ಶಿರಾಡಿ ಘಾಟ್​​ನಲ್ಲಿ ಮಣ್ಣು ತೆರವು: ಚಿಕ್ಕಮಗಳೂರಿನಲ್ಲಿ ಸಾಲು ಸಾಲು ಗುಡ್ಡ ಕುಸಿತ, ಹೆಚ್ಚಾದ ಆತಂಕ

ಬೆಂಗಳೂರು, ಜುಲೈ 31: ಅತ್ತ ವಯನಾಡಿನಲ್ಲಿ ಗುಡ್ಡ ಕುಸಿತದಲ್ಲಿ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಇತ್ತ ಕರ್ನಾಟಕದಲ್ಲೂ ಗುಡ್ಡ ಪ್ರದೇಶಗಳಲ್ಲಿ ಆತಂಕ ಶುರುವಾಗಿದೆ. ಹಾಸನ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಅನೇಕ ಕಡೆ ಗುಡ್ಡ ಕುಸಿತವಾಗಿತ್ತು. ಸಕಲೇಶಪುರ ತಾಲೂಕು ದೊಡ್ಡತಪ್ಲೆ ಬಳಿ ನಿನ್ನೆ ಮಧ್ಯಾಹ್ನ ಗುಡ್ಡ ಕುಸಿತವಾಗಿ ವಾಹನಗಳು ಸಿಲುಕಿಕೊಂಡಿದ್ವು. ನಿರಂತರ ಕಾರ್ಯಾಚರಣೆ ಮಾಡಿ ಮಣ್ಣು ತೆರವು ಮಾಡಲಾಗಿದೆ. 1 ಗ್ಯಾಸ್ ಟ್ಯಾಂಕರ್, ಒಂದು ಟಿಪ್ಪರ್, 2 ಕಾರು ತೆರವು ಮಾಡಿದ್ದಾರೆ.

| Updated By: ಗಣಪತಿ ಶರ್ಮ

Updated on: Jul 31, 2024 | 2:27 PM

ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ರಸ್ತೆಗೆ ಬಿದ್ದಿದ್ದ ಭಾರಿ ಪ್ರಮಾಣದ ಮಣ್ಣು ತೆರವು ಮಾಡಿದ್ದಾರೆ. ಇದರ ಬೆನ್ನಲ್ಲೇ ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಇಲ್ಲಿನ ಸಮಸ್ಯೆ ಬಗ್ಗೆಹೆದ್ದಾರಿ ಪ್ರಾಧಿಕಾರಕ್ಕೆ ಸಿಎಂರಿಂದ ಪತ್ರ ಬರೆದು ಸಮಸ್ಯೆ ಬಗೆಹರಿಸಲು ತಾಕೀತು ಮಾಡುತ್ತೇವೆ ಅಂತ ಹೇಳಿದ್ದಾರೆ.

ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ರಸ್ತೆಗೆ ಬಿದ್ದಿದ್ದ ಭಾರಿ ಪ್ರಮಾಣದ ಮಣ್ಣು ತೆರವು ಮಾಡಿದ್ದಾರೆ. ಇದರ ಬೆನ್ನಲ್ಲೇ ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಇಲ್ಲಿನ ಸಮಸ್ಯೆ ಬಗ್ಗೆಹೆದ್ದಾರಿ ಪ್ರಾಧಿಕಾರಕ್ಕೆ ಸಿಎಂರಿಂದ ಪತ್ರ ಬರೆದು ಸಮಸ್ಯೆ ಬಗೆಹರಿಸಲು ತಾಕೀತು ಮಾಡುತ್ತೇವೆ ಅಂತ ಹೇಳಿದ್ದಾರೆ.

1 / 5
ಇತ್ತ ಚಿಕ್ಕಮಗಳೂರಿನಲ್ಲೂ ಮಳೆ ಹಲವು ಅವಾಂತರ ಸೃಷ್ಟಿಸಿದೆ. ಶೃಂಗೇರಿ ತಾಲೂಕಿನ ಆನೆಗುಂದಿ ಬಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಸಾಲು ಗುಡ್ಡ ಕುಸಿತಗಳಾಗಿವೆ. ಆನೆಗುಂದಿ ಬಳಿ 4 ಮನೆಗಳ ಮೇಲೂ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಶಿವಮೊಗ್ಗ-ಶೃಂಗೇರಿ-ಮಂಗಳೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಅಪಾಯಕಾರಿ ರಸ್ತೆಯಲ್ಲೇ ವಾಹನಗಳು ಸಂಚಾರ ಮಾಡ್ತಿವೆ.

