Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದುವರೆದ ಮಳೆ ಆರ್ಭಟ: ಧಾರಾಕಾರ ಮಳೆಗೆ ಜನರು ಸುಸ್ತೋ ಸುಸ್ತು

Updated on: Jun 08, 2024 | 9:46 PM

ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್‌ ಹೇಳಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್​​ 11ರವರೆಗೆ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಆಗಲಿದೆ. ಹಾಗಾದ್ರೆ ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಆಗಿದೆ ಇಲ್ಲಿದೆ ಮಾಹಿತಿ.

1 / 6
ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್‌ ಹೇಳಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್​​ 11ರವರೆಗೆ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಆಗಲಿದೆ. ಹಾಗಾದ್ರೆ ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಆಗಿದೆ ಇಲ್ಲಿದೆ ಮಾಹಿತಿ.

ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್‌ ಹೇಳಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್​​ 11ರವರೆಗೆ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಆಗಲಿದೆ. ಹಾಗಾದ್ರೆ ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಆಗಿದೆ ಇಲ್ಲಿದೆ ಮಾಹಿತಿ.

2 / 6
ಬೆಳಗಾವಿ ಜಿಲ್ಲೆಯಾದ್ಯಂತ ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ನಗರದ ಗ್ಲೋಬ್ ಚಿತ್ರಮಂದಿರಕ್ಕೆ ಮಳೆ ನೀರು ನುಗ್ಗಿತ್ತು. ಚಿತ್ರಮಂದಿರದ ಟಿಕೆಟ್ ಕೌಂಟರ್, ಪಾರ್ಕಿಂಗ್ ಸ್ಥಳ ಜಲಾವೃತವಾಗಿತ್ತು. ಬೆಳಗಾವಿಯ ಖಾನಾಪುರ ರಸ್ತೆ ಮೇಲೆ 2 ಅಡಿಯಷ್ಟು ನೀರು ನಿಂತಿದ್ದರಿಂದ ಸಂಚಾರ ದಟ್ಟಣೆ, ಸವಾರರ ಪರದಾಡಿದ್ದಾರೆ. ವಿಜಯಪುರ, ಕಲಬುರಗಿಯಲ್ಲೂ ಇಂದು ಧಾರಾಕಾರ ಮಳೆ ಸುರಿದಿದೆ.

ಬೆಳಗಾವಿ ಜಿಲ್ಲೆಯಾದ್ಯಂತ ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ನಗರದ ಗ್ಲೋಬ್ ಚಿತ್ರಮಂದಿರಕ್ಕೆ ಮಳೆ ನೀರು ನುಗ್ಗಿತ್ತು. ಚಿತ್ರಮಂದಿರದ ಟಿಕೆಟ್ ಕೌಂಟರ್, ಪಾರ್ಕಿಂಗ್ ಸ್ಥಳ ಜಲಾವೃತವಾಗಿತ್ತು. ಬೆಳಗಾವಿಯ ಖಾನಾಪುರ ರಸ್ತೆ ಮೇಲೆ 2 ಅಡಿಯಷ್ಟು ನೀರು ನಿಂತಿದ್ದರಿಂದ ಸಂಚಾರ ದಟ್ಟಣೆ, ಸವಾರರ ಪರದಾಡಿದ್ದಾರೆ. ವಿಜಯಪುರ, ಕಲಬುರಗಿಯಲ್ಲೂ ಇಂದು ಧಾರಾಕಾರ ಮಳೆ ಸುರಿದಿದೆ.

3 / 6
ಬೀದರ್ ಪಟ್ಟಣದಲ್ಲಿ ಅರ್ಧಗಂಟೆ ಭಾರೀ ಮಳೆ ಸುರಿದಿದೆ. ಮಳೆಯಿಂದಾಗಿ ರಸ್ತೆ ತುಂಬೆಲ್ಲ ನೀರು ತುಂಬಿಕೊಂಡಿದ್ದು ವಾಹನ ಸವಾರರು ಪರದಾಡಿದ್ದಾರೆ. ಇತ್ತ ತರಕಾರಿ ಅಂಗಡಿಗಳಿಗೆ ನುಗ್ಗಿದ ಮಳೆ ನೀರು ತರಕಾರಿ ನೀರು ಪಾಲಾಗಿದೆ. ಓಲ್ಡ್ ಆರ್​ಟಿಓ ಕಚೇರಿ ಬಳಿ ರಸ್ತೆಯಲ್ಲಿ ನೀರು ತುಂಬಿ ಹರಿದಿದೆ.

