AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿ ಕೋಟಿ ವಹಿವಾಟು ನಡೆಸುವ ಮೀನುಗಾರಿಕೆಗೆ ತಟ್ಟಿದ ತಾಪಮಾನದ ಬಿಸಿ: ಮೀನು ಸಿಗದೆ ಕಂಗಾಲಾದ ಮೊಗವೀರರು

ಕರ್ನಾಟಕದ ಕರಾವಳಿಯಲ್ಲಿ ಉಷ್ಣಾಂಶದ ಏರಿಕೆಯಿಂದಾಗಿ ತೀವ್ರ ಬಿಸಿಲಿನಿಂದಾಗಿ ಮೀನುಗಾರಿಕಾ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರಿದೆ. ಸಮುದ್ರದ ತಾಪಮಾನ ಹೆಚ್ಚಳದಿಂದಾಗಿ ಮೀನುಗಳು ಆಳಕ್ಕೆ ಹೋಗುತ್ತಿರುವುದರಿಂದ ಮೀನುಗಾರರು ತೀವ್ರ ನಷ್ಟ ಅನುಭವಿಸುವಂತಾಗಿದೆ. ಸಾವಿರಾರು ಬೋಟ್‌ಗಳು ಬಂದರಿನಲ್ಲೇ ಲಂಗರು ಹಾಕಿದ್ದು, ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ.

ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Mar 12, 2025 | 5:44 PM

Share
ರಾಜ್ಯ ಕರಾವಳಿಯಲ್ಲಿ ಬಿಸಿಗಾಳಿಯ ಜೊತೆ ಉಷ್ಣಾಂಶ ಏರಿಕೆಯಾಗಿ ವಾತಾವರಣ ಬೆಂಕಿ ಕೆಂಡದಂತಾಗಿದೆ. ಈ ನಡುವೆ ಸಮುದ್ರದಲ್ಲಿಯು ತಾಪಮಾನ ಹೆಚ್ಚಾಗಿ ಮತ್ಸ್ಯಕ್ಷಾಮ ಉಂಟಾಗಿದೆ. ಮನುಷ್ಯರಂತೆ ಮೀನುಗಳು ಸಹ ತಂಪಾದ ಸ್ಥಳ ಹುಡುಕಿಕೊಂಡು ಹೋದುದರ ಪರಿಣಾಮ ಸಾವಿರಾರು ಮೀನುಗಾರಿಕಾ ಬೋಟ್‌ಗಳು ಬಂದರಿನಲ್ಲೇ ಲಂಗರು ಹಾಕಿದೆ.

ರಾಜ್ಯ ಕರಾವಳಿಯಲ್ಲಿ ಬಿಸಿಗಾಳಿಯ ಜೊತೆ ಉಷ್ಣಾಂಶ ಏರಿಕೆಯಾಗಿ ವಾತಾವರಣ ಬೆಂಕಿ ಕೆಂಡದಂತಾಗಿದೆ. ಈ ನಡುವೆ ಸಮುದ್ರದಲ್ಲಿಯು ತಾಪಮಾನ ಹೆಚ್ಚಾಗಿ ಮತ್ಸ್ಯಕ್ಷಾಮ ಉಂಟಾಗಿದೆ. ಮನುಷ್ಯರಂತೆ ಮೀನುಗಳು ಸಹ ತಂಪಾದ ಸ್ಥಳ ಹುಡುಕಿಕೊಂಡು ಹೋದುದರ ಪರಿಣಾಮ ಸಾವಿರಾರು ಮೀನುಗಾರಿಕಾ ಬೋಟ್‌ಗಳು ಬಂದರಿನಲ್ಲೇ ಲಂಗರು ಹಾಕಿದೆ.

1 / 6
ಕಡಲನಗರಿ ಮಂಗಳೂರಿನಲ್ಲಿ ಹೊರಗೆ ಕಾಲಿಟ್ಟರೆ ಬಿಸಿ ಬಿಸಿ ಕೆಂಡದ ವಾತಾವರಣದಲ್ಲಿರುವ ಅನುಭವವಾಗುತ್ತಿದೆ. ಬಿಸಿಗಾಳಿಯ ಜೊತೆ ತಾಪಮಾನ ಏರಿಕೆಯಾಗಿರುವ ಪರಿಣಾಮ ಜನರಿಗೆ ಈಗಿನ ತಾಪಮಾನ ಸಹಿಸಲು ಅಸಾಧ್ಯವಾಗಿದೆ. ಈ ನಡುವೆ ಸಾವಿರಾರು ಕೋಟಿ ವಹಿವಾಟು ನಡೆಸುವ ಮೀನುಗಾರಿಕೆಗೂ ತಾಪಮಾನದ ಬಿಸಿ ತಟ್ಟಿದೆ. ಸಮುದ್ರದಲ್ಲಿ ತಾಪಮಾನ ಏರಿಕೆ ಆಗಿರುವುದರಿಂದ ಮೀನುಗಳು ತಳ ಸೇರುತ್ತಿದ್ದು, ಮೀನುಗಾರರು ಪರದಾಡುವಂತಾಗಿದೆ.

