ಬಿಸಿಲಿನಿಂದ ಬಳಲುವ ಪ್ರಯಾಣಿಕರ ಬಾಯಾರಿಕೆ ನೀಗಿಸಿ, ಮನಸ್ಸಿಗೆ ಮುದ ನೀಡುವ ಬಿಎಂಟಿಸಿ ಗ್ರೀನ್ ಬಸ್
ಬೆಂಗಳೂರಿನಲ್ಲಿ ಉರಿ ಬಿಸಿಲು ಜನರ ತಲೆ ಸುಡುತ್ತಿದ್ದು ಹೊರಗಡೆ ಓಡಾಡಲು ಹೆದರುತ್ತಿದ್ದಾರೆ. ಇನ್ನೂ ಈ ರಣ ಬಿಸಿಲಿನಲ್ಲಿ ಬಸ್ನಲ್ಲಿ ಪ್ರಯಾಣಿಸುವವರ ಸ್ಥಿತಿಯತ್ತು ಸ್ವಲ್ಪ ಕಷ್ಟವೆ. ಆದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಬಿಎಂಟಿಸಿ ಬಸ್ ಡಿಪೋದಿಂದ ಸೂಲಿಬೆಲೆ ಮೂಲಕ ಹೊಸಕೋಟೆಗೆ ತೆರಳುವ ಬಿಎಂಟಿಸಿ ಬಸ್ನಲ್ಲಿ ಪ್ರಯಾಣಿಸಿದರೆ ನಿಮ್ಮ ಬಾಯಾರಿಕೆ ನೀಗುತ್ತದೆ. ಮತ್ತು ಬಸ್ನಲ್ಲಿನ ವಾತಾವರಣ ಮನಸ್ಸಿಗೆ ಮುದ ನೀಡುತ್ತದೆ.
Updated on: Apr 13, 2024 | 8:44 AM

ಬೆಂಗಳೂರಿನಲ್ಲಿ ಉರಿ ಬಿಸಿಲು ಜನರ ತಲೆ ಸುಡುತ್ತಿದ್ದು ಹೊರಗಡೆ ಓಡಾಡಲು ಹೆದರುತ್ತಿದ್ದಾರೆ. ಇನ್ನೂ ಈ ರಣ ಬಿಸಿಲಿನಲ್ಲಿ ಬಸ್ನಲ್ಲಿ ಪ್ರಯಾಣಿಸುವವರ ಸ್ಥಿತಿಯತ್ತು ಸ್ವಲ್ಪ ಕಷ್ಟವೆ. ಆದರೆ ಈ ಬಸ್ನಲ್ಲಿ ಹತ್ತಿದರೆ ನಿಮ್ಮ ಬಾಯಾರಿಕೆ ನೀಗುತ್ತದೆ. ಮತ್ತು ಬಸ್ನಲ್ಲಿನ ವಾತಾವರಣ ಮನಸ್ಸಿಗೆ ಮುದ ನೀಡುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಬಿಎಂಟಿಸಿ ಬಸ್ ಡಿಪೋದಿಂದ ಸೂಲಿಬೆಲೆ ಮೂಲಕ ಹೊಸಕೋಟೆಗೆ ತೆರಳುವ ಬಿಎಂಟಿಸಿ ಬಸ್ನಲ್ಲಿ ಚಾಲಕ ಲೋಕೇಶ್ Potನಲ್ಲಿ ಹತ್ತಾರು ಗಿಡಗಳನ್ನು ಬೆಳಸಿದ್ದಾರೆ. ನಿತ್ಯ ಗಿಡಗಳಿಗೆ ನೀರನ್ನು ಸ್ಪ್ರೇ ಮಾಡುವ ಮೂಲಕ ಪೋಷಣೆ ಮಾಡುತ್ತಿದ್ದಾರೆ.

ಬಸ್ನ ಗ್ಲಾಸ್ ಮುಂಭಾಗದಲ್ಲಿ ಗಿಡಗಳ ಜೊತೆಗೆ ಬಳ್ಳಿಯನ್ನು ಸಹ ಬೆಳೆಸಿದ್ದು ಬಸ್ ಹತ್ತುವ ಪ್ರಯಾಣಿಕರು ಗಿಡ ಹಾಗೂ ಬಳ್ಳಿಯನ್ನ ಕಂಡು ಪುಲ್ ಖುಷ್ ಆಗುತ್ತಿದ್ದಾರೆ.

ಕಳೆದ ಎರಡು ವರ್ಷಗಳಿಂದ ಬಸ್ಸಿನಲ್ಲಿ ಈ ರೀತಿ ಚಾಲಕ ಲೋಕೇಶ್ ಗಿಡಗಳನ್ನು ಬೆಳೆಸಿದ್ದು ನಿಲ್ದಾಣದಲ್ಲಿ ಬಸ್ನಿಂತ ಸಮಯದಲ್ಲಿ ಗಿಡಗಳ ಪೋಷಣೆ ಮಾಡುತ್ತಿದ್ದಾರೆ. ಇದೀಗ ರಣ ಬಿಸಿಲಿನಲ್ಲೂ ಗಿಡಗಳು ಬಾಡದಂತೆ ಎಚ್ಚರಿಕೆ ವಹಿಸಿ ಪೋಷಣೆ ಮಾಡುತ್ತಿದ್ದು ಪ್ರಯಾಣದ ವೇಳೆ ಗಿಡಗಳನ್ನು ಕಂಡು ಪ್ರಯಾಣಿಕರು ಖುಷಿ ಪಡುತ್ತಿದ್ದಾರೆ.

ಬಸ್ ಹತ್ತುವ ಪ್ರಯಾಣಿಕರು ಬಿಸಿಲಿನಿಂದ ಬಳಲಿ ಬಯಾರಿರುತ್ತಾರೆ. ರಣ ಬಿಸಿಲಿಗೆ ತಂಪಾದ ನೀರನ್ನು ಬಯಸುತ್ತಿರುತ್ತಾರೆ. ಹೀಗಾಗಿ ಚಾಲಕ ಹಾಗೂ ನಿರ್ವಾಹಕ 40 ಲೀಟರ್ನ ಕುಡಿಯುವ ನೀರಿನ ಕ್ಯಾನ್ ಅನ್ನು ಬಸ್ನಲ್ಲಿಟ್ಟಿದ್ದಾರೆ. ಈಮೂಲಕ ಬಿಸಿಲಿನಲ್ಲಿ ಬರುವ ಪ್ರಯಾಣಿಕರಿಗೆ ನೀರು ನೀಡಿ ದಾಹ ನೀಗಿಸುತ್ತಿದ್ದಾರೆ.

ಒಟ್ಟಾರೆಯಾಗಿ ಬಿಎಂಟಿಸಿ ಬಸ್ನಲ್ಲಿ ಗಿಡ-ಬಳ್ಳಿಯನ್ನು ಬೆಳೆಸಿ, ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ಚಾಲಕ-ನಿರ್ವಾಹಕ ಪ್ರಯಾಣಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.
Read More



