AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾಡಿ ಘಾಟ್​​ನಲ್ಲಿ ಮಣ್ಣು ತೆರವು: ಚಿಕ್ಕಮಗಳೂರಿನಲ್ಲಿ ಸಾಲು ಸಾಲು ಗುಡ್ಡ ಕುಸಿತ, ಹೆಚ್ಚಾದ ಆತಂಕ

ಬೆಂಗಳೂರು, ಜುಲೈ 31: ಅತ್ತ ವಯನಾಡಿನಲ್ಲಿ ಗುಡ್ಡ ಕುಸಿತದಲ್ಲಿ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಇತ್ತ ಕರ್ನಾಟಕದಲ್ಲೂ ಗುಡ್ಡ ಪ್ರದೇಶಗಳಲ್ಲಿ ಆತಂಕ ಶುರುವಾಗಿದೆ. ಹಾಸನ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಅನೇಕ ಕಡೆ ಗುಡ್ಡ ಕುಸಿತವಾಗಿತ್ತು. ಸಕಲೇಶಪುರ ತಾಲೂಕು ದೊಡ್ಡತಪ್ಲೆ ಬಳಿ ನಿನ್ನೆ ಮಧ್ಯಾಹ್ನ ಗುಡ್ಡ ಕುಸಿತವಾಗಿ ವಾಹನಗಳು ಸಿಲುಕಿಕೊಂಡಿದ್ವು. ನಿರಂತರ ಕಾರ್ಯಾಚರಣೆ ಮಾಡಿ ಮಣ್ಣು ತೆರವು ಮಾಡಲಾಗಿದೆ. 1 ಗ್ಯಾಸ್ ಟ್ಯಾಂಕರ್, ಒಂದು ಟಿಪ್ಪರ್, 2 ಕಾರು ತೆರವು ಮಾಡಿದ್ದಾರೆ.

ಮಂಜುನಾಥ ಕೆಬಿ
| Updated By: Ganapathi Sharma

Updated on: Jul 31, 2024 | 2:27 PM

ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ರಸ್ತೆಗೆ ಬಿದ್ದಿದ್ದ ಭಾರಿ ಪ್ರಮಾಣದ ಮಣ್ಣು ತೆರವು ಮಾಡಿದ್ದಾರೆ. ಇದರ ಬೆನ್ನಲ್ಲೇ ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಇಲ್ಲಿನ ಸಮಸ್ಯೆ ಬಗ್ಗೆಹೆದ್ದಾರಿ ಪ್ರಾಧಿಕಾರಕ್ಕೆ ಸಿಎಂರಿಂದ ಪತ್ರ ಬರೆದು ಸಮಸ್ಯೆ ಬಗೆಹರಿಸಲು ತಾಕೀತು ಮಾಡುತ್ತೇವೆ ಅಂತ ಹೇಳಿದ್ದಾರೆ.

ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ರಸ್ತೆಗೆ ಬಿದ್ದಿದ್ದ ಭಾರಿ ಪ್ರಮಾಣದ ಮಣ್ಣು ತೆರವು ಮಾಡಿದ್ದಾರೆ. ಇದರ ಬೆನ್ನಲ್ಲೇ ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಇಲ್ಲಿನ ಸಮಸ್ಯೆ ಬಗ್ಗೆಹೆದ್ದಾರಿ ಪ್ರಾಧಿಕಾರಕ್ಕೆ ಸಿಎಂರಿಂದ ಪತ್ರ ಬರೆದು ಸಮಸ್ಯೆ ಬಗೆಹರಿಸಲು ತಾಕೀತು ಮಾಡುತ್ತೇವೆ ಅಂತ ಹೇಳಿದ್ದಾರೆ.

1 / 5
ಇತ್ತ ಚಿಕ್ಕಮಗಳೂರಿನಲ್ಲೂ ಮಳೆ ಹಲವು ಅವಾಂತರ ಸೃಷ್ಟಿಸಿದೆ. ಶೃಂಗೇರಿ ತಾಲೂಕಿನ ಆನೆಗುಂದಿ ಬಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಸಾಲು ಗುಡ್ಡ ಕುಸಿತಗಳಾಗಿವೆ. ಆನೆಗುಂದಿ ಬಳಿ 4 ಮನೆಗಳ ಮೇಲೂ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಶಿವಮೊಗ್ಗ-ಶೃಂಗೇರಿ-ಮಂಗಳೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಅಪಾಯಕಾರಿ ರಸ್ತೆಯಲ್ಲೇ ವಾಹನಗಳು ಸಂಚಾರ ಮಾಡ್ತಿವೆ.

