AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುವೆಂಪುಗೆ ಮರಣೋತ್ತರ ‘ಭಾರತ ರತ್ನ’ ನೀಡಲು ರಾಜ್ಯ ಸರ್ಕಾರ ಶಿಫಾರಸು

ಸಂಪುಟ ಸಭೆ ಬಳಿಕ ಕೆಲವು ಮಹತ್ವದ ಘೋಷಣೆಗಳನ್ನು ಇಂದು (ಸೆಪ್ಟೆಂಬರ್ 11) ಮಾಡಲಾಯಿತು. ಸಾಹಿತಿ ಕುವೆಂಪು ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಷ್ಣುವರ್ಧನ್, ಬಿ. ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲಾಗಿದೆ.

ಮದನ್​ ಕುಮಾರ್​
|

Updated on: Sep 11, 2025 | 8:26 PM

Share
ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಕುವೆಂಪು ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ಸಿಗಬೇಕು ಎಂಬುದು ಓದುಗರು ಮತ್ತು ಅಭಿಮಾನಿಗಳ ಆಸೆ. ಆ ಬಗ್ಗೆ ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.

ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಕುವೆಂಪು ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ಸಿಗಬೇಕು ಎಂಬುದು ಓದುಗರು ಮತ್ತು ಅಭಿಮಾನಿಗಳ ಆಸೆ. ಆ ಬಗ್ಗೆ ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.

1 / 5
ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು) ಅವರಿಗೆ ‘ಭಾರತ ರತ್ನ’ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಲು ನಿರ್ಧರಿಸಿದೆ ಎಂದು ಸಚಿವ ಹೆಚ್​​.ಕೆ. ಪಾಟೀಲ್ ಅವರು ತಿಳಿಸಿದ್ದಾರೆ.

ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು) ಅವರಿಗೆ ‘ಭಾರತ ರತ್ನ’ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಲು ನಿರ್ಧರಿಸಿದೆ ಎಂದು ಸಚಿವ ಹೆಚ್​​.ಕೆ. ಪಾಟೀಲ್ ಅವರು ತಿಳಿಸಿದ್ದಾರೆ.

2 / 5
ಮರಣೋತ್ತರವಾಗಿ ಕುವೆಂಪು ಅವರಿಗೆ ‘ಭಾರತ ರತ್ನ’ ಪ್ರಶಸ್ತಿಯನ್ನು ನೀಡುವಂತೆ ಶಿಫಾರಸು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಮೊದಲೇ ಹಿರಿಯ ಸಾಹಿತಿಗಳು ಮನವಿ ಸಲ್ಲಿಸಿದ್ದರು.

ಮರಣೋತ್ತರವಾಗಿ ಕುವೆಂಪು ಅವರಿಗೆ ‘ಭಾರತ ರತ್ನ’ ಪ್ರಶಸ್ತಿಯನ್ನು ನೀಡುವಂತೆ ಶಿಫಾರಸು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಮೊದಲೇ ಹಿರಿಯ ಸಾಹಿತಿಗಳು ಮನವಿ ಸಲ್ಲಿಸಿದ್ದರು.

3 / 5
ರಾಷ್ಟ್ರಕವಿ ಕುವೆಂಪು ಅವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ. ಕರ್ನಾಟಕ ರತ್ನ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪಂಪ ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳು ಅವರಿಗೆ ಸಂದಿವೆ.

ರಾಷ್ಟ್ರಕವಿ ಕುವೆಂಪು ಅವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ. ಕರ್ನಾಟಕ ರತ್ನ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪಂಪ ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳು ಅವರಿಗೆ ಸಂದಿವೆ.

4 / 5
ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಕುಟುಂಬದವರು ಹಾಗೂ ಅಭಿಮಾನಿಗಳು ಮನವಿ ಮಾಡಿದ್ದರು. ಆ ಬೆನ್ನಲ್ಲೇ ಸರ್ಕಾರ ಪ್ರಶಸ್ತಿ ಘೋಷಣೆ ಮಾಡಿದೆ.

ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಕುಟುಂಬದವರು ಹಾಗೂ ಅಭಿಮಾನಿಗಳು ಮನವಿ ಮಾಡಿದ್ದರು. ಆ ಬೆನ್ನಲ್ಲೇ ಸರ್ಕಾರ ಪ್ರಶಸ್ತಿ ಘೋಷಣೆ ಮಾಡಿದೆ.

5 / 5
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us