AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಮಳೆಯಿಂದ ಜಲಾವೃತಗೊಂಡ ಪ್ರದೇಶಗಳ ಫೋಟೋಗಳು

ಕರ್ನಾಟಕದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಹಲವು ಪ್ರದೇಶಗಳು ಜಲಾವೃತಗೊಂಡಿದ್ದಲ್ಲದೆ, ಮನೆಗಳಿಗೆ ನೀರು ನುಗ್ಗಿದೆ. ಇದರಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ.

TV9 Web
| Updated By: Rakesh Nayak Manchi|

Updated on: Sep 06, 2022 | 11:34 AM

Share
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿವಿಲಾಸಪುರ ಬಳಿಯ ಜಲಾಶಯದ ಕೋಡಿ ಬಿದ್ದ ಹಿನ್ನೆಲೆ ಹೊಸದುರ್ಗ ತಾಲೂಕಿನ ಪೂಜಾರಹಟ್ಟಿಗೆ ನೀರು ನುಗ್ಗಿ ಹಲವು ಮನೆಗಳು ಜಲಾವೃತಗೊಂಡಿದೆ.

Karnataka Rain Effects Many areas flooded due to rain Photos

1 / 12
ತುಮಕೂರು ಜಿಲ್ಲೆಯಲ್ಲಿ ಸುರಿದ ನಿರಂತರ ಮಳೆಯಿಂದಾಗಿ 15 ವರ್ಷಗಳಿಂದ ತುಂಬದ ಗೊಟ್ಟಿಕೆರೆ ಇದೀಗ ಭರ್ತಿಗೊಂಡಿದೆ.‌ ಮಳೆ ನೀರಿಗೆ ತುರುವೇಕೆರೆ ತಾಲೂಕಿನ ಗೊಟ್ಟಿಕೆರೆ ಗ್ರಾಮದ ಕರೆ ಭರ್ತಿಯಾಗಿ ಕೋಡಿ ಬಿದ್ದಿದ್ದು, ನೀರಿನ ಹರಿವು ಕಣ್ಮನ ಸೆಳೆಯುತ್ತಿದೆ. ಇದನ್ನು ನೋಡಲು ಜನರು ಬರುತ್ತಿದ್ದಾರೆ.

Karnataka Rain Effects Many areas flooded due to rain Photos

2 / 12
Karnataka Rain Effects Many areas flooded due to rain Photos

ರಾತ್ರಿ ಸುರಿದ ಧಾರಾಕಾರ ಮಳೆ ಹಿನ್ನೆಲೆ ಬಾಗಲಕೋಟೆಯ ಬಾದಾಮಿ ಪ್ರವಾಸಿ ತಾಣಕ್ಕೂ ಪ್ರವಾಹ ಬಿಸಿ ತಟ್ಟಿದ್ದು, ಐತಿಹಾಸಿಕ‌ ಮೇಣಬಸದಿ, ಗುಹಾಂತರ ದೇವಾಲಯ ಪ್ರದೇಶದ ಬೀದಿಯಲ್ಲಿ ನೀರು ಬೊರ್ಗರೆದು ಹರಿಯುತ್ತಿದೆ.

3 / 12
Karnataka Rain Effects Many areas flooded due to rain Photos

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು, ಕೊಕಟನೂರ ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನವು ಜಲಾವೃತಗೊಂಡಿತು. ನಿರಂತರ ಮಳೆಯಿಂದ ಕೆರೆ ಕೊಡಿ ಒಡೆದು ದೇವಸ್ಥಾನಕ್ಕೂ ನೀರು ನುಗ್ಗಿದ್ದು, ದೇವಸ್ಥಾನದ ಸುತ್ತಲೂ ನಾಲ್ಕ ಅಡಿಯಷ್ಟು ಎತ್ತರಕ್ಕೆ ನೀರು ತುಂಬಿದೆ. ಗರ್ಭಗುಡಿಗೆ ನುಗ್ಗಿದ ನೀರನ್ನು ಅರ್ಚಕರು ಹೊರಹಾಕಿದರು. ಅಲ್ಲದೆ ನೀರಿನಲ್ಲೇ ಹೋಗಿ ಭಕ್ತರು ದೇವಿ ದರ್ಶನ ಪಡೆಯುತ್ತಿದ್ದಾರೆ.

