AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP Candidates List: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬಕ್ಕೆ ಕಾರಣಗಳು ಹಲವು; ಇಲ್ಲಿವೆ ನೋಡಿ

ರಾಜ್ಯ ವಿಧಾನಸಭೆ ಚುನಾವಣೆಗಾಗಿ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಕಳೆದೆರಡು ದಿನಗಳಿಂದ ದೆಹಲಿಯಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಹೈಕಮಾಂಡ್ ಸಭೆ ನಡೆಸುತ್ತಿದೆ. ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಿರಿಯ ನಾಯಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಆದಾಗ್ಯೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿದ್ದು, ಇದಕ್ಕೆ ಕೆಲವು ಕಾರಣಗಳಿವೆ. ಅವುಗಳ ವಿವರ ಇಲ್ಲಿದೆ.

ಗಣಪತಿ ಶರ್ಮಾ
|

Updated on: Apr 10, 2023 | 4:26 PM

Share
ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ ವಿಧಾನ ಪರಿಷತ್​ನಲ್ಲಿ ಬಿಜೆಪಿಗೆ ಹೊಡೆತ ಕೊಟ್ಟಿದೆ.

ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ ವಿಧಾನ ಪರಿಷತ್​ನಲ್ಲಿ ಬಿಜೆಪಿಗೆ ಹೊಡೆತ ಕೊಟ್ಟಿದೆ.

1 / 6
Karnataka Assembly Elections 2023 BJP Candidates list delaying reasons are here in Kannada

ತಮ್ಮ ಜೊತೆಗೆ ತಮ್ಮ ಪುತ್ರರಿಗೂ ಕೆಲವು ನಾಯಕರು ಟಿಕೆಟ್ ಕೇಳಿದ್ದಾರೆ‌. ಅಪ್ಪ, ಮಕ್ಕಳಿಗೆ ಟಿಕೆಟ್ ಕೊಡುವುದಾದರೆ ನಮಗೂ ಕೊಡಿ ಎಂದಿದ್ದಾರೆ. ಅಪ್ಪ ಮತ್ತು ಮಕ್ಕಳಿಗೆ ಟಿಕೆಟ್ ಕೊಟ್ಟರೆ ಗೆಲ್ಲುತ್ತಾ ಇಲ್ಲವಾ? ಮಕ್ಕಳಿಗೆ ಕ್ಷೇತ್ರಗಳು ಯಾವುವು ಅನ್ನೋ ಚರ್ಚೆ ನಡೆದಿದೆ.

2 / 6
Karnataka Assembly Elections 2023 BJP Candidates list delaying reasons are here in Kannada

ಎಂಎಲ್​​ಸಿಗಳು ಕೂಡ ಟಿಕೆಟ್ ಕೇಳುತ್ತಿದ್ದಾರೆ. ಲಕ್ಷ್ಮಣ ಸವದಿ, ಆಯನೂರು ಮಂಜುನಾಥ್, ಯೋಗೇಶ್ವರ್ ಟಿಕೆಟ್ ಕೇಳುತ್ತಿದ್ದಾರೆ. ಸಂಸದ ಕರಡಿ ಸಂಗಣ್ಣ ಕೂಡ ಟಿಕೆಟ್ ಕೇಳುತ್ತಿದ್ದಾರೆ.

3 / 6
Karnataka Assembly Elections 2023 BJP Candidates list delaying reasons are here in Kannada

ಕಾಂಗ್ರೆಸ್, ಜೆಡಿಎಸ್ ಘಟಾನುಘಟಿ ನಾಯಕರಿಗೆ ಖೆಡ್ಡಾ ತೋಡಲು, ಪ್ರಬಲ ಅಭ್ಯರ್ಥಿಗಳ ಹುಡುಕಾಟದಲ್ಲಿದೆ ಹೈಕಮಾಂಡ್. ಕೆಲವು ನಾಯಕರಿಗೆ ಎರಡು ಕ್ಷೇತ್ರಗಳಲ್ಲಿ ಟಿಕೆಟ್ ನೀಡುವ ಬಗ್ಗೆಯೂ ಚರ್ಚೆ ನಡೆದಿದೆ.

4 / 6
Karnataka Assembly Elections 2023 BJP Candidates list delaying reasons are here in Kannada

30ರಿಂದ 40 ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಯಾರಿಗೆ ಟಿಕೆಟ್ ಕೊಡಬೇಕು ಎಂದು ನಿರ್ಧರಿಸುವುದು ಕಷ್ಟವಾಗುತ್ತಿದೆ‌. ಕ್ಷೇತ್ರಗಳಿಂದ ಮತ್ತೊಮ್ಮೆ ಅಭಿಪ್ರಾಯ ಸಂಗ್ರಹಿಸಿ ವರದಿ ತರಿಸಿಕೊಳ್ಳುವಂತೆ ಸೂಚಿಸಲಾಗಿದೆ.

5 / 6
Karnataka Assembly Elections 2023 BJP Candidates list delaying reasons are here in Kannada

ಎಲ್ಲಾ 224 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಿಯೇ ದೆಹಲಿಯಿಂದ ಹೊರಬೇಕು ಎಂದು ರಾಜ್ಯನಾಯಕರು ನಿರ್ಧರಿಸಿದ್ದಾರೆ. ಹೀಗಾಗಿ ಗೊಂದಲವಿರುವ ಕ್ಷೇತ್ರಗಳಲ್ಲಿ ಒಮ್ಮತದ ಅಭ್ಯರ್ಥಿ ಹೆಸರಿಸುವುದು ಕಷ್ಟವಾಗಿದೆ.

6 / 6
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!