ಕಡಲನಗರಿ ಮಂಗಳೂರಿನಲ್ಲಿ ಹೊರಗೆ ಕಾಲಿಟ್ಟರೆ ಬಿಸಿ ಬಿಸಿ ಕೆಂಡದ ವಾತಾವರಣದಲ್ಲಿರುವ ಅನುಭವವಾಗುತ್ತಿದೆ. ಬಿಸಿಗಾಳಿಯ ಜೊತೆ ತಾಪಮಾನ ಏರಿಕೆಯಾಗಿರುವ ಪರಿಣಾಮ ಜನರಿಗೆ ಈಗಿನ ತಾಪಮಾನ ಸಹಿಸಲು ಅಸಾಧ್ಯವಾಗಿದೆ. ಈ ನಡುವೆ ಸಾವಿರಾರು ಕೋಟಿ ವಹಿವಾಟು ನಡೆಸುವ ಮೀನುಗಾರಿಕೆಗೂ ತಾಪಮಾನದ ಬಿಸಿ ತಟ್ಟಿದೆ. ಸಮುದ್ರದಲ್ಲಿ ತಾಪಮಾನ ಏರಿಕೆ ಆಗಿರುವುದರಿಂದ ಮೀನುಗಳು ತಳ ಸೇರುತ್ತಿದ್ದು, ಮೀನುಗಾರರು ಪರದಾಡುವಂತಾಗಿದೆ.

2 / 6
ಸಮುದ್ರದಲ್ಲಿ ಹೆಚ್ಚಾದ ತಾಪಮಾನದಿಂದ, ಹವಾಮಾನ ವೈಪರೀತ್ಯದಿಂದಾಗಿ ಮೀನುಗಳು ಮೀನುಗಾರರ ಬಲೆಗೆ ಬೀಳುತ್ತಿಲ್ಲ. ಪರಿಣಾಮ ಮೀನುಗಾರಿಕೆಗೆ ತೆರಳುತ್ತಿರುವ ಮೀನುಗಾರರು ಲಕ್ಷಾಂತರ ರೂ. ನಷ್ಟಕ್ಕೊಳಗಾಗುತ್ತಿದ್ದಾರೆ. ಮಂಗಳೂರು ಬಂದರಿನಲ್ಲಿ 1500ಕ್ಕೂ ಹೆಚ್ಚು ಆಳಸಮುದ್ರ ಮೀನುಗಾರಿಕಾ ಬೋಟ್‌ಗಳಿವೆ. ಮೇ ತಿಂಗಳ ಅಂತ್ಯದವರೆಗೆ ಈ ಬೋಟ್‌ಗಳು ನಿರಂತರವಾಗಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿರುತ್ತವೆ. ಆದರೆ ಇದೀಗ ಸಾವಿರಕ್ಕೂ ಅಧಿಕ ಬೋಟ್​​ಗಳು ಮೀನುಗಾರಿಕೆಗೆ ತೆರಳದೇ ಬಂದರಿನಲ್ಲೇ ಲಂಗರು ಹಾಕಿವೆ.

