Karnataka Assembly Elections 2023: ರಾಜ್ಯದಲ್ಲಿ ರಾಷ್ಟ್ರ ನಾಯಕರ ರೋಡ್ ಶೋ, ಇಲ್ಲಿದೆ ಫೋಟೋಸ್

ಆಯೇಷಾ ಬಾನು

Updated on: Apr 29, 2023 | 3:39 PM

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ರಾಷ್ಟ್ರ ನಾಯಕರು ಕರ್ನಾಟಕಕ್ಕೆ ಭೇಟಿ ನೀಡಿದ್ದು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಮಡಿಕೇರಿಯಲ್ಲಿ ಕೇಂದ್ರ ಸಚಿವ ಅಮಿತ್​ ಶಾ ರೋಡ್​ ಶೋ ನಡೆಸಿದ್ದಾರೆ. ಮೈಸೂರಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಬ್ಬರದ ಪ್ರಚಾರ ನಡೆಸಿದ್ದಾರೆ.

1 / 5
ಮಡಿಕೇರಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ನಗರದ ಚೌಡೇಶ್ವರಿ ದೇವಾಲಯದಲ್ಲಿ‌ ವಿಶೇಷ ಪೂಜೆ ಸಲ್ಲಿಸಿ ನಗರದ ಮುಖ್ಯ ರಸ್ತೆಯಲ್ಲಿ ರೋಡ್ ಶೋ ನಡೆಸಿದರು. ಇನ್ನು ಸಮಯ ಕಡಿಮೆ ಇದ್ದ ಕಾರಣ ರೋಡ್​ ಶೋವನ್ನು ಅರ್ಧಕ್ಕೆ ಮೊಟಕುಗೊಳಿಸಿದರು.

ಮಡಿಕೇರಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ನಗರದ ಚೌಡೇಶ್ವರಿ ದೇವಾಲಯದಲ್ಲಿ‌ ವಿಶೇಷ ಪೂಜೆ ಸಲ್ಲಿಸಿ ನಗರದ ಮುಖ್ಯ ರಸ್ತೆಯಲ್ಲಿ ರೋಡ್ ಶೋ ನಡೆಸಿದರು. ಇನ್ನು ಸಮಯ ಕಡಿಮೆ ಇದ್ದ ಕಾರಣ ರೋಡ್​ ಶೋವನ್ನು ಅರ್ಧಕ್ಕೆ ಮೊಟಕುಗೊಳಿಸಿದರು.

2 / 5

ಮೈಸೂರಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿವೇಕಾನಂದ ವೃತ್ತದಲ್ಲಿ ಪ್ರಚಾರ ಸಭೆ ನಡೆಸಿದರು. ಸಮಾವೇಶದಲ್ಲಿ ಉರಿಗೌಡ, ನಂಜೇಗೌಡ ಬಗ್ಗೆ ರಾಜನಾಥ್​ ಸಿಂಗ್ ಪ್ರಸ್ತಾಪಿಸಿದ್ದು ಅನುವಾದ ಮಾಡುವಾಗ ಗೋ.ಮಧುಸೂಧನ್ ಈ ಬಗ್ಗೆ ಹೇಳಲಿಲ್ಲ.

3 / 5

ಮುದ್ರಣ ಕಾಶಿ ಗದಗ ಜಿಲ್ಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ ಶಿಕಾರಿ ಮಾಡಿದ್ದಾರೆ. ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ ಡಂಬಳ ಗ್ರಾಮದಲ್ಲಿ ಮತಯಾಚನೆ ಮಾಡಿದರು.

4 / 5

ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಿದರು. ಇನ್ನು ರೋಡ್​ ಶೋ ವೇಳೆ ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲಿ ಭಾಷಣ ಮಾಡಿದರು.

5 / 5

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮಂಡ್ಯದಲ್ಲಿ ಪ್ರಚಾರ ನಡೆಸಿದರು.

Published On - 3:39 pm, Sat, 29 April 23

Loading...
Unable to load recommendations.
Follow Us