AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿ ಕರ್ನಾಟಕದ ಹಲವೆಡೆ ಭಾರಿ ಮಳೆ: ಪ್ರವಾಸಿ ತಾಣ, ಜಲಪಾತಗಳಿಗೆ ಪ್ರವೇಶ ನಿರ್ಬಂಧ

ಕರ್ನಾಟಕದಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಉಡುಪಿಯ ಅಮಾವಾಸ್ಯೆಬೈಲು ವ್ಯಾಪ್ತಿಯಲ್ಲಿ ಸುಂಟರಗಾಳಿಗೆ ಜನಜೀವನ ಅಸ್ತವ್ಯಸ್ತವಾಗಿದೆ. ಚಿಕ್ಕಮಗಳೂರಿನ ಕೊಟ್ಟಿಗೆಹಾರ ಬಳಿ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಬಿರುಕು ಉಂಟಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹಲವೆಡೆ ಶಾಲೆಗಳಿಗೆ ರಜೆ ನೀಡಲಾಗಿದೆ.

ಗಣಪತಿ ಶರ್ಮಾ
|

Updated on: Jul 04, 2024 | 10:14 AM

Share
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ‌ ಅಬ್ಬರ ಮುಂದುವರಿದಿದೆ. ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿಯಲ್ಲಿ ಧಾರಾಕಾರ ಮಳೆಗೆ ಘಾಟ್​ ರಸ್ತೆಯಲ್ಲಿ ಬಿರುಕು ಉಂಟಾಗಿದೆ. ಪರಿಣಾಮವಾಗಿ ರಸ್ತೆ ಕುಸಿಯುವ ಹಂತ ತಲುಪಿದೆ. ದಕ್ಷಿಣ ಕನ್ನಡ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ರಸ್ತೆ ಇದಾಗಿದೆ. ಕೆಲವು ದಿನಗಳ ಹಿಂದೆಯಷ್ಟೇ ರಸ್ತೆ ಕಾಮಗಾರಿ ನಡೆದಿತ್ತು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ‌ ಅಬ್ಬರ ಮುಂದುವರಿದಿದೆ. ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿಯಲ್ಲಿ ಧಾರಾಕಾರ ಮಳೆಗೆ ಘಾಟ್​ ರಸ್ತೆಯಲ್ಲಿ ಬಿರುಕು ಉಂಟಾಗಿದೆ. ಪರಿಣಾಮವಾಗಿ ರಸ್ತೆ ಕುಸಿಯುವ ಹಂತ ತಲುಪಿದೆ. ದಕ್ಷಿಣ ಕನ್ನಡ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ರಸ್ತೆ ಇದಾಗಿದೆ. ಕೆಲವು ದಿನಗಳ ಹಿಂದೆಯಷ್ಟೇ ರಸ್ತೆ ಕಾಮಗಾರಿ ನಡೆದಿತ್ತು.

1 / 6
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ವ್ಯಾಪ್ತಿಯಲ್ಲಿ ಭಾರಿ ಸುಂಟರಗಾಳಿಗೆ ರಟ್ಟಾಡಿ ಗ್ರಾಮದ ಜನರು ಕಂಗಾಲಾಗಿದ್ದಾರೆ. ಸುಂಟರಗಾಳಿಗೆ ಅಪಾರ ಪ್ರಮಾಣದ ಮರ, ಮನೆಗಳಿಗೆ ಹಾನಿಯಾಗಿದೆ. ಮೊದಲ ಬಾರಿಗೆ ಇಂತಹ ಅನುಭವಕ್ಕೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಅಮಾವಾಸ್ಯೆ ಬೈಲು ಗ್ರಾಮ ಪಂಚಾಯಿತಿ ಪಿಡಿಒ ಭೇಟಿ ನೀಡಿ ಮರ, ಮನೆಗಳ ಹಾನಿ ಕುರಿತು ಪರಿಶೀಲನೆ ನಡೆಸಿದ್ದಾರೆ. ಮತ್ತೊಂದೆಡೆ, ಡ್ರೋನ್‌ ಸಹಾಯದ ಮೂಲಕ ಹಾನಿ ವ್ಯಾಪ್ತಿಯ ಪರಿಶೀಲನೆ ನಡೆಸಲಾಗುತ್ತಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ವ್ಯಾಪ್ತಿಯಲ್ಲಿ ಭಾರಿ ಸುಂಟರಗಾಳಿಗೆ ರಟ್ಟಾಡಿ ಗ್ರಾಮದ ಜನರು ಕಂಗಾಲಾಗಿದ್ದಾರೆ. ಸುಂಟರಗಾಳಿಗೆ ಅಪಾರ ಪ್ರಮಾಣದ ಮರ, ಮನೆಗಳಿಗೆ ಹಾನಿಯಾಗಿದೆ. ಮೊದಲ ಬಾರಿಗೆ ಇಂತಹ ಅನುಭವಕ್ಕೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಅಮಾವಾಸ್ಯೆ ಬೈಲು ಗ್ರಾಮ ಪಂಚಾಯಿತಿ ಪಿಡಿಒ ಭೇಟಿ ನೀಡಿ ಮರ, ಮನೆಗಳ ಹಾನಿ ಕುರಿತು ಪರಿಶೀಲನೆ ನಡೆಸಿದ್ದಾರೆ. ಮತ್ತೊಂದೆಡೆ, ಡ್ರೋನ್‌ ಸಹಾಯದ ಮೂಲಕ ಹಾನಿ ವ್ಯಾಪ್ತಿಯ ಪರಿಶೀಲನೆ ನಡೆಸಲಾಗುತ್ತಿದೆ.

