ಬಡ ಮಹಿಳೆಗೆ ಸ್ವತಃ ತಾವೇ ಶಸ್ತ್ರಚಿಕಿತ್ಸೆ ಮಾಡಿ ಮಾನವೀಯತೆ ಮೆರೆದ ಕುಣಿಗಲ್ ಕಾಂಗ್ರೆಸ್ ಶಾಸಕ

Updated on: Jun 28, 2023 | 6:49 AM

ಕೆಲವರು ಗ್ರಾಮ ಪಂಚಾಯಿತಿ ಸದಸ್ಯನಾದ್ರೆ ಸಾಕು ತನ್ನ ಮೂಲ ಕಸುಬು ಮರೆತು ಫುಲ್​ ಖಡಕ್ ವೈಟ್ ಆ್ಯಂಡ್ ವೈಟ್​ ಬಟ್ಟೆ ಹಾಕಿಕಂಡು ರಾಜಕೀಯದಲ್ಲಿ ಮುಳುಗುವರೇ ಹೆಚ್ಚು. ಇಂತಹ ಸಂದರ್ಭದಲ್ಲಿ ಶಾಸಕರೊಬ್ಬರು ಮಹಿಳೆಗೆ ಶಸ್ತ್ರ ಚಿಕಿತ್ಸೆ ಮಾಡಿ ಮಾದರಿ ಎನಿಸಿಕೊಂಡಿದ್ದಾರೆ.

1 / 7
 ಕೀಲು ನೋವಿನಿಂದ ಬಳಲುತ್ತಿದ್ದ ಬಡ ಮಹಿಳೆಗೆ ಉಚಿತವಾಗಿ ತಾವೇ ಶಸ್ತ್ರಚಿಕಿತ್ಸೆ ಮಾಡಿ ಕುಣಿಗಲ್ ಶಾಸಕ ಡಾ.ರಂಗನಾಥ್ ಮಾನವೀಯತೆ ಮೆರೆದಿದ್ದಾರೆ.

ಕೀಲು ನೋವಿನಿಂದ ಬಳಲುತ್ತಿದ್ದ ಬಡ ಮಹಿಳೆಗೆ ಉಚಿತವಾಗಿ ತಾವೇ ಶಸ್ತ್ರಚಿಕಿತ್ಸೆ ಮಾಡಿ ಕುಣಿಗಲ್ ಶಾಸಕ ಡಾ.ರಂಗನಾಥ್ ಮಾನವೀಯತೆ ಮೆರೆದಿದ್ದಾರೆ.

2 / 7
ತುಮಕೂರು(Tumakuru )ಜಿಲ್ಲೆಯ ಕುಣಿಗಲ್ ತಾಲೂಕಿನ ಕುಂದೂರು ಗ್ರಾಮದ ಆಶಾ ಎನ್ನುವರು ಕೀಲು ಶಸ್ತ್ರ ಚಿಕಿತ್ಸೆ (Woman Joint surgery) ಸಹಾಯಕಕ್ಕೆ ಮನವಿ ಮಾಡಿದ್ದರು.

ತುಮಕೂರು(Tumakuru )ಜಿಲ್ಲೆಯ ಕುಣಿಗಲ್ ತಾಲೂಕಿನ ಕುಂದೂರು ಗ್ರಾಮದ ಆಶಾ ಎನ್ನುವರು ಕೀಲು ಶಸ್ತ್ರ ಚಿಕಿತ್ಸೆ (Woman Joint surgery) ಸಹಾಯಕಕ್ಕೆ ಮನವಿ ಮಾಡಿದ್ದರು.

3 / 7
ಈ ಮನವಿಗೆ ಸ್ಪಂದಿಸಿದ ರಂಗನಾಥ್, ಕೊನೆಗೆ ಮಹಿಳೆಯನ್ನು ಬೆಂಗಳೂರಿನ ಬೋರಿಂಗ್ ಆಸ್ಪತ್ರೆಗೆ ದಾಖಲಿಸಿ ಉಚಿತವಾಗಿ ಸ್ವತಃ ತಾವೇ ಆಪರೇಷನ್ ಮಾಡಿದ್ದಾರೆ.

ಈ ಮನವಿಗೆ ಸ್ಪಂದಿಸಿದ ರಂಗನಾಥ್, ಕೊನೆಗೆ ಮಹಿಳೆಯನ್ನು ಬೆಂಗಳೂರಿನ ಬೋರಿಂಗ್ ಆಸ್ಪತ್ರೆಗೆ ದಾಖಲಿಸಿ ಉಚಿತವಾಗಿ ಸ್ವತಃ ತಾವೇ ಆಪರೇಷನ್ ಮಾಡಿದ್ದಾರೆ.

4 / 7
ಕಳೆದ 10 ವರ್ಷದ ಹಿಂದೆ ಯಶಸ್ವಿನಿ ಯೋಜನೆಯಲ್ಲಿ ಕೀಲು ಆಪರೇಷನ್ ಮಾಡಿಕೊಂಡಿದ್ದರು. ಆದರೆ ಅದು ಡಿಸ್ ಲೊಕೆಟ್ ಆಗಿತ್ತು. ಇದೀಗ ಅದಕ್ಕೆ ಶಸ್ತ್ರಚಿಕಿತ್ಸೆ ಮಾಡಲು 4 ರಿಂದ 5 ಲಕ್ಷ ರೂ. ಬೇಕಿತ್ತು.

