AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನರ ನೆಮ್ಮದಿ ಕಸಿದ ಮಳೆರಾಯ: ಮನೆಗಳಿಗೆ ನುಗ್ಗಿದ ನೀರು, ಕುಸಿದ ಸೇತುವೆ

ಕೇರಳಕ್ಕೆ ಮುಂಗಾರು ಪ್ರವೇಶದೊಂದಿಗೆ ಕರ್ನಾಟಕದಲ್ಲಿ ಮಳೆ ಚುರುಕುಗೊಂಡಿದೆ. ಬೆಂಗಳೂರು, ಬಳ್ಳಾರಿ, ಕಲಬುರಗಿ, ಗದಗ, ಹಾವೇರಿ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದಿದೆ. ಪರಿಣಾಮ ಹಲವೆಡೆ ಅವಾಂತರಗಳು ಸಂಭವಿಸಿವೆ. ಮನೆಗಳಿಗೆ ನೀರು ನುಗ್ಗಿವೆ. ಸೇತುವೆ ಕುಸಿದು, ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಇಲ್ಲಿವೆ ನೋಡಿ ಫೋಟೋಸ್​.

ಗಂಗಾಧರ​ ಬ. ಸಾಬೋಜಿ
|

Updated on:Jun 07, 2026 | 8:08 AM

Share
ಕೇರಳಂಗೆ ಮುಂಗಾರು ಪ್ರವೇಶವಾಗಿದ್ದು, ರಾಜ್ಯದಲ್ಲೂ ಮಳೆ ಚುರುಕುಗೊಂಡಿದೆ. ನಿನ್ನೆಯಷ್ಟೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದ್ದು, ಅಲ್ಲಲ್ಲಿ ಭಾರೀ ಸಮಸ್ಯೆಗಳು ಕಂಡು ಬಂದಿವೆ. ಜೂನ್ 9ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ.

ಕೇರಳಂಗೆ ಮುಂಗಾರು ಪ್ರವೇಶವಾಗಿದ್ದು, ರಾಜ್ಯದಲ್ಲೂ ಮಳೆ ಚುರುಕುಗೊಂಡಿದೆ. ನಿನ್ನೆಯಷ್ಟೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದ್ದು, ಅಲ್ಲಲ್ಲಿ ಭಾರೀ ಸಮಸ್ಯೆಗಳು ಕಂಡು ಬಂದಿವೆ. ಜೂನ್ 9ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ.

1 / 7
ಕೇರಳಂನ ಕಾಸರಗೋಡು ಜಿಲ್ಲೆಯಾದ್ಯಂತ ಭಾರೀ ಮಳೆ ಆಗಿದೆ. ಅಡೂರು ಎಂಬಲ್ಲಿ ನಿರಂತರ ಮಳೆಗೆ ಮಣ್ಣು ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮನೆ ಸಮೀಪ ಆಟವಾಡುತ್ತಿದ್ದಾಗ ಆವರಣದ ಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಮಣ್ಣಿನಡಿ ಮೂವರು ಮಕ್ಕಳು ಸಿಲುಕಿದ್ದು ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ಮಾಡಿದ್ದಾರೆ. ಅಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೇರಳಂನ ಕಾಸರಗೋಡು ಜಿಲ್ಲೆಯಾದ್ಯಂತ ಭಾರೀ ಮಳೆ ಆಗಿದೆ. ಅಡೂರು ಎಂಬಲ್ಲಿ ನಿರಂತರ ಮಳೆಗೆ ಮಣ್ಣು ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮನೆ ಸಮೀಪ ಆಟವಾಡುತ್ತಿದ್ದಾಗ ಆವರಣದ ಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಮಣ್ಣಿನಡಿ ಮೂವರು ಮಕ್ಕಳು ಸಿಲುಕಿದ್ದು ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ಮಾಡಿದ್ದಾರೆ. ಅಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

2 / 7
ಧಾರಕಾರ ಮಳೆಗೆ ಬಳ್ಳಾರಿ ನಗರದಲ್ಲಿ ಭಾರೀ ಅಧ್ವಾನ ಆಗಿದೆ. ತಡರಾತ್ರಿ ಸತತವಾಗಿ ಎರಡು ಗಂಟೆ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಮನೆಗಳಲ್ಲಿದ್ದ ದವಸ, ಧಾನ್ಯಗಳೆಲ್ಲಾ ನೀರುಪಾಲಾಗಿದೆ. ಮನೆಯಲ್ಲಿನ ನೀರು ಹೊರಹಾಕಲು ಮನೆ ಮಂದಿ ಹರಸಾಹಸ ಪಟ್ಟಿದ್ದಾರೆ.