4 / 12
Karnataka Rain Effects Many areas flooded due to rain Photos

ಬೆಂಗಳೂರು ನಗರದ ದೊಮ್ಮಲೂರು ಲೇಔಟ್​ನಲ್ಲಿ ಸುರಿದ ಭಾರೀ ಮಳೆಗೆ ರಸ್ತೆಗಳಲ್ಲಿ ಮಳೆ ನೀರು ತುಂಬಿಕೊಂಡಿತ್ತು. ಈ ನೀರಿನಲ್ಲಿ ಯುವಕನೊಬ್ಬ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಈಜಾಡಿದ್ದು, ಇದರ ದೃಶ್ಯಾವಳಿ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

5 / 12
Karnataka Rain Effects Many areas flooded due to rain Photos

ಬೆಂಗಳೂರಿನ ರಾಮಗೊಂಡನ ಹಳ್ಳಿಯಲ್ಲಿ ಸುರಿದ ಮಳೆಗೆ ಕೆಲವೊಂದು ಪ್ರದೇಶಗಳು ಜಲಾವೃತಗೊಂಡವು.

6 / 12
Karnataka Rain Effects Many areas flooded due to rain Photos

ಧಾರಾಕರ ಮಳೆಗೆ ಚಿಕ್ಕಬಳ್ಳಾಪುರ ತಾಲೂಕಿನ ಕೊತ್ತನೂರು ಗ್ರಾಮದ ಹಲವು ಮನೆಗಳು ಜಲಾವೃತಗೊಂಡಿತು. ಜಮೀನುಗಳಲ್ಲಿ ಹರಿಯುವ ನೀರು ಗ್ರಾಮಕ್ಕೆ ನುಗ್ಗಿ ಅವಾಂತರ ಸೃಷ್ಟಿಯಾಗಿದ್ದು, ರಾತ್ರಿಯಿಡೀ ಗ್ರಾಮಸ್ಥರು ಮನೆಗೆ ನುಗ್ಗಿರುವ ನೀರನ್ನು ಹೊರತೆಗೆಯುವ ಕೆಲಸಕಾರ್ಯ ಮಾಡಿದರು.

7 / 12
Karnataka Rain Effects Many areas flooded due to rain Photos

ಚಾಮರಾಜನಗರ ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರಿದಿದ್ದು, ಯಳಂದೂರು ತಾಲೂಕಿನ ಅಗರ-ಮಾಂಬಳ್ಳಿ ಪೊಲೀಸ್ ಠಾಣೆಗೆ ಮಳೆ ನೀರು ನುಗ್ಗಿದೆ. ವಾರದಲ್ಲಿ ಎರಡನೇ ಬಾರಿಗೆ ಪೊಲೀಸ್ ಠಾಣೆ ಮುಳುಗಡೆಯಾಗಿದೆ. ಸುವರ್ಣಾವತಿ ನದಿ ಪ್ರವಾಹದಿಂದಾಗಿ ಈ ಘಟನೆ ನಡೆದಿದ್ದು, ಕೊಳ್ಳೇಗಾಲ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ ಸಹ ಬಂದ್ ಆಗಿದೆ.

8 / 12
Karnataka Rain Effects Many areas flooded due to rain Photos

ಧಾರವಾಡ ಜಿಲ್ಲೆಯಲ್ಲಿ ಮಳೆ ಅಬ್ಬರ ಹಿನ್ನೆಲೆ ನವಲಗುಂದ ತಾಲೂಕಿನ ಬೋಗಾನೂರ ಗ್ರಾಮಕ್ಕೆ ಹಳ್ಳದ ನೀರು ನುಗ್ಗಿತು.