ಇತ್ತ ಚಿಕ್ಕಮಗಳೂರಿನಲ್ಲೂ ಮಳೆ ಹಲವು ಅವಾಂತರ ಸೃಷ್ಟಿಸಿದೆ. ಶೃಂಗೇರಿ ತಾಲೂಕಿನ ಆನೆಗುಂದಿ ಬಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಸಾಲು ಗುಡ್ಡ ಕುಸಿತಗಳಾಗಿವೆ. ಆನೆಗುಂದಿ ಬಳಿ 4 ಮನೆಗಳ ಮೇಲೂ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಶಿವಮೊಗ್ಗ-ಶೃಂಗೇರಿ-ಮಂಗಳೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಅಪಾಯಕಾರಿ ರಸ್ತೆಯಲ್ಲೇ ವಾಹನಗಳು ಸಂಚಾರ ಮಾಡ್ತಿವೆ.

2 / 5
ಪ್ರವಾಸಿ ತಾಣಗಳಲ್ಲಿ ಗುಡ್ಡ, ರಸ್ತೆಗಳ ಕುಸಿತ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾಡಳಿತ ಕೂಡ ಆಗಸ್ಟ್ 15ರವರೆಗೆ ಪ್ರವಾಸಕ್ಕೆ ಬಾರದಂತೆ ಪ್ರವಾಸಿಗರಿಗೆ ಮನವಿ ಮಾಡಿದೆ. ಜಿಲ್ಲೆಯಾದ್ಯಂತ ಚಾರಣ ಬ್ಯಾನ್ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಪ್ರವಾಸಿ ತಾಣಗಳಲ್ಲಿ ಗುಡ್ಡ, ರಸ್ತೆಗಳ ಕುಸಿತ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾಡಳಿತ ಕೂಡ ಆಗಸ್ಟ್ 15ರವರೆಗೆ ಪ್ರವಾಸಕ್ಕೆ ಬಾರದಂತೆ ಪ್ರವಾಸಿಗರಿಗೆ ಮನವಿ ಮಾಡಿದೆ. ಜಿಲ್ಲೆಯಾದ್ಯಂತ ಚಾರಣ ಬ್ಯಾನ್ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

3 / 5
ಮಲೆನಾಡು ಶಿವಮೊಗ್ಗದಲ್ಲಿ ಮುಂದುವರಿದ ಮಳೆಯ ಅಬ್ಬರ ಮುಂದುವರಿದಿದ್ದು, ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಕುಂದಗಲ್ಲುವಿನಲ್ಲಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ. ಸಂಪೂರ್ಣ ಭೂಕುಸಿತವಾದರೆ ಸಂಚಾರ ಕಡಿತಗೊಳ್ಳುವ ಆತಂಕ ಎದುರಾಗಿದೆ.

ಮಲೆನಾಡು ಶಿವಮೊಗ್ಗದಲ್ಲಿ ಮುಂದುವರಿದ ಮಳೆಯ ಅಬ್ಬರ ಮುಂದುವರಿದಿದ್ದು, ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಕುಂದಗಲ್ಲುವಿನಲ್ಲಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ. ಸಂಪೂರ್ಣ ಭೂಕುಸಿತವಾದರೆ ಸಂಚಾರ ಕಡಿತಗೊಳ್ಳುವ ಆತಂಕ ಎದುರಾಗಿದೆ.

4 / 5
ಶಿರೂರು ಗುಡ್ಡ ಕುಸಿತದ ಬಳಿಕ ಸದ್ಯ ಕರ್ನಾಟಕಕ್ಕೂ ಗುಡ್ಡದ ಭೂತದ ಭಯ ಕಾಡುತ್ತಿದೆ. ವಯನಾಡಿನ ದುರಂತದ ಬಳಿಕ ಆತಂಕ ಮತ್ತಷ್ಟು ಹೆಚ್ಚಾಗಿದೆ. ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿ ರಸ್ತೆ, ಹಾರ್ಲೆ ಎಸ್ಟೇಟದ ರಸ್ತೆ ಭೂಕುಸಿತ ನಂತರ ಆತಂಕ ಹೆಚ್ಚಾಗಿದೆ. ಈ ಮಧ್ಯೆ, ರಾಜ್ಯದಲ್ಲಿ ರೆಡ್ ಅಲರ್ಟ್​ ಘೋಷಣೆಯಾಗಿದೆ.

ಶಿರೂರು ಗುಡ್ಡ ಕುಸಿತದ ಬಳಿಕ ಸದ್ಯ ಕರ್ನಾಟಕಕ್ಕೂ ಗುಡ್ಡದ ಭೂತದ ಭಯ ಕಾಡುತ್ತಿದೆ. ವಯನಾಡಿನ ದುರಂತದ ಬಳಿಕ ಆತಂಕ ಮತ್ತಷ್ಟು ಹೆಚ್ಚಾಗಿದೆ. ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿ ರಸ್ತೆ, ಹಾರ್ಲೆ ಎಸ್ಟೇಟದ ರಸ್ತೆ ಭೂಕುಸಿತ ನಂತರ ಆತಂಕ ಹೆಚ್ಚಾಗಿದೆ. ಈ ಮಧ್ಯೆ, ರಾಜ್ಯದಲ್ಲಿ ರೆಡ್ ಅಲರ್ಟ್​ ಘೋಷಣೆಯಾಗಿದೆ.

5 / 5
Follow us
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