ಧಾರಕಾರ ಮಳೆಗೆ ಬಳ್ಳಾರಿ ನಗರದಲ್ಲಿ ಭಾರೀ ಅಧ್ವಾನ ಆಗಿದೆ. ತಡರಾತ್ರಿ ಸತತವಾಗಿ ಎರಡು ಗಂಟೆ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಮನೆಗಳಲ್ಲಿದ್ದ ದವಸ, ಧಾನ್ಯಗಳೆಲ್ಲಾ ನೀರುಪಾಲಾಗಿದೆ. ಮನೆಯಲ್ಲಿನ ನೀರು ಹೊರಹಾಕಲು ಮನೆ ಮಂದಿ ಹರಸಾಹಸ ಪಟ್ಟಿದ್ದಾರೆ.

3 / 7
ಕಲಬುರಗಿ ಜಿಲ್ಲೆಯಲ್ಲೂ ಮಳೆ ಆರ್ಭಟ ಜೋರಾಗಿದೆ. ಚಿಂಚೋಳಿ ತಾಲೂಕಿನ ಬೆಡಕಪಳ್ಳಿ ಗ್ರಾಮದಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಊರಿಗೆ ಊರೇ ಕೆರೆಯಂತಾಗಿದೆ. ಜನರು ಮನೆಯಿಂದ ಹೊರಬರಲಾಗದೇ ಸಂಕಷ್ಟ ಅನುಭವಿಸ್ತಿದ್ರೆ, ಮತ್ತಷ್ಟು ಮಂದಿ ಮನೆ ತೊರೆದು ಬೇರೆ ಕಡೆ ಸ್ಥಳಾಂತರವಾಗಿದ್ದಾರೆ. ಚಿಮ್ಮನಚೋಡ ಗ್ರಾಮದ ಬಳಿ ಸೇತುವೆ ಕುಸಿದ ಹಿನ್ನೆಲೆ ಚಿಂಚೋಳಿ - ಭಾಲ್ಕಿ ನಡುವಿನ ರಸ್ತೆ ಸಂಪರ್ಕ ಬಂದ್​ ಆಗಿದೆ.

ಕಲಬುರಗಿ ಜಿಲ್ಲೆಯಲ್ಲೂ ಮಳೆ ಆರ್ಭಟ ಜೋರಾಗಿದೆ. ಚಿಂಚೋಳಿ ತಾಲೂಕಿನ ಬೆಡಕಪಳ್ಳಿ ಗ್ರಾಮದಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಊರಿಗೆ ಊರೇ ಕೆರೆಯಂತಾಗಿದೆ. ಜನರು ಮನೆಯಿಂದ ಹೊರಬರಲಾಗದೇ ಸಂಕಷ್ಟ ಅನುಭವಿಸ್ತಿದ್ರೆ, ಮತ್ತಷ್ಟು ಮಂದಿ ಮನೆ ತೊರೆದು ಬೇರೆ ಕಡೆ ಸ್ಥಳಾಂತರವಾಗಿದ್ದಾರೆ. ಚಿಮ್ಮನಚೋಡ ಗ್ರಾಮದ ಬಳಿ ಸೇತುವೆ ಕುಸಿದ ಹಿನ್ನೆಲೆ ಚಿಂಚೋಳಿ - ಭಾಲ್ಕಿ ನಡುವಿನ ರಸ್ತೆ ಸಂಪರ್ಕ ಬಂದ್​ ಆಗಿದೆ.

4 / 7
ಗದಗದಲ್ಲಿ ಮಳೆ ಹೊಡೆತಕ್ಕೆ ರಸ್ತೆಗಳೇ ಕೆರೆಯಂತಾಗಿವೆ. ಧೋ ಅಂತ ಸುರಿದ ಮಳೆಯಿಂದಾಗಿ ಪಂಚರಹೊಂಡದ ಬಳಿ ಚರಂಡಿ ನೀರು ರಸ್ತೆ ತುಂಬೆಲ್ಲಾ ಹರಿದು ಬಂದಿದೆ. ರಸ್ತೆ ಜಲಮಯ ಆಗಿದ್ರಿಂದ ಮಾರ್ಕೆಟ್​ಗೆ ಹೋಗುವ ಜನರು ಹೈರಾಣಾಗಿದ್ದಾರೆ.

