Vishnuvardhan Smaraka: ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ; ಕೊನೆಗೂ ಈಡೇರಿತು ಅಭಿಮಾನಿಗಳ ಬಹುವರ್ಷದ ಬೇಡಿಕೆ
Vishnuvardhan Smaraka Photos: ‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. ಇಂದು (ಜ.29) ನಡೆದ ಕಾರ್ಯಕ್ರಮದ ಕೆಲವು ಫೋಟೋಗಳು ಇಲ್ಲಿವೆ..
Updated on: Jan 29, 2023 | 6:21 PM

ವಿಷ್ಣುವರ್ಧನ್ ಅವರು ನಿಧನರಾಗಿ ಹಲವು ವರ್ಷಗಳೇ ಕಳೆದಿದ್ದರೂ ಸ್ಮಾರಕ ನಿರ್ಮಾಣ ಆಗಿರಲಿಲ್ಲ. ಆದರೆ ಇಂದು (ಜ.29) ಮೈಸೂರಿನಲ್ಲಿ ಭವ್ಯವಾದ ಸ್ಮಾರಕ ಲೋಕಾರ್ಪಣೆ ಆಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಷ್ಣುವರ್ಧನ್ ಸ್ಮಾರಕವನ್ನು ಉದ್ಘಾಟನೆ ಮಾಡಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಸಮ್ಮುಖದಲ್ಲಿ ಈ ಸಮಾರಂಭ ನಡೆಯಿತು. ಈ ಪ್ರಯುಕ್ತ ಫ್ಯಾನ್ಸ್ ರಕ್ತದಾನ, ಅನ್ನದಾನ ಮುಂತಾದ ಜನಪರ ಕಾರ್ಯಕ್ರಮ ನಡೆಸಿದರು.

‘ನಾನು ಈ ಕಾರ್ಯಕ್ರಮಕ್ಕೆ ವಿಷ್ಣುವರ್ಧನ್ ಅಭಿಮಾನಿಯಾಗಿ ಬಂದಿದ್ದೇನೆ. ಅವರ ಕಲೆ, ಸಾಹಸ, ಸಾಧನೆ ಎಲ್ಲವೂ ನಮ್ಮ ಕಣ್ಣ ಮುಂದಿದೆ’ ಎಂದು ಸ್ಮಾರಕ ಉದ್ಘಾಟನೆ ಬಳಿಕ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

‘ಸಾಹಸ ಸಿಂಹ’ ಅವರ ಸ್ಮಾರಕ ನಿರ್ಮಾಣ ಆಗಬೇಕು ಎಂದು ಅಭಿಮಾನಿಗಳು ಮತ್ತು ಕುಟುಂಬದವರು ಹಲವು ವರ್ಷಗಳಿಂದ ಶ್ರಮಿಸುತ್ತಿದ್ದರು. ಅದಕ್ಕೆ ಹಲವು ಅಡೆತಡೆಗಳು ಕೂಡ ಉಂಟಾಗಿದ್ದವು. ಅಂತಿಮವಾಗಿ ಅವರ ಶ್ರಮಕ್ಕೆ ಫಲ ಸಿಕ್ಕಿದೆ.

ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಆಗಿರುವುದಕ್ಕೆ ಅನೇಕ ಸೆಲೆಬ್ರಿಟಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಶಿವರಾಜ್ಕುಮಾರ್, ಕಿಚ್ಚ ಸುದೀಪ್ ಸೇರಿದಂತೆ ಅನೇಕ ಕಲಾವಿದರು ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಖುಷಿಪಟ್ಟಿದ್ದಾರೆ.

ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಅವರ ಸಮಾಧಿ ಇದೆ. ಅದನ್ನು ಪುಣ್ಯಭೂಮಿ ಎಂದು ಫ್ಯಾನ್ಸ್ ಗೌರವಿಸುತ್ತಾರೆ. ಬೆಂಗಳೂರಿನಿಂದ ಅಪಾರ ಸಂಖ್ಯೆಯ ಅಭಿಮಾನಿಗಳು ಮೈಸೂರಿಗೆ ತೆರಳಿ ಸ್ಮಾರಕದ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದಾರೆ.

11 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅನೇಕ ಚಟುವಟಿಕೆಗಳು ಇಲ್ಲಿ ನಡೆಯಲಿವೆ. ರಾಜ್ಯದ ಮೂಲೆ ಮೂಲೆಯಿಂದ ಬರುವ ಅಭಿಮಾನಿಗಳು ವಿಷ್ಣು ದಾದಾಗೆ ನಮನ ಸಲ್ಲಿಸುತ್ತಿದ್ದಾರೆ.

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್ ಇಂಟರ್ನೆಟ್) ಸಂಸ್ಥೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್ ಸಾಹಿತ್ಯದ ವಿದ್ಯಾರ್ಥಿ.
Read More