ಇತ್ತ ಚಿಕ್ಕಮಗಳೂರಿನಲ್ಲೂ ಮಳೆ ಹಲವು ಅವಾಂತರ ಸೃಷ್ಟಿಸಿದೆ. ಶೃಂಗೇರಿ ತಾಲೂಕಿನ ಆನೆಗುಂದಿ ಬಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಸಾಲು ಗುಡ್ಡ ಕುಸಿತಗಳಾಗಿವೆ. ಆನೆಗುಂದಿ ಬಳಿ 4 ಮನೆಗಳ ಮೇಲೂ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಶಿವಮೊಗ್ಗ-ಶೃಂಗೇರಿ-ಮಂಗಳೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಅಪಾಯಕಾರಿ ರಸ್ತೆಯಲ್ಲೇ ವಾಹನಗಳು ಸಂಚಾರ ಮಾಡ್ತಿವೆ.

2 / 5
ಪ್ರವಾಸಿ ತಾಣಗಳಲ್ಲಿ ಗುಡ್ಡ, ರಸ್ತೆಗಳ ಕುಸಿತ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾಡಳಿತ ಕೂಡ ಆಗಸ್ಟ್ 15ರವರೆಗೆ ಪ್ರವಾಸಕ್ಕೆ ಬಾರದಂತೆ ಪ್ರವಾಸಿಗರಿಗೆ ಮನವಿ ಮಾಡಿದೆ. ಜಿಲ್ಲೆಯಾದ್ಯಂತ ಚಾರಣ ಬ್ಯಾನ್ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಪ್ರವಾಸಿ ತಾಣಗಳಲ್ಲಿ ಗುಡ್ಡ, ರಸ್ತೆಗಳ ಕುಸಿತ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾಡಳಿತ ಕೂಡ ಆಗಸ್ಟ್ 15ರವರೆಗೆ ಪ್ರವಾಸಕ್ಕೆ ಬಾರದಂತೆ ಪ್ರವಾಸಿಗರಿಗೆ ಮನವಿ ಮಾಡಿದೆ. ಜಿಲ್ಲೆಯಾದ್ಯಂತ ಚಾರಣ ಬ್ಯಾನ್ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

3 / 5
ಮಲೆನಾಡು ಶಿವಮೊಗ್ಗದಲ್ಲಿ ಮುಂದುವರಿದ ಮಳೆಯ ಅಬ್ಬರ ಮುಂದುವರಿದಿದ್ದು, ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಕುಂದಗಲ್ಲುವಿನಲ್ಲಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ. ಸಂಪೂರ್ಣ ಭೂಕುಸಿತವಾದರೆ ಸಂಚಾರ ಕಡಿತಗೊಳ್ಳುವ ಆತಂಕ ಎದುರಾಗಿದೆ.

ಮಲೆನಾಡು ಶಿವಮೊಗ್ಗದಲ್ಲಿ ಮುಂದುವರಿದ ಮಳೆಯ ಅಬ್ಬರ ಮುಂದುವರಿದಿದ್ದು, ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಕುಂದಗಲ್ಲುವಿನಲ್ಲಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ. ಸಂಪೂರ್ಣ ಭೂಕುಸಿತವಾದರೆ ಸಂಚಾರ ಕಡಿತಗೊಳ್ಳುವ ಆತಂಕ ಎದುರಾಗಿದೆ.

4 / 5
ಶಿರೂರು ಗುಡ್ಡ ಕುಸಿತದ ಬಳಿಕ ಸದ್ಯ ಕರ್ನಾಟಕಕ್ಕೂ ಗುಡ್ಡದ ಭೂತದ ಭಯ ಕಾಡುತ್ತಿದೆ. ವಯನಾಡಿನ ದುರಂತದ ಬಳಿಕ ಆತಂಕ ಮತ್ತಷ್ಟು ಹೆಚ್ಚಾಗಿದೆ. ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿ ರಸ್ತೆ, ಹಾರ್ಲೆ ಎಸ್ಟೇಟದ ರಸ್ತೆ ಭೂಕುಸಿತ ನಂತರ ಆತಂಕ ಹೆಚ್ಚಾಗಿದೆ. ಈ ಮಧ್ಯೆ, ರಾಜ್ಯದಲ್ಲಿ ರೆಡ್ ಅಲರ್ಟ್​ ಘೋಷಣೆಯಾಗಿದೆ.

ಶಿರೂರು ಗುಡ್ಡ ಕುಸಿತದ ಬಳಿಕ ಸದ್ಯ ಕರ್ನಾಟಕಕ್ಕೂ ಗುಡ್ಡದ ಭೂತದ ಭಯ ಕಾಡುತ್ತಿದೆ. ವಯನಾಡಿನ ದುರಂತದ ಬಳಿಕ ಆತಂಕ ಮತ್ತಷ್ಟು ಹೆಚ್ಚಾಗಿದೆ. ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿ ರಸ್ತೆ, ಹಾರ್ಲೆ ಎಸ್ಟೇಟದ ರಸ್ತೆ ಭೂಕುಸಿತ ನಂತರ ಆತಂಕ ಹೆಚ್ಚಾಗಿದೆ. ಈ ಮಧ್ಯೆ, ರಾಜ್ಯದಲ್ಲಿ ರೆಡ್ ಅಲರ್ಟ್​ ಘೋಷಣೆಯಾಗಿದೆ.

5 / 5
Follow us
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್