2 / 6
ಕುಂದಾಪುರ ತಾಲೂಕಿನ ಕಮಲಶಿಲೆಯ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದೊಳಗೆ ಕುಬ್ಜ ನದಿ ನೀರು ಹರಿದಿದೆ. ಬೆಳಗಿನ ಜಾವ ಮೂರುವರೆ ಸುಮಾರಿಗೆ ಕುಬ್ಜಾ ನದಿ ನೀರು ದೇವಿಯ ಚರಣ ಸ್ಪರ್ಶ ಮಾಡಿದೆ. ಗರ್ಭಗುಡಿಗೆ ನೀರು ಬರುತ್ತಿದ್ದಂತೆ ಅರ್ಚಕರು ಮಂಗಳಾರತಿ ಮಾಡಿದರು. ವರ್ಷಂಪತಿ ಒಂದು ಬಾರಿ ಗರ್ಭಗುಡಿಗೆ ಕುಬ್ಜಾ ನದಿ ನೀರು ಹರಿದುಬರುತ್ತದೆ. ಈ ನೈಸರ್ಗಿಕ ಪುಣ್ಯ ಸ್ನಾನಕ್ಕೆ ಭಕ್ತರು ಕಾತರದಿಂದ ಕಾಯುತ್ತಿದ್ದರು.

ಕುಂದಾಪುರ ತಾಲೂಕಿನ ಕಮಲಶಿಲೆಯ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದೊಳಗೆ ಕುಬ್ಜ ನದಿ ನೀರು ಹರಿದಿದೆ. ಬೆಳಗಿನ ಜಾವ ಮೂರುವರೆ ಸುಮಾರಿಗೆ ಕುಬ್ಜಾ ನದಿ ನೀರು ದೇವಿಯ ಚರಣ ಸ್ಪರ್ಶ ಮಾಡಿದೆ. ಗರ್ಭಗುಡಿಗೆ ನೀರು ಬರುತ್ತಿದ್ದಂತೆ ಅರ್ಚಕರು ಮಂಗಳಾರತಿ ಮಾಡಿದರು. ವರ್ಷಂಪತಿ ಒಂದು ಬಾರಿ ಗರ್ಭಗುಡಿಗೆ ಕುಬ್ಜಾ ನದಿ ನೀರು ಹರಿದುಬರುತ್ತದೆ. ಈ ನೈಸರ್ಗಿಕ ಪುಣ್ಯ ಸ್ನಾನಕ್ಕೆ ಭಕ್ತರು ಕಾತರದಿಂದ ಕಾಯುತ್ತಿದ್ದರು.

3 / 6
ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಬುಧವಾರ ರಾತ್ರಿ ಭಾರೀ ಮಳೆಯಾಗಿದ್ದು, ತುಂಗಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬಂದಿದೆ. ತುಂಗಾ ನದಿ ಅಪಾಯದ ಅಂಚಿನಲ್ಲಿ ಹರಿಯುತ್ತಿದೆ. ಮಳೆ ಹೀಗೆಯೇ ಮುಂದುವರೆದರೆ ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗುವ ಸಾಧ್ಯತೆ ಇದೆ.

ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಬುಧವಾರ ರಾತ್ರಿ ಭಾರೀ ಮಳೆಯಾಗಿದ್ದು, ತುಂಗಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬಂದಿದೆ. ತುಂಗಾ ನದಿ ಅಪಾಯದ ಅಂಚಿನಲ್ಲಿ ಹರಿಯುತ್ತಿದೆ. ಮಳೆ ಹೀಗೆಯೇ ಮುಂದುವರೆದರೆ ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗುವ ಸಾಧ್ಯತೆ ಇದೆ.

