AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂವರು ಸಹೋದರರು ದುರಂತ ಸಾವು: IAS ಅಧಿಕಾರಿ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ರೂ ಉಳಿಯಲಿಲ್ಲ ಜೀವಗಳು

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ. ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಂಬಂಧಿಕರ ಮದುವೆಗೆಂದು ವಿಜಯಪುರಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೀವರ್ಗಿ ಬಳಿ ಕಾರು ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಅವರ ಇಬ್ಬರು ಸಹೋದರರು ಸಹ ಸಾವನ್ನಪ್ಪಿದ್ದು, ಮೂವರು ಸಹೋದರರು ಸಾವಿನಲ್ಲೂ ಒಂದಾಗಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: Nov 25, 2025 | 8:29 PM

Share
ಕಲಬುರಗಿ ಜಿಲ್ಲೆಯ ಜೀವರ್ಗಿ ತಾಲೂಕಿನ ಗೌನಹಳ್ಳಿ ಕ್ರಾಸ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದಾರೆ. 51 ವರ್ಷದ ಬೀಳಗಿ ಅವರು ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ಕಲಬುರಗಿ ಜಿಲ್ಲೆಯ ಜೀವರ್ಗಿ ತಾಲೂಕಿನ ಗೌನಹಳ್ಳಿ ಕ್ರಾಸ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದಾರೆ. 51 ವರ್ಷದ ಬೀಳಗಿ ಅವರು ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

1 / 6
ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ  ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಏಕಾಏಕಿ ನಾಯಿ ಅಡ್ಡ ಬಂದಿದ್ದು, ಅದನ್ನು ಉಳಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ.

ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಏಕಾಏಕಿ ನಾಯಿ ಅಡ್ಡ ಬಂದಿದ್ದು, ಅದನ್ನು ಉಳಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ.

2 / 6
ಘಟನೆಯಲ್ಲಿ ಐಎಎಸ್ ಅಧಿಕಾರಿ  ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಬೀಳಗಿ ಮತ್ತು ಅವರ ಇಬ್ಬರು ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತಪಟ್ಟಿದ್ದಾರೆ. ಮೂವರು ಸಹೋದರರು ಸಂಬಂಧಿಕರ ಮದ್ವೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಬೀಳಗಿ ಮತ್ತು ಅವರ ಇಬ್ಬರು ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತಪಟ್ಟಿದ್ದಾರೆ. ಮೂವರು ಸಹೋದರರು ಸಂಬಂಧಿಕರ ಮದ್ವೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

3 / 6
ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA 04, NC 7982 ಸಂಖ್ಯೆಯ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಮೂವರು ಸಹೋದರರು ದುರಂತ ಅಂತ್ಯ ಕಂಡಿದ್ದಾರೆ.

ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA 04, NC 7982 ಸಂಖ್ಯೆಯ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಮೂವರು ಸಹೋದರರು ದುರಂತ ಅಂತ್ಯ ಕಂಡಿದ್ದಾರೆ.

4 / 6
ಇನ್ನು ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮಹಾಂತೇಶ್​ ಬೀಳಗಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ಐಜಿಪಿ ಶಾಂತನು ಸಿನ್ಹಾ, ಕಲಬುರಗಿ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ‌ದೌಡಾಯಿಸಿದ್ದಾರೆ.

ಇನ್ನು ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮಹಾಂತೇಶ್​ ಬೀಳಗಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ಐಜಿಪಿ ಶಾಂತನು ಸಿನ್ಹಾ, ಕಲಬುರಗಿ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ‌ದೌಡಾಯಿಸಿದ್ದಾರೆ.

5 / 6
ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್​ನ IAS ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಬೆಸ್ಕಾಂ ಎಂಡಿ ಸಹ ಆಗಿದ್ದರು. ಅಲ್ಲದೇ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.

ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್​ನ IAS ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಬೆಸ್ಕಾಂ ಎಂಡಿ ಸಹ ಆಗಿದ್ದರು. ಅಲ್ಲದೇ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.

6 / 6
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?