AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾಡಿ ಘಾಟ್​​ನಲ್ಲಿ ಮಣ್ಣು ತೆರವು: ಚಿಕ್ಕಮಗಳೂರಿನಲ್ಲಿ ಸಾಲು ಸಾಲು ಗುಡ್ಡ ಕುಸಿತ, ಹೆಚ್ಚಾದ ಆತಂಕ

ಬೆಂಗಳೂರು, ಜುಲೈ 31: ಅತ್ತ ವಯನಾಡಿನಲ್ಲಿ ಗುಡ್ಡ ಕುಸಿತದಲ್ಲಿ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಇತ್ತ ಕರ್ನಾಟಕದಲ್ಲೂ ಗುಡ್ಡ ಪ್ರದೇಶಗಳಲ್ಲಿ ಆತಂಕ ಶುರುವಾಗಿದೆ. ಹಾಸನ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಅನೇಕ ಕಡೆ ಗುಡ್ಡ ಕುಸಿತವಾಗಿತ್ತು. ಸಕಲೇಶಪುರ ತಾಲೂಕು ದೊಡ್ಡತಪ್ಲೆ ಬಳಿ ನಿನ್ನೆ ಮಧ್ಯಾಹ್ನ ಗುಡ್ಡ ಕುಸಿತವಾಗಿ ವಾಹನಗಳು ಸಿಲುಕಿಕೊಂಡಿದ್ವು. ನಿರಂತರ ಕಾರ್ಯಾಚರಣೆ ಮಾಡಿ ಮಣ್ಣು ತೆರವು ಮಾಡಲಾಗಿದೆ. 1 ಗ್ಯಾಸ್ ಟ್ಯಾಂಕರ್, ಒಂದು ಟಿಪ್ಪರ್, 2 ಕಾರು ತೆರವು ಮಾಡಿದ್ದಾರೆ.

ಮಂಜುನಾಥ ಕೆಬಿ
| Edited By: |

Updated on: Jul 31, 2024 | 2:27 PM

Share
ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ರಸ್ತೆಗೆ ಬಿದ್ದಿದ್ದ ಭಾರಿ ಪ್ರಮಾಣದ ಮಣ್ಣು ತೆರವು ಮಾಡಿದ್ದಾರೆ. ಇದರ ಬೆನ್ನಲ್ಲೇ ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಇಲ್ಲಿನ ಸಮಸ್ಯೆ ಬಗ್ಗೆಹೆದ್ದಾರಿ ಪ್ರಾಧಿಕಾರಕ್ಕೆ ಸಿಎಂರಿಂದ ಪತ್ರ ಬರೆದು ಸಮಸ್ಯೆ ಬಗೆಹರಿಸಲು ತಾಕೀತು ಮಾಡುತ್ತೇವೆ ಅಂತ ಹೇಳಿದ್ದಾರೆ.

ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ರಸ್ತೆಗೆ ಬಿದ್ದಿದ್ದ ಭಾರಿ ಪ್ರಮಾಣದ ಮಣ್ಣು ತೆರವು ಮಾಡಿದ್ದಾರೆ. ಇದರ ಬೆನ್ನಲ್ಲೇ ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಇಲ್ಲಿನ ಸಮಸ್ಯೆ ಬಗ್ಗೆಹೆದ್ದಾರಿ ಪ್ರಾಧಿಕಾರಕ್ಕೆ ಸಿಎಂರಿಂದ ಪತ್ರ ಬರೆದು ಸಮಸ್ಯೆ ಬಗೆಹರಿಸಲು ತಾಕೀತು ಮಾಡುತ್ತೇವೆ ಅಂತ ಹೇಳಿದ್ದಾರೆ.

1 / 5
ಇತ್ತ ಚಿಕ್ಕಮಗಳೂರಿನಲ್ಲೂ ಮಳೆ ಹಲವು ಅವಾಂತರ ಸೃಷ್ಟಿಸಿದೆ. ಶೃಂಗೇರಿ ತಾಲೂಕಿನ ಆನೆಗುಂದಿ ಬಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಸಾಲು ಗುಡ್ಡ ಕುಸಿತಗಳಾಗಿವೆ. ಆನೆಗುಂದಿ ಬಳಿ 4 ಮನೆಗಳ ಮೇಲೂ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಶಿವಮೊಗ್ಗ-ಶೃಂಗೇರಿ-ಮಂಗಳೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಅಪಾಯಕಾರಿ ರಸ್ತೆಯಲ್ಲೇ ವಾಹನಗಳು ಸಂಚಾರ ಮಾಡ್ತಿವೆ.