ಬೀದರ್ ಪಟ್ಟಣದಲ್ಲಿ ಅರ್ಧಗಂಟೆ ಭಾರೀ ಮಳೆ ಸುರಿದಿದೆ. ಮಳೆಯಿಂದಾಗಿ ರಸ್ತೆ ತುಂಬೆಲ್ಲ ನೀರು ತುಂಬಿಕೊಂಡಿದ್ದು ವಾಹನ ಸವಾರರು ಪರದಾಡಿದ್ದಾರೆ. ಇತ್ತ ತರಕಾರಿ ಅಂಗಡಿಗಳಿಗೆ ನುಗ್ಗಿದ ಮಳೆ ನೀರು ತರಕಾರಿ ನೀರು ಪಾಲಾಗಿದೆ. ಓಲ್ಡ್ ಆರ್​ಟಿಓ ಕಚೇರಿ ಬಳಿ ರಸ್ತೆಯಲ್ಲಿ ನೀರು ತುಂಬಿ ಹರಿದಿದೆ.

4 / 6
ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಭಾರೀ ಮಳೆ ಅಬ್ಬರಿಸಿದೆ. ಕೇವಲ ಅರ್ಧ ಗಂಟೆ ಸುರಿದ ನಿರಂತರ ಮಳೆಗೆ ರಸ್ತೆ ಜಲಾವೃತವಾಗಿದ್ದು ಜನರು ಹಾಗೂ ವಾಹನ ಸವಾರರು ಪರದಾಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಭಾರೀ ಮಳೆ ಅಬ್ಬರಿಸಿದೆ. ಕೇವಲ ಅರ್ಧ ಗಂಟೆ ಸುರಿದ ನಿರಂತರ ಮಳೆಗೆ ರಸ್ತೆ ಜಲಾವೃತವಾಗಿದ್ದು ಜನರು ಹಾಗೂ ವಾಹನ ಸವಾರರು ಪರದಾಡಿದ್ದಾರೆ.

5 / 6
ಮಂಗಳೂರು ನಗರ ಸೇರಿದಂತೆ ವಿವಿಧೆಡೆ ಭಾರೀ ಮಳೆ ಆರ್ಭಟಿಸಿದ್ದು, ನಗರ ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ ಕೆಳಭಾಗದ ರಸ್ತೆಗೆ ಮಳೆ ನೀರು ನುಗ್ಗಿದೆ. ಅವೈಜ್ಞಾನಿಕ ಚರಂಡಿಯಿಂದ ರಸ್ತೆಗೆ ನುಗ್ಗಿದ್ದು, ಅರ್ಧ ಗಂಟೆ ಸುರಿದ ಭಾರೀ‌ ಮಳೆಗೆ ರಸ್ತೆಗಳು ಹೊಳೆಯಂತಾಗಿದ್ದವು.

ಮಂಗಳೂರು ನಗರ ಸೇರಿದಂತೆ ವಿವಿಧೆಡೆ ಭಾರೀ ಮಳೆ ಆರ್ಭಟಿಸಿದ್ದು, ನಗರ ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ ಕೆಳಭಾಗದ ರಸ್ತೆಗೆ ಮಳೆ ನೀರು ನುಗ್ಗಿದೆ. ಅವೈಜ್ಞಾನಿಕ ಚರಂಡಿಯಿಂದ ರಸ್ತೆಗೆ ನುಗ್ಗಿದ್ದು, ಅರ್ಧ ಗಂಟೆ ಸುರಿದ ಭಾರೀ‌ ಮಳೆಗೆ ರಸ್ತೆಗಳು ಹೊಳೆಯಂತಾಗಿದ್ದವು.

6 / 6
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಭರ್ಜರಿ ಮಳೆ ಆಗಿದೆ. ಸುಮಾರು ಅರ್ಧಗಂಟೆ ಮಳೆ ಸುರಿದಿದೆ. ಪರಿಣಾಮ ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಇಂದು ಮತ್ತೆ ಆಗಮಿಸುವ ಮೂಲಕ ವಾಣಿಜ್ಯ ನಗರಿ ಮಲೆನಾಡಿನಂತಾಗಿದೆ.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಭರ್ಜರಿ ಮಳೆ ಆಗಿದೆ. ಸುಮಾರು ಅರ್ಧಗಂಟೆ ಮಳೆ ಸುರಿದಿದೆ. ಪರಿಣಾಮ ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಇಂದು ಮತ್ತೆ ಆಗಮಿಸುವ ಮೂಲಕ ವಾಣಿಜ್ಯ ನಗರಿ ಮಲೆನಾಡಿನಂತಾಗಿದೆ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us