4 / 6
ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾದ ಕಾರಣ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಡ್ಯಾಂನ ನೀರಿನ ಮಟ್ಟ ನೂರು ಅಡಿ ಸನಿಹಕ್ಕೆ ಬಂದಿದೆ. ಒಂದೇ ವಾರದಲ್ಲಿ ಕೆಆರ್​ಎಸ್​​ ಡ್ಯಾಂಗೆ 12 ಅಡಿಯಷ್ಟು ನೀರು ಹರಿದುಬಂದಿದೆ. ಸದ್ಯ ಕೆಆರ್​ಎಸ್ ಡ್ಯಾಂ​​ ನೀರಿನ ಮಟ್ಟ 99.30 ಅಡಿ ತಲುಪಿದೆ. ವಾರದ ಹಿಂದೆಯಷ್ಟೆ 87 ಅಡಿಗೆ ಕುಸಿದಿದ್ದ ಡ್ಯಾಂನ ನೀರಿನ ಮಟ್ಟ ಇದೀಗ ಮಳೆಯಿಂದಾಗಿ ಚೇತರಿಸಿಕೊಂಡಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯ ಇದಾಗಿದೆ. ಶೀಘ್ರವೇ ನಾಲೆಗಳಿಗೆ ನೀರು ಬಿಡುವ ನಿರೀಕ್ಷೆಯಲ್ಲಿ ರೈತರು ಇದ್ದಾರೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾದ ಕಾರಣ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಡ್ಯಾಂನ ನೀರಿನ ಮಟ್ಟ ನೂರು ಅಡಿ ಸನಿಹಕ್ಕೆ ಬಂದಿದೆ. ಒಂದೇ ವಾರದಲ್ಲಿ ಕೆಆರ್​ಎಸ್​​ ಡ್ಯಾಂಗೆ 12 ಅಡಿಯಷ್ಟು ನೀರು ಹರಿದುಬಂದಿದೆ. ಸದ್ಯ ಕೆಆರ್​ಎಸ್ ಡ್ಯಾಂ​​ ನೀರಿನ ಮಟ್ಟ 99.30 ಅಡಿ ತಲುಪಿದೆ. ವಾರದ ಹಿಂದೆಯಷ್ಟೆ 87 ಅಡಿಗೆ ಕುಸಿದಿದ್ದ ಡ್ಯಾಂನ ನೀರಿನ ಮಟ್ಟ ಇದೀಗ ಮಳೆಯಿಂದಾಗಿ ಚೇತರಿಸಿಕೊಂಡಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯ ಇದಾಗಿದೆ. ಶೀಘ್ರವೇ ನಾಲೆಗಳಿಗೆ ನೀರು ಬಿಡುವ ನಿರೀಕ್ಷೆಯಲ್ಲಿ ರೈತರು ಇದ್ದಾರೆ.

5 / 6
ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಯಲ್ಲಾಪುರ ತಾಲೂಕಿನ ಫಾಲ್ಸ್​​ಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಭಾರಿ ಮಳೆಯಿಂದಾಗಿ ಗಂಗಾವಳಿ ನದಿ ನೀರಿ ಪ್ರಮಾಣ ಹೆಚ್ಚಳವಾಗಿದೆ. ಯಲ್ಲಾಪುರ ತಾಲೂಕಿನ ಎಲ್ಲಾ ಜಲಪಾತಗಳ ವೀಕ್ಷಣೆಗೆ ನಿಷೇಧ ಹೇರಲಾಗಿದೆ. ಯಲ್ಲಾಪುರ ತಾಲೂಕಿನ ಶಿರಲೆ ಜಲಪಾತ, ಕಾನೂರು ಫಾಲ್ಸ್​​​, ಕುಳಿ ಮಾಗೋಡು ಜಲಪಾತ ಬಳಿ ತೆರಳದಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಯಲ್ಲಾಪುರ ತಾಲೂಕಿನ ಫಾಲ್ಸ್​​ಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಭಾರಿ ಮಳೆಯಿಂದಾಗಿ ಗಂಗಾವಳಿ ನದಿ ನೀರಿ ಪ್ರಮಾಣ ಹೆಚ್ಚಳವಾಗಿದೆ. ಯಲ್ಲಾಪುರ ತಾಲೂಕಿನ ಎಲ್ಲಾ ಜಲಪಾತಗಳ ವೀಕ್ಷಣೆಗೆ ನಿಷೇಧ ಹೇರಲಾಗಿದೆ. ಯಲ್ಲಾಪುರ ತಾಲೂಕಿನ ಶಿರಲೆ ಜಲಪಾತ, ಕಾನೂರು ಫಾಲ್ಸ್​​​, ಕುಳಿ ಮಾಗೋಡು ಜಲಪಾತ ಬಳಿ ತೆರಳದಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

6 / 6
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!