Kantara: ಹಿಂದಿಯಲ್ಲೂ 100 ದಿನ ಪೂರೈಸಿದ ‘ಕಾಂತಾರ’ ಚಿತ್ರ; ರಿಷಬ್​ ಶೆಟ್ಟಿಗೆ ಉತ್ತರ ಭಾರತದಲ್ಲಿ ಭರ್ಜರಿ ಮೆಚ್ಚುಗೆ

Rishab Shetty | Kantara Movie: ‘ಕಾಂತಾರ’ ಸಿನಿಮಾಗೆ ಈ ಪರಿ ಮೆಚ್ಚುಗೆ ಸಿಕ್ಕಿರುವುದಕ್ಕೆ ರಿಷಬ್​ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ. ಯಶಸ್ಸು ಸಿಗಲು ಕಾರಣವಾದ ಎಲ್ಲರಿಗೂ ಅವರು ಧನ್ಯವಾದ ಅರ್ಪಿಸಿದ್ದಾರೆ.

|

Updated on:Jan 22, 2023 | 6:21 PM

ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ’ ಸಿನಿಮಾ ಮಾಡಿದ ದಾಖಲೆಗಳ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ದೇಶಾದ್ಯಂತ ಅಬ್ಬರಿಸಿದ ಈ ಚಿತ್ರ ಹಿಂದಿಯಲ್ಲೂ 100 ದಿನಗಳನ್ನು ಪೂರೈಸಿದೆ.

ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ’ ಸಿನಿಮಾ ಮಾಡಿದ ದಾಖಲೆಗಳ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ದೇಶಾದ್ಯಂತ ಅಬ್ಬರಿಸಿದ ಈ ಚಿತ್ರ ಹಿಂದಿಯಲ್ಲೂ 100 ದಿನಗಳನ್ನು ಪೂರೈಸಿದೆ.

1 / 5
‘ಕಾಂತಾರ’ ಚಿತ್ರ ಕನ್ನಡದಲ್ಲಿ ತೆರೆಕಂಡ ಬಳಿಕ ಬೇರೆ ಭಾಷೆಗಳಿಂದಲೂ ಬೇಡಿಕೆ ಬಂತು. ಆಗ ಡಬ್​ ಮಾಡಿ ಬಿಡುಗಡೆ ಮಾಡಲಾಯಿತು. ಹಿಂದಿ ಪ್ರೇಕ್ಷಕರು ಈ ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಂಡರು. ಪರಿಣಾಮವಾಗಿ ಉತ್ತರ ಭಾರತದಲ್ಲಿ ಬಹುಕೋಟಿ ರೂಪಾಯಿ ಕಲೆಕ್ಷನ್​ ಆಯಿತು.

‘ಕಾಂತಾರ’ ಚಿತ್ರ ಕನ್ನಡದಲ್ಲಿ ತೆರೆಕಂಡ ಬಳಿಕ ಬೇರೆ ಭಾಷೆಗಳಿಂದಲೂ ಬೇಡಿಕೆ ಬಂತು. ಆಗ ಡಬ್​ ಮಾಡಿ ಬಿಡುಗಡೆ ಮಾಡಲಾಯಿತು. ಹಿಂದಿ ಪ್ರೇಕ್ಷಕರು ಈ ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಂಡರು. ಪರಿಣಾಮವಾಗಿ ಉತ್ತರ ಭಾರತದಲ್ಲಿ ಬಹುಕೋಟಿ ರೂಪಾಯಿ ಕಲೆಕ್ಷನ್​ ಆಯಿತು.

2 / 5
ಈ ಚಿತ್ರದಲ್ಲಿ ನಟಿಸಿದ ಎಲ್ಲರಿಗೂ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಸಿಕ್ಕಿದೆ. ರಿಷಬ್​ ಶೆಟ್ಟಿ, ಸಪ್ತಮಿ ಗೌಡ, ಮಾನಸಿ ಸುಧೀರ್​, ಅಚ್ಯುತ್​ ಕುಮಾರ್​, ಕಿಶೋರ್​ ಮುಂತಾದ ಕಲಾವಿದರ ನಟನೆಗೆ ಎಲ್ಲ ರಾಜ್ಯಗಳ ಜನರು ಭೇಷ್​ ಎಂದಿದ್ದಾರೆ.

