
ಮಡಿಕೇರಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ನಗರದ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಗರದ ಮುಖ್ಯ ರಸ್ತೆಯಲ್ಲಿ ರೋಡ್ ಶೋ ನಡೆಸಿದರು. ಇನ್ನು ಸಮಯ ಕಡಿಮೆ ಇದ್ದ ಕಾರಣ ರೋಡ್ ಶೋವನ್ನು ಅರ್ಧಕ್ಕೆ ಮೊಟಕುಗೊಳಿಸಿದರು.

ಮೈಸೂರಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿವೇಕಾನಂದ ವೃತ್ತದಲ್ಲಿ ಪ್ರಚಾರ ಸಭೆ ನಡೆಸಿದರು. ಸಮಾವೇಶದಲ್ಲಿ ಉರಿಗೌಡ, ನಂಜೇಗೌಡ ಬಗ್ಗೆ ರಾಜನಾಥ್ ಸಿಂಗ್ ಪ್ರಸ್ತಾಪಿಸಿದ್ದು ಅನುವಾದ ಮಾಡುವಾಗ ಗೋ.ಮಧುಸೂಧನ್ ಈ ಬಗ್ಗೆ ಹೇಳಲಿಲ್ಲ.

ಮುದ್ರಣ ಕಾಶಿ ಗದಗ ಜಿಲ್ಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ ಶಿಕಾರಿ ಮಾಡಿದ್ದಾರೆ. ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ ಡಂಬಳ ಗ್ರಾಮದಲ್ಲಿ ಮತಯಾಚನೆ ಮಾಡಿದರು.

ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಿದರು. ಇನ್ನು ರೋಡ್ ಶೋ ವೇಳೆ ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲಿ ಭಾಷಣ ಮಾಡಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮಂಡ್ಯದಲ್ಲಿ ಪ್ರಚಾರ ನಡೆಸಿದರು.
Published On - 3:39 pm, Sat, 29 April 23