚಾರ ಭಾಷಣಗಳಲ್ಲಿ ಪ್ರಧಾನಿಯವರು ತಮಿಳು ಸಂಸ್ಕೃತಿಯನ್ನೂ ಪ್ರಚಾರ ಮಾಡಿದರು.

7 / 7
Follow us
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