AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಫುಡ್​ ಸ್ಟ್ರೀಟ್​​​ ಅಂಗಡಿಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ

ಗೋಬಿ ಮಂಚೂರಿ ಮಂಚೂರಿಗೆ ಬಳಸುವ ಬಣ್ಣವನ್ನು ಬ್ಯಾನ್​ ಮಾಡಿದ ನಂತರ, ಅಲರ್ಟ್​ ಆದ ಆಹಾರ ಇಲಾಖೆ ಅಧಿಕಾರಿಗಳು ಬೆಂಗಳೂರಿನ ವಿಜಯನಗರದ ಫುಡ್​ ಸ್ಟ್ರೀಟ್​​ನಲ್ಲಿ ವ್ಯಾಪಾರ ಮಾಡುವ ಗೋಬಿ ಅಂಗಡಿಗಳ ಮೇಲೆ ದಾಳಿ ಮಾಡಿ ಗೋಬಿ ತಯಾರಿಕೆಗೆ ಬಳಸುವ ಪದಾರ್ಥಗಳನ್ನು ಪರಿಶೀಲನೆ ನಡೆಸಿದರು.

Vinay Kashappanavar
| Edited By: |

Updated on: Aug 28, 2024 | 12:10 PM

Share
Karnataka Food Department officers raid on Vijayanagar Food Street shops

ಗೋಬಿ ಮಂಚೂರಿ, ಕಬಾಬ್​ನಲ್ಲಿ ಕ್ಯಾನ್ಸರ್​ ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇವುಗಳಿಗೆ ಬಳಸುವ ಕೃತಕ ಬಣ್ಣವನ್ನು ಬ್ಯಾನ್​​ ಮಾಡಿತ್ತು. ಅಲ್ಲದೆ ಪಾನಿಪುರಿಗೆ ಬಳಸುವ ಪದಾರ್ಥಗಳಲ್ಲೂ ಕ್ಯಾನ್ಸರ್​ ಕಾರಕ ಅಂಶಗಳು ಇರುವುದನ್ನು ಆಹಾರ ಇಲಾಖೆ ಪತ್ತೆ ಹಚ್ಚಿದೆ.

1 / 6
Karnataka Food Department officers raid on Vijayanagar Food Street shops

ಗೋಬಿ ಮಂಚೂರಿ ಮಂಚೂರಿಗೆ ಬಳಸುವ ಬಣ್ಣವನ್ನು ಬ್ಯಾನ್​ ಮಾಡಿದ ನಂತರ, ಅಲರ್ಟ್​ ಆದ ಆಹಾರ ಇಲಾಖೆ ಅಧಿಕಾರಿಗಳು ಬೀದಿ ಬದಿ ವ್ಯಾಪಾರ ಮಾಡುವ ಗೋಬಿ ಅಂಗಡಿಗಳ ಮೇಲೆ ದಾಳಿ ಮಾಡಿ ಗೋಬಿ ತಯಾರಿಕೆಗೆ ಬಳಸುವ ಪದಾರ್ಥಗಳನ್ನು ಪರಿಶೀಲನೆ ನಡೆಸಿದರು.

2 / 6
Karnataka Food Department officers raid on Vijayanagar Food Street shops

ಬೆಂಗಳೂರಿನ ವಿಜಯನರ ಸ್ಟ್ರೀಟ್ ಫುಡ್​​ ಬಹಳ ಪ್ರಸಿದ್ದಿ. ಈ ಸ್ರೀಟ್​ ಫುಡ್​ಗೆ ಪ್ರತಿನಿತ್ಯ ನೂರು ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಾರೆ. ಆಹಾರ ಇಲಾಖೆ ಅಧಿಕಾರಿಗಳು ಜನ ಸಾಮಾನ್ಯರಂತೆ ಮಂಗಳವಾರ ರಾತ್ರಿ ಬೆಂಗಳೂರಿನ ವಿಜಯನಗರದ ಸ್ಟ್ರೀಟ್ ಫುಡ್ ಅಂಗಡಿಗಳಿಗೆ ಭೇಟಿ ನೀಡಿದರು.

3 / 6
Karnataka Food Department officers raid on Vijayanagar Food Street shops

ವಿಜಯನಗರದ ಸ್ಟ್ರೀಟ್ ಫುಡ್​ನಲ್ಲಿರುವ ಗೋಬಿ, ಫ್ರೈಡ್ ರೈಸ್, ದೋಸೆ, ನೂಡಲ್ಸ್ ತಯಾರು ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ಮಾಡಿದರು. ಅಧಿಕಾರಿಗಳ ಏಕಾಏಕಿ ದಾಳಿಯಿಂದ ಅಂಗಡಿ ಮಾಲಿಕರು ಕಕ್ಕಾಬಿಕ್ಕಿಯಾದರು.

4 / 6
Karnataka Food Department officers raid on Vijayanagar Food Street shops

ಕಳೆದ ಹಲವು ದಿನಗಳ ಹಿಂದೆ ಸ್ವಚ್ಚತೆ ಕಾಪಾಡದ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಮಂಗಳವಾರ (ಆ.27) ರಂದು ದಾಳಿ ಮಾಡಿ ಪರಿಶೀಲನೆ ನಡೆಸಿದರು.

5 / 6
Karnataka Food Department officers raid on Vijayanagar Food Street shops

ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಗೋಬಿ, ನೂಡಲ್ಸ್​​ ತಯಾರಿಕೆಗೆ ಬಳಸುವ ಸಾಸ್​​, ಮಸಾಲೆಗಳನ್ನು ಪರಿಶೀಲನೆ ನಡೆಸಿದರು. ಆಹಾರ ತಯಾರಿಕೆಗೆ ಬಳಸುವ ಪಾತ್ರೆಗಳನ್ನು ಪರಿಶೀಲಿಸಿದರು. ಹಾಗೆ, ಅಂಗಡಿಯಲ್ಲಿ ಮತ್ತು ಸುತ್ತಮುತ್ತ ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ಸ್ವಚ್ಛತೆಯನ್ನು ಕಾಪಾಡುವಂತೆ ಅಧಿಕಾರಿಗಳು ಅಂಗಡಿ ಮಾಲಿಕರಿಗೆ ಸೂಚನೆ‌ ನೀಡಿದರು.

6 / 6
Follow Us
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಹೊಸ ಕಾರಿನಲ್ಲಿ ಕೂತು ಮಕ್ಕಳು ಹೀಗೆ ಮಾಡೋದ
ಹೊಸ ಕಾರಿನಲ್ಲಿ ಕೂತು ಮಕ್ಕಳು ಹೀಗೆ ಮಾಡೋದ