9 / 12
Karnataka Rain Effects Many areas flooded due to rain Photos

ಗದಗ ಜಿಲ್ಲೆಯಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ಮುಂಡರಗಿ ತಾಲೂಕಿನ ಮಲ್ಲಿಕಾರ್ಜುನಪುರ ಗ್ರಾಮಕ್ಕೆ ಹಳ್ಳದ ನೀರು ನುಗ್ಗಿದ್ದು, ಮಲ್ಲಿಕಾರ್ಜು‌ನಪುರದಿಂದ‌ ಬಾಗೇವಾಡಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಪರ್ಯಾಯ ವ್ಯವಸ್ಥೆ ಮಾಡದ ಜಿಲ್ಲಾಡಳಿತದ ವಿರುದ್ಧ ಆಕ್ರೋಶವೂ ವ್ಯಕ್ತವಾಗಿದೆ.

10 / 12
Karnataka Rain Effects Many areas flooded due to rain Photos

ಕೋಲಾರದಲ್ಲಿ ನಿರಂತ ಮಳೆಯಿಂದಾಗಿ ಯರಗೋಳ್ ಅಣೆಕಟ್ಟು ತುಂಬಿ ಹರಿಯುತ್ತಿದೆ. ಸ್ವತಂತ್ರ್ಯಾ ನಂತರ ಕೋಲಾರದಲ್ಲಿ ನಿರ್ಮಾಣವಾದ ಮೊದಲ ಡ್ಯಾಂ ಎಂಬ ಹೆಗ್ಗಳಿಕೆ ಈ ಅಣೆಕಟ್ಟಿಗಿದ್ದು, ಡ್ಯಾಂ ನಿರ್ಮಾಣವಾದ ನಂತರ ಇದೇ ಮೊದಲ ಬಾರಿಗೆ ತುಂಬಿ ಹರಿಯುತ್ತಿದೆ. ಸದ್ಯ ನಿರಂತರ ಮಳೆಯಿಂದ ಡ್ಯಾಂ ತುಂಬಿ ತಮಿಳುನಾಡಿಗೆ ನೀರು ಹರಿಯುತ್ತಿದ್ದು, ಈ ದೃಶ್ಯವನ್ನು ನೋಡಲು ಮನ ಮೋಹಕವಾಗಿದೆ.

11 / 12
Karnataka Rain Effects Many areas flooded due to rain Photos

ರಾಯಚೂರು ಜಿಲ್ಲೆಯಲ್ಲಿ ಸುರಿದ ನಿರಂತರ ಮಳೆಯಿಂದ ಮಸ್ಕಿ ಜಲಾಶಯ ಭರ್ತಿಗೊಂಡಿದ್ದು, ಜಲಾಶಯದ ಎರಡು ಗೇಟ್ ಮೂಲಕ 300 ಕ್ಯೂಸೆಕ್ ನೀರು ಬಿಡುಗಡೆ. ಸದ್ಯ ಜಲಾಶಯಕ್ಕೆ 500 ಕ್ಯೂಸೆಕ್ ಒಳಹರಿವು ಕೂಡ ಆಗಿದೆ. ಮಸ್ಕಿ‌ ಹಳ್ಳಕ್ಕೆ ನೀರು ಬಿಟ್ಟ ಹಿನ್ನೆಲೆ ಅಧಿಕಾರಿಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದ್ದು, ಹಳ್ಳದ ಪಾತ್ರದ ಜನ ಹಳ್ಳದಲ್ಲಿ ಇಳಿಯುವುದು, ಜಾನುವಾರುಗಳನ್ನು ಬಿಡದಂತೆ ಸೂಚಿಸಿದ್ದಾರೆ.

12 / 12
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್