- TV9 Kannada Photo gallery Karnataka News in Kannada: Heavy rain in Vijayapura, Historic Mehetar Mahal collapsed due to lightning strike
ವಿಜಯಪುರದಲ್ಲಿ ಭಾರೀ ಮಳೆ: ಸಿಡಿಲಿನ ಹೊಡೆತಕ್ಕೆ ನೆಲಕ್ಕುರುಳಿದ ಐತಿಹಾಸಿಕ ಮೆಹೆತರ್ ಮಹಲ್
ರಣ ಬಿಸಿಲಿಗೆ ನಲುಗಿದ್ದ ಜನರಿಗೆ ವರುಣದೇವ ಕೃಪೆ ತೋರಿದ್ದು, ರಾಜ್ಯದ ಹಲವೆಡೆ ಮಳೆಯಾಗಿದೆ. ಅದರಂತೆ ವಿಜಯಪುರ ನಗರದಲ್ಲೂ ಭರ್ಜರಿ ಗುಡುಗು ಸಹಿತ ಮಳೆಯಾಗಿದೆ. ಈ ಹಿನ್ನಲೆ ನಗರದ ಜುಮ್ಮಾ ಮಸೀದ್ ರಸ್ತೆಯಲ್ಲಿರುವ ಐತಿಹಾಸಿಕ ಮೆಹೆತರ್ ಮಹಲ್ಗೆ ಸಿಡಿಲು ಬಡಿದು ಮಹಲ್ನ ಮಿನಾರ್ ನಿಂತಿದ್ದ ಕಾರಿನ ಮೇಲೆ ಬಿದ್ದಿದೆ. ಇದನ್ನು ಆದಿಲ್ ಶಾಹಿ ಕಾಲದಲ್ಲಿ ನಿರ್ಮಾಣ ಮಾಡಲಾಗಿತ್ತು.
Updated on: Apr 18, 2024 | 8:57 PM
Share

ಬಿಸಿಲಿನ ಬೇಗಗೆ ಬಳಲಿದ್ದ ಜನಕ್ಕೆ ವರುಣದೇವ ತಂಪರೆದಿದ್ದಾನೆ. ಹೌದು, ಕಳೆದ ಕೆಲ ದಿನಗಳಿಂದ ರಾಜ್ಯದ ಹಲವೆಡೆ ಮಳೆಯ ಸಿಂಚನ ಮೂಡಿದೆ.
1 / 6

ಇನ್ನು ವಿಜಯಪುರ ಜಿಲ್ಲೆಯಲ್ಲೂ ಇಂದು(ಏ.18) ಗಾಳಿ, ಗುಡುಗು, ಸಿಡಿಲು ಸಹಿತ ಭರ್ಜರಿ ಮಳೆಯಾಗಿದ್ದು, ಜನರಲ್ಲಿ ಮಂದಹಾಸ ಮೂಡಿದೆ.
2 / 6

ವಿಜಯಪುರ ಸೇರಿದಂತೆ ರಾಜ್ಯದ ಬಾಗಲಕೋಟೆ, ಹಾವೇರಿ, ಶಿವಮೊಗ್ಗ, ಗದಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ.
3 / 6

ಇನ್ನು ವಿಜಯಪುರ ಜಿಲ್ಲೆಯ ಬಬಲೇಶ್ವರ ನಾಕಾ ರಸ್ತೆಯಲ್ಲಿ ಮಳೆಯ ಅಬ್ಬರಕ್ಕೆ ಬೃಹತ್ ಮರಗಳು ಧರೆಗುರುಳಿದಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ.
4 / 6

ಇತ್ತ ಸಿಡಿಲು ಬಡಿದು ವಿಜಯಪುರದ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಐತಿಹಾಸಿಕ ಮೆಹೆತರ್ ಮಹಲ್ಗೆ ಹಾನಿಯಾಗಿದೆ.
5 / 6

ಆದಿಲ್ ಶಾಹಿ ಕಾಲದಲ್ಲಿ ನಿರ್ಮಿಸಲಾಗಿದ್ದ ಈ ಐತಿಹಾಸಿಕ ಮೆಹೆತರ್ ಮಹಲ್ನ ಮಿನಾರ್ಗೆ ಬಡಿದಿರುವ ಸಿಡಿಲ ಹೊಡೆತಕ್ಕೆ ಮಿನಾರ್ ತುಂಡಾಗಿ ಮೆಹರತ್ ಮೆಹಲ್ ಬಳಿ ನಿಂತಿದ್ದ ಕಾರಿನ ಮೇಲೆ ಬಿದ್ದಿದೆ.
6 / 6
Related Photo Gallery
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್-ತಾಂಡವ್ ರಾಮ್ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್ ಸರ್ಕ್ಯೂಟ್ಗೆ ಸಿಲಿಂಡರ್ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ




