Karnataka Assembly Elections 2023: ವಿಧಾನ ಪರಿಷತ್​ನಲ್ಲಿ ಬಿಜೆಪಿಗೆ ಹೊಡೆತ ಕೊಟ್ಟ ವಿಧಾನಸಭೆ ಚುನಾವಣೆ

|

Updated on: Apr 12, 2023 | 3:33 PM

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಹೈಕಮಾಂಡ್ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಆದ್ರೆ, ಬಿಜೆಪಿ ಟಿಕೆಟ್​ ಸಿಗಬಹುದು ಎನ್ನುವ ನಿರೀಕ್ಷೆ ಇಟ್ಟುಕೊಂಡಿದ್ದ ಹಲವರಿಗೆ ನಿರಾಸೆಯಾಗಿದೆ. ಬಿಜೆಪಿ ಹೈಕಮಾಂಡ್​ ತನ್ನ ರಣತಂತ್ರಗಳ ಮೂಲಕ ಹೊಸ ಮುಖಗಳಿಗೆ ಮಣೆ ಹಾಕಿದ್ದು, ಹೊಸ ಪ್ರಯೋಗಕ್ಕೆ ಮುಂದಾಗಿದೆ. ಇತ್ತ ಕರ್ನಾಟಕ ಬಿಜೆಪಿಯಲ್ಲಿ ಬಂಡಾಯ ಶುರುವಾಗಿದೆ. ಅದರಲ್ಲೂ ವಿಧಾನ ಪರಿಷತ್​ನಲ್ಲಿ ಬಿಜೆಪಿಗೆ ಈ ವಿಧಾನಸಭೆ ಚುನಾವಣೆ ಭಾರೀ ಹೊಡೆತ ಕೊಟ್ಟಿದೆ.

1 / 8
ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ ವಿಧಾನ ಪರಿಷತ್​ನಲ್ಲಿ ಬಿಜೆಪಿಗೆ ಹೊಡೆತ ಕೊಟ್ಟಿದೆ.

ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ ವಿಧಾನ ಪರಿಷತ್​ನಲ್ಲಿ ಬಿಜೆಪಿಗೆ ಹೊಡೆತ ಕೊಟ್ಟಿದೆ.

2 / 8
ವಿಧಾನಸಭೆಗೆ ಟಿಕೆಟ್ ನೀಡದ್ದಕ್ಕೆ ಮುನಿಸಿಕೊಂಡು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಒಬ್ಬರಿಂದೊಬ್ಬರು ಬಿಜೆಪಿ ತೊರೆಯುತ್ತಿದ್ದಾರೆ.

ವಿಧಾನಸಭೆಗೆ ಟಿಕೆಟ್ ನೀಡದ್ದಕ್ಕೆ ಮುನಿಸಿಕೊಂಡು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಒಬ್ಬರಿಂದೊಬ್ಬರು ಬಿಜೆಪಿ ತೊರೆಯುತ್ತಿದ್ದಾರೆ.

3 / 8
ಈಗಾಗಲೇ ಬಿಜೆಪಿ ವಿಧಾನಪರಿಸತ್ ಸದಸ್ಯರಾಗಿದ್ದ ಪುಟಣ್ಣ ಅವರು ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್​ನಿಂದ ರಾಜಾಜಿನಗರ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ.

ಈಗಾಗಲೇ ಬಿಜೆಪಿ ವಿಧಾನಪರಿಸತ್ ಸದಸ್ಯರಾಗಿದ್ದ ಪುಟಣ್ಣ ಅವರು ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್​ನಿಂದ ರಾಜಾಜಿನಗರ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ.

4 / 8
ಮಾಜಿ ಉಪಮುಖ್ಯಮಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

5 / 8
ಇನ್ನು ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಪ್ರಮುಖ ಪಾತ್ರವಹಿಸಿದ್ದ ವಿಧಾನಪರಿಷತ್ ಸದಸ್ಯ ಹೆಚ್​ ವಿಶ್ವನಾಥ್ ಈಗಾಗಲೇ ಬಹಿರಂಗವಾಗಿಯೇ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಕಾನೂನು ತೊಡಕು ಇರುವುದರಿಂದ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ​

ಇನ್ನು ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಪ್ರಮುಖ ಪಾತ್ರವಹಿಸಿದ್ದ ವಿಧಾನಪರಿಷತ್ ಸದಸ್ಯ ಹೆಚ್​ ವಿಶ್ವನಾಥ್ ಈಗಾಗಲೇ ಬಹಿರಂಗವಾಗಿಯೇ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಕಾನೂನು ತೊಡಕು ಇರುವುದರಿಂದ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ​

