AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRS Dam: ಮೂರನೇ ಬಾರಿಗೆ ಕಾವೇರಿಗೆ ಬಾಗಿನ ಅರ್ಪಿಸಿದ ನಾಡದೊರೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆಯಾಗುತ್ತಿದೆ. ಹೀಗಾಗಿ ಜೀವನದಿ ಕಾವೇರಿ ಅಪಾಯದ ಮಟ್ಟವನ್ನ ಮೀರಿ ಹರಿಯುತ್ತಿದ್ದಾಳೆ. ಅಷ್ಟೇ ಅಲ್ಲ ನದಿ ತಟದಲ್ಲಿ ಪ್ರವಾಹ ಭೀತಿಯನ್ನು ಕೂಡ ಸೃಷ್ಠಿ ಮಾಡಿದ್ದಾಳೆ. ಈ ಮಧ್ಯೆ ಸಂಪೂರ್ಣ ಭರ್ತಿಯಾಗಿರೊ ಕನ್ನಂಬಾಡಿ ಅಣೆಕಟ್ಟಿಗೆ ಸಿಎಂ ಹಾಗೂ ಡಿಸಿಎಂ ಬಾಗಿನ ಅರ್ಪಿಸಿದ್ದಾರೆ.

ಆಯೇಷಾ ಬಾನು
ಆಯೇಷಾ ಬಾನು|

Updated on: Jul 29, 2024 | 12:48 PM

Share
ಕಾವೇರಿ ಜಲನಯನ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಧಾರಕಾರ ಮಳೆಯಾಗುತ್ತಿದೆ. ಮಳೆರಾಯನ ಆರ್ಭಟಕ್ಕೆ ಮಂಡ್ಯ ಜಿಲ್ಲೆ ಶ್ರೀರಂಗಟ್ಟಣ ತಾಲೂಕಿನ ಕೆಆರ್​ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜೀವನದಿ ಕಾವೇರಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ.

ಕಾವೇರಿ ಜಲನಯನ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಧಾರಕಾರ ಮಳೆಯಾಗುತ್ತಿದೆ. ಮಳೆರಾಯನ ಆರ್ಭಟಕ್ಕೆ ಮಂಡ್ಯ ಜಿಲ್ಲೆ ಶ್ರೀರಂಗಟ್ಟಣ ತಾಲೂಕಿನ ಕೆಆರ್​ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜೀವನದಿ ಕಾವೇರಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ.

1 / 8
ಎರಡು ವರ್ಷಗಳ ನಂತರ ಹಳೇ ಮೈಸೂರ ಭಾಗದ ಜೀವನದಿ ಕಾವೇರಿ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೆಆರ್​ಎಸ್ ಜಲಾಶಯದಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ್ದಾರೆ.

ಎರಡು ವರ್ಷಗಳ ನಂತರ ಹಳೇ ಮೈಸೂರ ಭಾಗದ ಜೀವನದಿ ಕಾವೇರಿ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೆಆರ್​ಎಸ್ ಜಲಾಶಯದಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ್ದಾರೆ.

2 / 8
ಸಿಎಂ, ಡಿಸಿಎಂಗೆ ಸಚಿವರಾದ ಎನ್​.ಚಲುವರಾಯಸ್ವಾಮಿ, ಹೆಚ್​.ಸಿ.ಮಹದೇವಪ್ಪ, ಕೆ.ವೆಂಕಟೇಶ್​, ಕಾಂಗ್ರೆಸ್ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ತನ್ವೀರ್ ಸೇಠ್​​, ರವಿಕುಮಾರ್​ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.

ಸಿಎಂ, ಡಿಸಿಎಂಗೆ ಸಚಿವರಾದ ಎನ್​.ಚಲುವರಾಯಸ್ವಾಮಿ, ಹೆಚ್​.ಸಿ.ಮಹದೇವಪ್ಪ, ಕೆ.ವೆಂಕಟೇಶ್​, ಕಾಂಗ್ರೆಸ್ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ತನ್ವೀರ್ ಸೇಠ್​​, ರವಿಕುಮಾರ್​ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.

3 / 8
ಸಿಎಂ ಸಿದ್ದರಾಮಯ್ಯ ತಮ್ಮ ಅವಧಿಯಲ್ಲಿ ಮೂರನೇ ಬಾರಿಗೆ ಕೆಆರ್​ಎಸ್ ಗೆ ಬಾಗಿನ ಅರ್ಪಿಸಿದ್ದಾರೆ. ಹೀಗಾಗಿ ಜಿಲ್ಲಾಡಳಿತ ಎಲ್ಲ ಸಿದ್ದತೆ ಮಾಡಿಕೊಂಡಿದೆ.

ಸಿಎಂ ಸಿದ್ದರಾಮಯ್ಯ ತಮ್ಮ ಅವಧಿಯಲ್ಲಿ ಮೂರನೇ ಬಾರಿಗೆ ಕೆಆರ್​ಎಸ್ ಗೆ ಬಾಗಿನ ಅರ್ಪಿಸಿದ್ದಾರೆ. ಹೀಗಾಗಿ ಜಿಲ್ಲಾಡಳಿತ ಎಲ್ಲ ಸಿದ್ದತೆ ಮಾಡಿಕೊಂಡಿದೆ.

