
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವ ಸಾಧ್ಯತೆ ದಟ್ಟವಾಗಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಸಾಧಿಸುವ ಸೂಚನೆ ಸಿಗುತ್ತಿದ್ದಂತೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಕುಣಿದು ಕುಪ್ಪಳಿಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರು ಭರ್ಜರಿ ಆಗಿ ಸ್ಟೆಪ್ ಹಾಕಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಬಿಜೆಪಿಯ ಪ್ರಮುಖ ನಾಯಕರು ಸೋತಿದ್ದಾರೆ. ಸಚಿವ ಸ್ಥಾನದಲ್ಲಿದ್ದವರೂ ಸೋತಿದ್ದಾರೆ. ಕಾಂಗ್ರೆಸ್ ಕಚೇರಿ ಎದುರು ಪಟಾಕಿ ಹೊಡೆದು ಸಂಭ್ರಮಿಸಲಾಗಿದೆ.

ಕಾಂಗ್ರೆಸ್ ಸರ್ಕಾರ ರಚಿಸಿದ ಬಳಿಕ ಯಾರು ಸಿಎಂ ಆಗಬಹುದು ಎನ್ನುವ ಕುತೂಹಲ ಮೂಡಿದೆ.