ಮೋದಿ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆದ ಕರ್ನಾಟಕ ಸಂಸದರು

|

Updated on: Jun 09, 2024 | 10:15 PM

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು(ಜೂ,09) ಸಂಜೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅದರಂತೆ ಕರ್ನಾಟಕದಿಂದ ನಾಲ್ವರು ಸಂಸದರಿಗೆ ಸಚಿವ ಭಾಗ್ಯ ಒಲಿದಿದ್ದು, ಈ ಕುರಿತು ಒಂದು ವರದಿ ಇಲ್ಲಿದೆ.

1 / 5
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು(ಜೂ,09) ಸಂಜೆ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು  ಪ್ರಮಾಣವಚನ ಸ್ವೀಕರಿಸಿದ್ದಾರೆ. ಅದರಂತೆ ಕರ್ನಾಟಕದಿಂದ ನಾಲ್ವರು ಸಂಸದರಿಗೆ ಸಚಿವ ಭಾಗ್ಯ ಒಲಿದಿದ್ದು, ಈ ಕುರಿತು ಒಂದು ವರದಿ ಇಲ್ಲಿದೆ.

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು(ಜೂ,09) ಸಂಜೆ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅದರಂತೆ ಕರ್ನಾಟಕದಿಂದ ನಾಲ್ವರು ಸಂಸದರಿಗೆ ಸಚಿವ ಭಾಗ್ಯ ಒಲಿದಿದ್ದು, ಈ ಕುರಿತು ಒಂದು ವರದಿ ಇಲ್ಲಿದೆ.

2 / 5
ವಿ ಸೋಮಣ್ಣ ಅವರು ಇಂದು(ಜೂ.09) ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಸತತ ಸೋಲಿನ ಬಳಿಕ ಬಿಜೆಪಿ ಇವರಿಗೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಿತ್ತು. ಅದರಂತೆ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ವಿ. ಸೋಮಣ್ಣ ಅವರು ಈ ಬಾರಿ ಗೆದ್ದಿದ್ದರು. ಇದೀಗ ರಾಜ್ಯ ಖಾತೆ ಸಚಿವರಾಗಿದ್ದಾರೆ.

ವಿ ಸೋಮಣ್ಣ ಅವರು ಇಂದು(ಜೂ.09) ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಸತತ ಸೋಲಿನ ಬಳಿಕ ಬಿಜೆಪಿ ಇವರಿಗೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಿತ್ತು. ಅದರಂತೆ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ವಿ. ಸೋಮಣ್ಣ ಅವರು ಈ ಬಾರಿ ಗೆದ್ದಿದ್ದರು. ಇದೀಗ ರಾಜ್ಯ ಖಾತೆ ಸಚಿವರಾಗಿದ್ದಾರೆ.

3 / 5
ಪ್ರಾದೇಶಿಕ ಪಕ್ಷವಾದ ಜೆಡಿಎಸ್​ ನಿಂದ ಗೆದ್ದು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಹೆಚ್​ ಡಿ ಕುಮಾರಸ್ವಾಮಿ ಅವರು ಈ ಬಾರಿ ಬಿಜೆಪಿವೊಂದಿಗೆ ಮೈತ್ರಿ ಮಾಡಿಕೊಂಡು ಮಂಡ್ಯದಿಂದ ಕಣಕ್ಕೀಳಿದು ಗೆದ್ದಿದ್ದರು. ಇದೀಗ ಮೊದಲ ಬಾರಿಗೆ ಮೋದಿ ನೇತೃತ್ವದಲ್ಲಿ ಕ್ಯಾಬಿನೆಟ್​ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಾದೇಶಿಕ ಪಕ್ಷವಾದ ಜೆಡಿಎಸ್​ ನಿಂದ ಗೆದ್ದು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಹೆಚ್​ ಡಿ ಕುಮಾರಸ್ವಾಮಿ ಅವರು ಈ ಬಾರಿ ಬಿಜೆಪಿವೊಂದಿಗೆ ಮೈತ್ರಿ ಮಾಡಿಕೊಂಡು ಮಂಡ್ಯದಿಂದ ಕಣಕ್ಕೀಳಿದು ಗೆದ್ದಿದ್ದರು. ಇದೀಗ ಮೊದಲ ಬಾರಿಗೆ ಮೋದಿ ನೇತೃತ್ವದಲ್ಲಿ ಕ್ಯಾಬಿನೆಟ್​ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

4 / 5
ಧಾರವಾಡ ಲೋಕಸಭಾ ಕ್ಷೇತ್ರದಿಂದ ಐದನೇ ಬಾರಿ ಗೆಲ್ಲುವ ಮೂಲಕ ಹಿಡಿತ ಸಾಧಿಸಿದ ಪ್ರಹ್ಲಾದ್​ ಜೋಶಿ ಅವರು ಇಂದು(ಜೂ.09) ಕೇಂದ್ರ ಸಚಿವ ಸಂಪುಟದಲ್ಲಿ ಮತ್ತೆ ಮಂತ್ರಿಯಾಗಿ ಪ್ರಮಾಣವಚನ ಮಾಡಿದರು.

ಧಾರವಾಡ ಲೋಕಸಭಾ ಕ್ಷೇತ್ರದಿಂದ ಐದನೇ ಬಾರಿ ಗೆಲ್ಲುವ ಮೂಲಕ ಹಿಡಿತ ಸಾಧಿಸಿದ ಪ್ರಹ್ಲಾದ್​ ಜೋಶಿ ಅವರು ಇಂದು(ಜೂ.09) ಕೇಂದ್ರ ಸಚಿವ ಸಂಪುಟದಲ್ಲಿ ಮತ್ತೆ ಮಂತ್ರಿಯಾಗಿ ಪ್ರಮಾಣವಚನ ಮಾಡಿದರು.

5 / 5
ಬೆಂಗಳೂರು ಉತ್ತರದಿಂದ ಮೊದಲ ಬಾರಿಗೆ ಸ್ಫರ್ಧಿಸಿ ಗೆದ್ದಿರುವ ಶೋಭಾ ಕರಂದ್ಲಾಜೆ ಅವರು ಮೋದಿ ಅವರ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಕಳೆದ ಬಾರಿ ಉಡುಪಿ-ಚಿಕ್ಕಮಗಳೂರಿನಿಂದ ಗೆದ್ದು ಮಂತ್ರಿಯಾಗಿದ್ದರು.

ಬೆಂಗಳೂರು ಉತ್ತರದಿಂದ ಮೊದಲ ಬಾರಿಗೆ ಸ್ಫರ್ಧಿಸಿ ಗೆದ್ದಿರುವ ಶೋಭಾ ಕರಂದ್ಲಾಜೆ ಅವರು ಮೋದಿ ಅವರ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಕಳೆದ ಬಾರಿ ಉಡುಪಿ-ಚಿಕ್ಕಮಗಳೂರಿನಿಂದ ಗೆದ್ದು ಮಂತ್ರಿಯಾಗಿದ್ದರು.