ಇತ್ತ ಚಿಕ್ಕಮಗಳೂರಿನಲ್ಲೂ ಮಳೆ ಹಲವು ಅವಾಂತರ ಸೃಷ್ಟಿಸಿದೆ. ಶೃಂಗೇರಿ ತಾಲೂಕಿನ ಆನೆಗುಂದಿ ಬಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಸಾಲು ಗುಡ್ಡ ಕುಸಿತಗಳಾಗಿವೆ. ಆನೆಗುಂದಿ ಬಳಿ 4 ಮನೆಗಳ ಮೇಲೂ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಶಿವಮೊಗ್ಗ-ಶೃಂಗೇರಿ-ಮಂಗಳೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಅಪಾಯಕಾರಿ ರಸ್ತೆಯಲ್ಲೇ ವಾಹನಗಳು ಸಂಚಾರ ಮಾಡ್ತಿವೆ.

2 / 5
ಪ್ರವಾಸಿ ತಾಣಗಳಲ್ಲಿ ಗುಡ್ಡ, ರಸ್ತೆಗಳ ಕುಸಿತ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾಡಳಿತ ಕೂಡ ಆಗಸ್ಟ್ 15ರವರೆಗೆ ಪ್ರವಾಸಕ್ಕೆ ಬಾರದಂತೆ ಪ್ರವಾಸಿಗರಿಗೆ ಮನವಿ ಮಾಡಿದೆ. ಜಿಲ್ಲೆಯಾದ್ಯಂತ ಚಾರಣ ಬ್ಯಾನ್ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಪ್ರವಾಸಿ ತಾಣಗಳಲ್ಲಿ ಗುಡ್ಡ, ರಸ್ತೆಗಳ ಕುಸಿತ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾಡಳಿತ ಕೂಡ ಆಗಸ್ಟ್ 15ರವರೆಗೆ ಪ್ರವಾಸಕ್ಕೆ ಬಾರದಂತೆ ಪ್ರವಾಸಿಗರಿಗೆ ಮನವಿ ಮಾಡಿದೆ. ಜಿಲ್ಲೆಯಾದ್ಯಂತ ಚಾರಣ ಬ್ಯಾನ್ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

3 / 5
ಮಲೆನಾಡು ಶಿವಮೊಗ್ಗದಲ್ಲಿ ಮುಂದುವರಿದ ಮಳೆಯ ಅಬ್ಬರ ಮುಂದುವರಿದಿದ್ದು, ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಕುಂದಗಲ್ಲುವಿನಲ್ಲಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ. ಸಂಪೂರ್ಣ ಭೂಕುಸಿತವಾದರೆ ಸಂಚಾರ ಕಡಿತಗೊಳ್ಳುವ ಆತಂಕ ಎದುರಾಗಿದೆ.

ಮಲೆನಾಡು ಶಿವಮೊಗ್ಗದಲ್ಲಿ ಮುಂದುವರಿದ ಮಳೆಯ ಅಬ್ಬರ ಮುಂದುವರಿದಿದ್ದು, ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಕುಂದಗಲ್ಲುವಿನಲ್ಲಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ. ಸಂಪೂರ್ಣ ಭೂಕುಸಿತವಾದರೆ ಸಂಚಾರ ಕಡಿತಗೊಳ್ಳುವ ಆತಂಕ ಎದುರಾಗಿದೆ.

4 / 5
ಶಿರೂರು ಗುಡ್ಡ ಕುಸಿತದ ಬಳಿಕ ಸದ್ಯ ಕರ್ನಾಟಕಕ್ಕೂ ಗುಡ್ಡದ ಭೂತದ ಭಯ ಕಾಡುತ್ತಿದೆ. ವಯನಾಡಿನ ದುರಂತದ ಬಳಿಕ ಆತಂಕ ಮತ್ತಷ್ಟು ಹೆಚ್ಚಾಗಿದೆ. ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿ ರಸ್ತೆ, ಹಾರ್ಲೆ ಎಸ್ಟೇಟದ ರಸ್ತೆ ಭೂಕುಸಿತ ನಂತರ ಆತಂಕ ಹೆಚ್ಚಾಗಿದೆ. ಈ ಮಧ್ಯೆ, ರಾಜ್ಯದಲ್ಲಿ ರೆಡ್ ಅಲರ್ಟ್​ ಘೋಷಣೆಯಾಗಿದೆ.

ಶಿರೂರು ಗುಡ್ಡ ಕುಸಿತದ ಬಳಿಕ ಸದ್ಯ ಕರ್ನಾಟಕಕ್ಕೂ ಗುಡ್ಡದ ಭೂತದ ಭಯ ಕಾಡುತ್ತಿದೆ. ವಯನಾಡಿನ ದುರಂತದ ಬಳಿಕ ಆತಂಕ ಮತ್ತಷ್ಟು ಹೆಚ್ಚಾಗಿದೆ. ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿ ರಸ್ತೆ, ಹಾರ್ಲೆ ಎಸ್ಟೇಟದ ರಸ್ತೆ ಭೂಕುಸಿತ ನಂತರ ಆತಂಕ ಹೆಚ್ಚಾಗಿದೆ. ಈ ಮಧ್ಯೆ, ರಾಜ್ಯದಲ್ಲಿ ರೆಡ್ ಅಲರ್ಟ್​ ಘೋಷಣೆಯಾಗಿದೆ.

5 / 5
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