ಸಮುದ್ರದಲ್ಲಿ ಹೆಚ್ಚಾದ ತಾಪಮಾನದಿಂದ, ಹವಾಮಾನ ವೈಪರೀತ್ಯದಿಂದಾಗಿ ಮೀನುಗಳು ಮೀನುಗಾರರ ಬಲೆಗೆ ಬೀಳುತ್ತಿಲ್ಲ. ಪರಿಣಾಮ ಮೀನುಗಾರಿಕೆಗೆ ತೆರಳುತ್ತಿರುವ ಮೀನುಗಾರರು ಲಕ್ಷಾಂತರ ರೂ. ನಷ್ಟಕ್ಕೊಳಗಾಗುತ್ತಿದ್ದಾರೆ. ಮಂಗಳೂರು ಬಂದರಿನಲ್ಲಿ 1500ಕ್ಕೂ ಹೆಚ್ಚು ಆಳಸಮುದ್ರ ಮೀನುಗಾರಿಕಾ ಬೋಟ್‌ಗಳಿವೆ. ಮೇ ತಿಂಗಳ ಅಂತ್ಯದವರೆಗೆ ಈ ಬೋಟ್‌ಗಳು ನಿರಂತರವಾಗಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿರುತ್ತವೆ. ಆದರೆ ಇದೀಗ ಸಾವಿರಕ್ಕೂ ಅಧಿಕ ಬೋಟ್​​ಗಳು ಮೀನುಗಾರಿಕೆಗೆ ತೆರಳದೇ ಬಂದರಿನಲ್ಲೇ ಲಂಗರು ಹಾಕಿವೆ.

3 / 6
ಸಮುದ್ರದಲ್ಲಿ ಮೀನುಗಳು ಕೂಡ ತಮ್ಮ ಜೀವ ರಚನೆಗೆ ಬೇಕಾದ ತಾಪಮಾನವನ್ನು ಬಯಸುತ್ತವೆ. ಅದು ಸಿಗದೆ ಇದ್ದಾಗ ಅವುಗಳು ಸಮುದ್ರದಾಳಕ್ಕೆ ಹೋಗಿ ಬದುಕುತ್ತವೆ. ಮೀನುಗಳು ಸಮುದ್ರದಲ್ಲಿ ಸ್ವಚ್ಛಂದವಾಗಿ ವಿಹರಿಸುತ್ತಿರುವಾಗ ಮೀನುಗಾರರ ಬಲೆಗೆ ಸುಲಭವಾಗಿ ಬೀಳುತ್ತವೆ. ಆದರೆ ಯಾವಾಗ ಅವುಗಳು ಸಮುದ್ರದಾಳದಲ್ಲಿ ಆಶ್ರಯ ಪಡೆಯುತ್ತವೆಯೋ ಅಂತಹ ಸಂದರ್ಭದಲ್ಲಿ ಮೀನುಗಾರರ ಬಲೆಗೆ ಸಿಗುವುದಿಲ್ಲ. ಇದೀಗ ಇಂತಹದ್ದೇ ಪರಿಸ್ಥಿತಿ ಮೀನುಗಾರರಿಗೆ ಸಂಕಷ್ಟವನ್ನು ತಂದೊಡ್ಡಿದೆ.

ಸಮುದ್ರದಲ್ಲಿ ಮೀನುಗಳು ಕೂಡ ತಮ್ಮ ಜೀವ ರಚನೆಗೆ ಬೇಕಾದ ತಾಪಮಾನವನ್ನು ಬಯಸುತ್ತವೆ. ಅದು ಸಿಗದೆ ಇದ್ದಾಗ ಅವುಗಳು ಸಮುದ್ರದಾಳಕ್ಕೆ ಹೋಗಿ ಬದುಕುತ್ತವೆ. ಮೀನುಗಳು ಸಮುದ್ರದಲ್ಲಿ ಸ್ವಚ್ಛಂದವಾಗಿ ವಿಹರಿಸುತ್ತಿರುವಾಗ ಮೀನುಗಾರರ ಬಲೆಗೆ ಸುಲಭವಾಗಿ ಬೀಳುತ್ತವೆ. ಆದರೆ ಯಾವಾಗ ಅವುಗಳು ಸಮುದ್ರದಾಳದಲ್ಲಿ ಆಶ್ರಯ ಪಡೆಯುತ್ತವೆಯೋ ಅಂತಹ ಸಂದರ್ಭದಲ್ಲಿ ಮೀನುಗಾರರ ಬಲೆಗೆ ಸಿಗುವುದಿಲ್ಲ. ಇದೀಗ ಇಂತಹದ್ದೇ ಪರಿಸ್ಥಿತಿ ಮೀನುಗಾರರಿಗೆ ಸಂಕಷ್ಟವನ್ನು ತಂದೊಡ್ಡಿದೆ.