6 / 8
ಇನ್ನು ಶಿವಮೊಗ್ಗ ನಗರ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿರುವ ಆಯನೂರು ಮಂಜುನಾಥ್​ ಸಹ ವಿಧಾನಪರಿಷತ್ ಸದಸ್ಯತ್ವಕ್ಕೆ ಶೀಘ್ರವೇ ರಾಜೀನಾಮೆ ನೀಡುವುದಾಗಿ ಈಗಾಗಲೇ ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ. ಆದ್ರೆ, ಶಿವಮೊಗ್ಗ ಟಿಕೆಟ್​ ಯಾರಿಗೆ ನೀಡುತ್ತಾರೆ ಎನ್ನುವುದರ ಮೇಲೆ ಅವರ ತೀರ್ಮಾನ ನಿರ್ಧಾರವಾಗಲಿದೆ..

ಇನ್ನು ಶಿವಮೊಗ್ಗ ನಗರ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿರುವ ಆಯನೂರು ಮಂಜುನಾಥ್​ ಸಹ ವಿಧಾನಪರಿಷತ್ ಸದಸ್ಯತ್ವಕ್ಕೆ ಶೀಘ್ರವೇ ರಾಜೀನಾಮೆ ನೀಡುವುದಾಗಿ ಈಗಾಗಲೇ ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ. ಆದ್ರೆ, ಶಿವಮೊಗ್ಗ ಟಿಕೆಟ್​ ಯಾರಿಗೆ ನೀಡುತ್ತಾರೆ ಎನ್ನುವುದರ ಮೇಲೆ ಅವರ ತೀರ್ಮಾನ ನಿರ್ಧಾರವಾಗಲಿದೆ..

7 / 8
ರಾಣೇಬೆನ್ನೂರು ಕ್ಷೇತ್ರದ ಟಿಕೆಟ್​ ಕೈತಪ್ಪಿದ್ದಕ್ಕೆ ಬಿಜೆಪಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ಆರ್. ಶಂಕರ್ ಇಂದು ರಾಜೀನಾಮೆ ನೀಡಲಿದ್ದಾರೆ.

ರಾಣೇಬೆನ್ನೂರು ಕ್ಷೇತ್ರದ ಟಿಕೆಟ್​ ಕೈತಪ್ಪಿದ್ದಕ್ಕೆ ಬಿಜೆಪಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ಆರ್. ಶಂಕರ್ ಇಂದು ರಾಜೀನಾಮೆ ನೀಡಲಿದ್ದಾರೆ.

8 / 8
ಸಭಾಪತಿ ಸೇರಿ ವಿಧಾನ ಪರಿಷತ್ ನಲ್ಲಿ 40 ಸದಸ್ಯ ಬಲ ಹೊಂದಿರುವ ಬಿಜೆಪಿ, ಸುದೀರ್ಘ ಸಮಯದ ಬಳಿಕ ವಿಧಾನ ಪರಿಷತ್ ನಲ್ಲಿ ಬಹುಮತ ಪಡೆದಿದೆ. ಆದ್ರೆ, ವಿಧಾನಸಭೆ ಚುನಾವಣೆ ಮುಗಿಯುವ ವೇಳೆಗೆ ಬಿಜೆಪಿ ಸದಸ್ಯ ಬಲ 40 ರಿಂದ 34 ಕ್ಕೆ ಕುಸಿಯುವ ಸಾಧ್ಯತೆ ಇದೆ.

ಸಭಾಪತಿ ಸೇರಿ ವಿಧಾನ ಪರಿಷತ್ ನಲ್ಲಿ 40 ಸದಸ್ಯ ಬಲ ಹೊಂದಿರುವ ಬಿಜೆಪಿ, ಸುದೀರ್ಘ ಸಮಯದ ಬಳಿಕ ವಿಧಾನ ಪರಿಷತ್ ನಲ್ಲಿ ಬಹುಮತ ಪಡೆದಿದೆ. ಆದ್ರೆ, ವಿಧಾನಸಭೆ ಚುನಾವಣೆ ಮುಗಿಯುವ ವೇಳೆಗೆ ಬಿಜೆಪಿ ಸದಸ್ಯ ಬಲ 40 ರಿಂದ 34 ಕ್ಕೆ ಕುಸಿಯುವ ಸಾಧ್ಯತೆ ಇದೆ.

Published On - 12:31 pm, Wed, 12 April 23