4 / 8
ಮೊದಲಿಗೆ ಸಿಎಂ ಸಿದ್ದರಾಮಯ್ಯನವರು ಬಾಗಿನಗಳಿಗೆ ಹೂ ಹಾಕಿ ಕೈ ಮುಗಿದು ಪೂಜೆ ಸಲ್ಲಿಸಿ ಬಳಿಕ ಕಾವೇರಿ ತಾಯಿಗೆ ಬಾಗಿನ ಅರ್ಪಿಸಿದರು. ಕಾವೇರಿ ಮಾತೆ ಪ್ರತಿಮೆಗೆ ಕೃಷಿ ಸಚಿವರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಪುಷ್ಪಾರ್ಚನೆ ಮಾಡಿದ್ರು.

ಮೊದಲಿಗೆ ಸಿಎಂ ಸಿದ್ದರಾಮಯ್ಯನವರು ಬಾಗಿನಗಳಿಗೆ ಹೂ ಹಾಕಿ ಕೈ ಮುಗಿದು ಪೂಜೆ ಸಲ್ಲಿಸಿ ಬಳಿಕ ಕಾವೇರಿ ತಾಯಿಗೆ ಬಾಗಿನ ಅರ್ಪಿಸಿದರು. ಕಾವೇರಿ ಮಾತೆ ಪ್ರತಿಮೆಗೆ ಕೃಷಿ ಸಚಿವರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಪುಷ್ಪಾರ್ಚನೆ ಮಾಡಿದ್ರು.

5 / 8
ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ವಿಶ್ವೇಶ್ವರಯ್ಯನವರ ಹೂವಿನ ಭಾವಚಿತ್ರ ನಿರ್ಮಾಣ ಮಾಡಿದ್ದು, ಕಾವೇರಿ ಮಾತೆ ಮೂರ್ತಿ ಹಸಿರು ಚಪ್ಪರದಿಂದ ಕಂಗೊಳಿಸುತ್ತಿದೆ.

ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ವಿಶ್ವೇಶ್ವರಯ್ಯನವರ ಹೂವಿನ ಭಾವಚಿತ್ರ ನಿರ್ಮಾಣ ಮಾಡಿದ್ದು, ಕಾವೇರಿ ಮಾತೆ ಮೂರ್ತಿ ಹಸಿರು ಚಪ್ಪರದಿಂದ ಕಂಗೊಳಿಸುತ್ತಿದೆ.

6 / 8
ಮೊದಲ ಬಾರಿಗೆ ಸಿಎಂ ಆದಾಗ 2013 ಹಾಗೂ 2014 ರಲ್ಲಿ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದರು. ಆನಂತರ ಬರಗಾಲ ಹಿನ್ನೆಲೆ ಜಲಾಶಯ ಭರ್ತಿಯಾಗಿರಲಿಲ್ಲ. ಎರಡನೇ ಅವಧಿಗೂ ಸಿಎಂ ಆದಗಲೂ 2023ರಲ್ಲಿ ಕನ್ನಂಬಾಡಿ ಅಣೆಕಟ್ಟು ಭರ್ತಿಯಾಗಿರಲಿಲ್ಲ. ಈ ವರ್ಷ ಸಂಪೂರ್ಣ ಭರ್ತಿಯಾಗಿದ್ದು ಬಾಗಿನ ಅರ್ಪಿಸಿದ್ದಾರೆ.

ಮೊದಲ ಬಾರಿಗೆ ಸಿಎಂ ಆದಾಗ 2013 ಹಾಗೂ 2014 ರಲ್ಲಿ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದರು. ಆನಂತರ ಬರಗಾಲ ಹಿನ್ನೆಲೆ ಜಲಾಶಯ ಭರ್ತಿಯಾಗಿರಲಿಲ್ಲ. ಎರಡನೇ ಅವಧಿಗೂ ಸಿಎಂ ಆದಗಲೂ 2023ರಲ್ಲಿ ಕನ್ನಂಬಾಡಿ ಅಣೆಕಟ್ಟು ಭರ್ತಿಯಾಗಿರಲಿಲ್ಲ. ಈ ವರ್ಷ ಸಂಪೂರ್ಣ ಭರ್ತಿಯಾಗಿದ್ದು ಬಾಗಿನ ಅರ್ಪಿಸಿದ್ದಾರೆ.

7 / 8
ಕೃಷಿ ಪ್ರದೇಶಕ್ಕೆ ಅಪಾರ ನೀರನ್ನೇ ಉಣಿಸಿದ್ದಾಳೆ ಕಾವೇರಿ ತಾಯಿ. ಮಂಡ್ಯ, ಮೈಸೂರು ಭಾಗದ ಜನರಿಗೆ, ಬೆಂಗಳೂರಿಗರಿಗೆ ಜೀವ ಜಲ.

ಕೃಷಿ ಪ್ರದೇಶಕ್ಕೆ ಅಪಾರ ನೀರನ್ನೇ ಉಣಿಸಿದ್ದಾಳೆ ಕಾವೇರಿ ತಾಯಿ. ಮಂಡ್ಯ, ಮೈಸೂರು ಭಾಗದ ಜನರಿಗೆ, ಬೆಂಗಳೂರಿಗರಿಗೆ ಜೀವ ಜಲ.

8 / 8
Follow Us
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