ಕಳೆದ 10 ವರ್ಷದ ಹಿಂದೆ ಯಶಸ್ವಿನಿ ಯೋಜನೆಯಲ್ಲಿ ಕೀಲು ಆಪರೇಷನ್ ಮಾಡಿಕೊಂಡಿದ್ದರು. ಆದರೆ ಅದು ಡಿಸ್ ಲೊಕೆಟ್ ಆಗಿತ್ತು. ಇದೀಗ ಅದಕ್ಕೆ ಶಸ್ತ್ರಚಿಕಿತ್ಸೆ ಮಾಡಲು 4 ರಿಂದ 5 ಲಕ್ಷ ರೂ. ಬೇಕಿತ್ತು.

5 / 7
ಇನ್ನು ಸರ್ಕಾರದ ಉಚಿತ ಯೋಜನೆಯಲ್ಲಿ ಒಂದೇ ಕಾಯಿಲೆಗೆ ಎರಡು ಬಾರಿ ಸರ್ಜರಿಗೆ ಅವಕಾಶ ಇರಲಿಲ್ಲ. ಸ್ವತಃ ರೋಗಿಗಳೇ ಹಣ ಸಂದಾಯ ಮಾಡಿ ಆಪರೇಷನ್ ಮಾಡಿಸಿಕೊಳ್ಳಬೇಕಿತ್ತು.

ಇನ್ನು ಸರ್ಕಾರದ ಉಚಿತ ಯೋಜನೆಯಲ್ಲಿ ಒಂದೇ ಕಾಯಿಲೆಗೆ ಎರಡು ಬಾರಿ ಸರ್ಜರಿಗೆ ಅವಕಾಶ ಇರಲಿಲ್ಲ. ಸ್ವತಃ ರೋಗಿಗಳೇ ಹಣ ಸಂದಾಯ ಮಾಡಿ ಆಪರೇಷನ್ ಮಾಡಿಸಿಕೊಳ್ಳಬೇಕಿತ್ತು.

6 / 7
ಈ ಹಿನ್ನೆಲೆಯಲ್ಲಿ ಆಶಾ ತನ್ನ ಆರ್ಥಿಕ ಸಂಕಷ್ಟವನ್ನು ಶಾಸಕ ರಂಗನಾಥ್​ ಬಳಿ ಹೇಳಿಕೊಂಡಿದ್ದರು. ಆಶಾಳ ಮನವಿಗೆ ಸ್ಪಂದಿಸಿದ ರಂಗನಾಥ್​ ಸ್ವತಃ ತಾವೇ ಸರ್ಜರಿ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಆಶಾ ತನ್ನ ಆರ್ಥಿಕ ಸಂಕಷ್ಟವನ್ನು ಶಾಸಕ ರಂಗನಾಥ್​ ಬಳಿ ಹೇಳಿಕೊಂಡಿದ್ದರು. ಆಶಾಳ ಮನವಿಗೆ ಸ್ಪಂದಿಸಿದ ರಂಗನಾಥ್​ ಸ್ವತಃ ತಾವೇ ಸರ್ಜರಿ ಮಾಡಿದ್ದಾರೆ.

7 / 7
ಮೂಲತಃ ಆರ್ಥೋಪೆಡಿಕ್ ವೈದ್ಯರಾಗಿರುವ ಶಾಸಕ ರಂಗನಾಥ್, ಇದೀಗ ಮಹಿಳೆಯ ಕೀಲು ಸರ್ಜರಿ ಮಾಡಿ ಸೈ ಎನಿಸಿಕೊಂಡಿದ್ದಾರೆ. ಇನ್ನು ಮಹಿಳೆ ಆಶಾಳ ಹಣವನ್ನೂ ಸಹ ಉಳಿಸಿದ್ದಾರೆ. ಹೀಗಾಗಿ ಶಾಸಕರ ಸೇವೆಗೆ ಶ್ಲಾಘನೆ ವ್ಯಕ್ತವಾಗಿದೆ.

ಮೂಲತಃ ಆರ್ಥೋಪೆಡಿಕ್ ವೈದ್ಯರಾಗಿರುವ ಶಾಸಕ ರಂಗನಾಥ್, ಇದೀಗ ಮಹಿಳೆಯ ಕೀಲು ಸರ್ಜರಿ ಮಾಡಿ ಸೈ ಎನಿಸಿಕೊಂಡಿದ್ದಾರೆ. ಇನ್ನು ಮಹಿಳೆ ಆಶಾಳ ಹಣವನ್ನೂ ಸಹ ಉಳಿಸಿದ್ದಾರೆ. ಹೀಗಾಗಿ ಶಾಸಕರ ಸೇವೆಗೆ ಶ್ಲಾಘನೆ ವ್ಯಕ್ತವಾಗಿದೆ.

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us