4 / 6
ಆಳಸಮುದ್ರಕ್ಕೆ ಹೋಗುವ ಮೀನುಗಾರಿಕಾ ಬೋಟ್​​ಗಳು 10 ರಿಂದ 13 ದಿನ ಸಮುದ್ರದಲ್ಲಿ ಮೀನುಗಳ ಬೇಟೆಯಾಡಿ ಮತ್ತೆ ಬಂದರಿಗೆ ಬರುತ್ತವೆ. ಈ ವೇಳೆ ಹೋಗಿ ಬರೋದಕ್ಕೆ ಒಂದು ಬೋಟಿಗೆ 6 ಲಕ್ಷ ರೂ ಖರ್ಚು ತಗುಲುತ್ತದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡ ಬೋಟ್​​ಗಳಿಗೆ 2 ಲಕ್ಷ ರೂನಷ್ಟು ಮಾತ್ರವೇ ಮೀನುಗಳು ಸಿಗುತ್ತಿವೆ. ಇದರಿಂದಾಗಿ ಅಂದಾಜು 4 ಲಕ್ಷ ರೂವರೆಗೆ ಮತ್ಸೋದ್ಯಮಿಗಳು ನಷ್ಟವನ್ನು ಅನುಭವಿಸುತ್ತಿದ್ದಾರೆ. ಈ ಕಾರಣದಿಂದ ನಷ್ಟ ಬೇಡ ಎಂದು ಬೋಟ್​​ಗಳನ್ನು ಮೀನುಗಾರಿಕೆಗೆ ಕಳುಹಿಸದೇ ಬಂದರಿನಲ್ಲಿ ಲಂಗರು ಹಾಕುತ್ತಿದ್ದಾರೆ.

ಆಳಸಮುದ್ರಕ್ಕೆ ಹೋಗುವ ಮೀನುಗಾರಿಕಾ ಬೋಟ್​​ಗಳು 10 ರಿಂದ 13 ದಿನ ಸಮುದ್ರದಲ್ಲಿ ಮೀನುಗಳ ಬೇಟೆಯಾಡಿ ಮತ್ತೆ ಬಂದರಿಗೆ ಬರುತ್ತವೆ. ಈ ವೇಳೆ ಹೋಗಿ ಬರೋದಕ್ಕೆ ಒಂದು ಬೋಟಿಗೆ 6 ಲಕ್ಷ ರೂ ಖರ್ಚು ತಗುಲುತ್ತದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡ ಬೋಟ್​​ಗಳಿಗೆ 2 ಲಕ್ಷ ರೂನಷ್ಟು ಮಾತ್ರವೇ ಮೀನುಗಳು ಸಿಗುತ್ತಿವೆ. ಇದರಿಂದಾಗಿ ಅಂದಾಜು 4 ಲಕ್ಷ ರೂವರೆಗೆ ಮತ್ಸೋದ್ಯಮಿಗಳು ನಷ್ಟವನ್ನು ಅನುಭವಿಸುತ್ತಿದ್ದಾರೆ. ಈ ಕಾರಣದಿಂದ ನಷ್ಟ ಬೇಡ ಎಂದು ಬೋಟ್​​ಗಳನ್ನು ಮೀನುಗಾರಿಕೆಗೆ ಕಳುಹಿಸದೇ ಬಂದರಿನಲ್ಲಿ ಲಂಗರು ಹಾಕುತ್ತಿದ್ದಾರೆ.

5 / 6
ಹಿಂದೆ ಫೆಬ್ರವರಿ, ಮಾರ್ಚ್​ನಲ್ಲಿ ಉತ್ತಮ ಮೀನುಗಾರಿಕೆ ಆಗುತ್ತಿತ್ತು. ಆದರೆ ಈ ಬಾರಿ ಲಾಭದಾಯಕ ತಿಂಗಳಲ್ಲೇ ಹವಮಾನ ವೈಪರೀತ್ಯ ಆಗಿರುವುದರಿಂದ ಮೀನುಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಮುಂದೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು ಜನ ಚಿಂತೆಗೀಡಾಗಿದ್ದಾರೆ.

ಹಿಂದೆ ಫೆಬ್ರವರಿ, ಮಾರ್ಚ್​ನಲ್ಲಿ ಉತ್ತಮ ಮೀನುಗಾರಿಕೆ ಆಗುತ್ತಿತ್ತು. ಆದರೆ ಈ ಬಾರಿ ಲಾಭದಾಯಕ ತಿಂಗಳಲ್ಲೇ ಹವಮಾನ ವೈಪರೀತ್ಯ ಆಗಿರುವುದರಿಂದ ಮೀನುಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಮುಂದೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು ಜನ ಚಿಂತೆಗೀಡಾಗಿದ್ದಾರೆ.

6 / 6
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!