ಗದಗದಲ್ಲಿ ಮಳೆ ಹೊಡೆತಕ್ಕೆ ರಸ್ತೆಗಳೇ ಕೆರೆಯಂತಾಗಿವೆ. ಧೋ ಅಂತ ಸುರಿದ ಮಳೆಯಿಂದಾಗಿ ಪಂಚರಹೊಂಡದ ಬಳಿ ಚರಂಡಿ ನೀರು ರಸ್ತೆ ತುಂಬೆಲ್ಲಾ ಹರಿದು ಬಂದಿದೆ. ರಸ್ತೆ ಜಲಮಯ ಆಗಿದ್ರಿಂದ ಮಾರ್ಕೆಟ್​ಗೆ ಹೋಗುವ ಜನರು ಹೈರಾಣಾಗಿದ್ದಾರೆ.

5 / 7
ಹಾವೇರಿ ಜಿಲ್ಲೆಯಲ್ಲೂ ವರ್ಷಧಾರೆಯ ಅಬ್ಬರ ಜೋರಾಗಿದೆ. ಅಗಡಿ, ಯತ್ನಿನಹಳ್ಳಿ, ಬಸವನಕಟ್ಟಿ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆ ಆಗಿದೆ. ಮಳೆ ಹೊಡೆತಕ್ಕೆ ಮನೆಗಳಂತೂ ಚರಂಡಿ ನೀರಿನಿಂದ ಆವರಿಸಿವೆ. ಮನೆಯಲ್ಲಿನ ನೀರು ಹೊರ ಹಾಕೋಕೆ ನಿವಾಸಿಗಳು ಹರಸಾಹಸಪಟ್ಟಿದ್ದಾರೆ.

ಹಾವೇರಿ ಜಿಲ್ಲೆಯಲ್ಲೂ ವರ್ಷಧಾರೆಯ ಅಬ್ಬರ ಜೋರಾಗಿದೆ. ಅಗಡಿ, ಯತ್ನಿನಹಳ್ಳಿ, ಬಸವನಕಟ್ಟಿ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆ ಆಗಿದೆ. ಮಳೆ ಹೊಡೆತಕ್ಕೆ ಮನೆಗಳಂತೂ ಚರಂಡಿ ನೀರಿನಿಂದ ಆವರಿಸಿವೆ. ಮನೆಯಲ್ಲಿನ ನೀರು ಹೊರ ಹಾಕೋಕೆ ನಿವಾಸಿಗಳು ಹರಸಾಹಸಪಟ್ಟಿದ್ದಾರೆ.

6 / 7
ಬಿಸಿಲಿಗೆ ಬೆಂದು ಹೋಗಿದ್ದ ಬಾಗಲಕೋಟೆ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಅರ್ಧಗಂಟೆಗೂ ಹೆಚ್ಚು ಕಾಲ ಸರಿದ ಮಳೆಗೆ ನವನಗರದ ರಸ್ತೆಗಳು ಜಲಾವೃತವಾಗಿವೆ. ಜಿಲ್ಲಾ ಕ್ರೀಡಾಂಗಣದ ಬಳಿಯ ರಸ್ತೆಗಳು ಕೂಡ ಕಂಪ್ಲೀಟ್​ ಮುಳುಗಿವೆ. 

ಬಿಸಿಲಿಗೆ ಬೆಂದು ಹೋಗಿದ್ದ ಬಾಗಲಕೋಟೆ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಅರ್ಧಗಂಟೆಗೂ ಹೆಚ್ಚು ಕಾಲ ಸರಿದ ಮಳೆಗೆ ನವನಗರದ ರಸ್ತೆಗಳು ಜಲಾವೃತವಾಗಿವೆ. ಜಿಲ್ಲಾ ಕ್ರೀಡಾಂಗಣದ ಬಳಿಯ ರಸ್ತೆಗಳು ಕೂಡ ಕಂಪ್ಲೀಟ್​ ಮುಳುಗಿವೆ. 

7 / 7

Published On - 8:05 am, Sun, 7 June 26

Follow Us
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