ಈ ಚಿತ್ರದಲ್ಲಿ ನಟಿಸಿದ ಎಲ್ಲರಿಗೂ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಸಿಕ್ಕಿದೆ. ರಿಷಬ್​ ಶೆಟ್ಟಿ, ಸಪ್ತಮಿ ಗೌಡ, ಮಾನಸಿ ಸುಧೀರ್​, ಅಚ್ಯುತ್​ ಕುಮಾರ್​, ಕಿಶೋರ್​ ಮುಂತಾದ ಕಲಾವಿದರ ನಟನೆಗೆ ಎಲ್ಲ ರಾಜ್ಯಗಳ ಜನರು ಭೇಷ್​ ಎಂದಿದ್ದಾರೆ.

3 / 5
ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ‘ಕಾಂತಾರ’ ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದರು. ಕಂಗನಾ ರಣಾವತ್​, ವಿವೇಕ್​ ಅಗ್ನಿಹೋತ್ರಿ, ಹೃತಿಕ್​ ರೋಷನ್​ ಮುಂತಾದವರಿಗೆ ಈ ಸಿನಿಮಾ ತುಂಬ ಇಷ್ಟವಾಯಿತು. ಮುಂಬೈನಲ್ಲಿ ಕನ್ನಡ ವರ್ಷನ್​ ಕೂಡ ಹೌಸ್​ಫುಲ್ ಪ್ರದರ್ಶನ ಕಂಡಿದ್ದು ವಿಶೇಷ.

ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ‘ಕಾಂತಾರ’ ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದರು. ಕಂಗನಾ ರಣಾವತ್​, ವಿವೇಕ್​ ಅಗ್ನಿಹೋತ್ರಿ, ಹೃತಿಕ್​ ರೋಷನ್​ ಮುಂತಾದವರಿಗೆ ಈ ಸಿನಿಮಾ ತುಂಬ ಇಷ್ಟವಾಯಿತು. ಮುಂಬೈನಲ್ಲಿ ಕನ್ನಡ ವರ್ಷನ್​ ಕೂಡ ಹೌಸ್​ಫುಲ್ ಪ್ರದರ್ಶನ ಕಂಡಿದ್ದು ವಿಶೇಷ.

4 / 5
‘ಕಾಂತಾರ’ ಚಿತ್ರದ ಭರ್ಜರಿ ಯಶಸ್ಸಿನಿಂದಾಗಿ ‘ಕಾಂತಾರ 2’ ಬಗ್ಗೆ ನಿರೀಕ್ಷೆ ಮೂಡಿದೆ. ರಿಷಬ್​ ಶೆಟ್ಟಿ ಅವರು ಈಗ ಅದಕ್ಕಾಗಿ ಕಥೆ ಸಿದ್ಧಪಡಿಸುತ್ತಿದ್ದಾರೆ. ಜೂನ್​ ತಿಂಗಳಿಂದ ಪಾರ್ಟ್​ 2 ಶೂಟಿಂಗ್​ ಶುರುವಾಗಲಿದೆ. ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಮಾಡಲು ವಿಜಯ್​ ಕಿರಗಂದೂರು ಸಜ್ಜಾಗಿದ್ದಾರೆ.

‘ಕಾಂತಾರ’ ಚಿತ್ರದ ಭರ್ಜರಿ ಯಶಸ್ಸಿನಿಂದಾಗಿ ‘ಕಾಂತಾರ 2’ ಬಗ್ಗೆ ನಿರೀಕ್ಷೆ ಮೂಡಿದೆ. ರಿಷಬ್​ ಶೆಟ್ಟಿ ಅವರು ಈಗ ಅದಕ್ಕಾಗಿ ಕಥೆ ಸಿದ್ಧಪಡಿಸುತ್ತಿದ್ದಾರೆ. ಜೂನ್​ ತಿಂಗಳಿಂದ ಪಾರ್ಟ್​ 2 ಶೂಟಿಂಗ್​ ಶುರುವಾಗಲಿದೆ. ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಮಾಡಲು ವಿಜಯ್​ ಕಿರಗಂದೂರು ಸಜ್ಜಾಗಿದ್ದಾರೆ.

5 / 5

Published On - 6:21 pm, Sun, 22 January 23

Follow us
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​