AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Republic Day 2023: ಕರ್ತವ್ಯಪಥದಲ್ಲಿ ಗಣರಾಜೋತ್ಸವ ಪರೇಡ್​ -ಕರ್ನಾಟಕದ ಸ್ತಬ್ಧ ಚಿತ್ರ ಪ್ರಮುಖ ಆಕರ್ಷಣೆ

ದೆಹಲಿಯ ಕರ್ತವ್ಯಪಥ್ ನಲ್ಲಿ ನಡೆದ ಗಣರಾಜೋತ್ಸವ ಪರೇಡ್​ನಲ್ಲಿ ನಾರಿ ಶಕ್ತಿ ಪರಿಕಲ್ಪನೆಯ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನಗೊಂಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ ಮೊದಲ ಬಾರಿಗೆ ಕರ್ತವ್ಯಪಥದಲ್ಲಿ (Kartavya Path) 74ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ್ದಾರೆ.

TV9 Web
| Updated By: ಸಾಧು ಶ್ರೀನಾಥ್​|

Updated on:Jan 26, 2023 | 4:11 PM

Share
ದೆಹಲಿಯ ಕರ್ತವ್ಯಪಥ್ ನಲ್ಲಿ ನಡೆದ ಗಣರಾಜೋತ್ಸವ ಪರೇಡ್​ನಲ್ಲಿ ನಾರಿ ಶಕ್ತಿ ಪರಿಕಲ್ಪನೆಯ ಕರ್ನಾಟಕದ ಸ್ತಬ್ಧ ಚಿತ್ರ 
ಪ್ರದರ್ಶನಗೊಂಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ ಮೊದಲ ಬಾರಿಗೆ ಕರ್ತವ್ಯಪಥದಲ್ಲಿ 74ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ್ದಾರೆ.

ದೆಹಲಿಯ ಕರ್ತವ್ಯಪಥ್ ನಲ್ಲಿ ನಡೆದ ಗಣರಾಜೋತ್ಸವ ಪರೇಡ್​ನಲ್ಲಿ ನಾರಿ ಶಕ್ತಿ ಪರಿಕಲ್ಪನೆಯ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನಗೊಂಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ ಮೊದಲ ಬಾರಿಗೆ ಕರ್ತವ್ಯಪಥದಲ್ಲಿ 74ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ್ದಾರೆ.

1 / 6
ಭಾರತೀಯ ಸೇನಾ ಪಡೆ ರಾಷ್ಟ್ರಪತಿಗಳಿಗೆ ಗೌರವ ವಂದನೆ ಸಲ್ಲಿಸಿ ಪರೇಡ್ ನಡೆಸಿದ ಕ್ಷಣ. ಈ ಬಾರಿ ಕರ್ನಾಟಕ ನಾರಿ ಶಕ್ತಿ ಪರಿಕಲ್ಪನೆಯಲ್ಲಿ ಟ್ಯಾಬ್ಲೊ ಪ್ರದರ್ಶನ ಮಾಡಲಾಗಿದೆ. ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ, ಹಾಲಕ್ಕಿ ತುಳಸಿಗೌಡ ಮತ್ತು ಸೂಲಗಿತ್ತಿ ನರಸಮ್ಮರ ಸಾಧನೆಯನ್ನು ಇಡೀ ದೇಶಕ್ಕೆ ಪರಿಚಯಿಸುವ ಕೆಲಸ ಮಾಡಲಾಗುತ್ತಿದೆ.

ಭಾರತೀಯ ಸೇನಾ ಪಡೆ ರಾಷ್ಟ್ರಪತಿಗಳಿಗೆ ಗೌರವ ವಂದನೆ ಸಲ್ಲಿಸಿ ಪರೇಡ್ ನಡೆಸಿದ ಕ್ಷಣ. ಈ ಬಾರಿ ಕರ್ನಾಟಕ ನಾರಿ ಶಕ್ತಿ ಪರಿಕಲ್ಪನೆಯಲ್ಲಿ ಟ್ಯಾಬ್ಲೊ ಪ್ರದರ್ಶನ ಮಾಡಲಾಗಿದೆ. ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ, ಹಾಲಕ್ಕಿ ತುಳಸಿಗೌಡ ಮತ್ತು ಸೂಲಗಿತ್ತಿ ನರಸಮ್ಮರ ಸಾಧನೆಯನ್ನು ಇಡೀ ದೇಶಕ್ಕೆ ಪರಿಚಯಿಸುವ ಕೆಲಸ ಮಾಡಲಾಗುತ್ತಿದೆ.

2 / 6
ಟ್ಯಾಬ್ಲೊ ಮುಂಭಾಗದಲ್ಲಿ ಎರಡು ಸಾವಿರಕ್ಕೂ ಅಧಿಕ ಹೆರಿಗೆ ಮಾಡಿಸಿರುವ ತುಮಕೂರಿನ‌ ಪಾವಗಡದ ಸೂಲಗಿತ್ತಿ ನರಸಮ್ಮ ಅವರ ಚಿತ್ರವನ್ನು ಮಧ್ಯಭಾಗದಲ್ಲಿ 30 ಸಾವಿರಕ್ಕೂ ಅಧಿಕ ಔಷಧಿಯ ಸಸಿಗಳನ್ನು ಪೊಷಿಸಿದ ಹಾಲಕ್ಕಿ ತುಳಸಿಗೌಡ ಹಾಗೂ ಕೊನೆಗೆ ಸಾವಿರಾರು ಮರಗಳನ್ನು ಬೆಳೆಸಿದ ಸಾಲುಮರದ ತಿಮ್ಮಕ್ಕ ಅವರ ಚಿತ್ರವನ್ನು ಬಳಸಿದ್ದು ಅವರ ಸಾಧನೆಗಳನ್ನು ತಿಳಿಸುವ ಪ್ರಯತ್ನ ಮಾಡಲಾಗಿದೆ.

ಟ್ಯಾಬ್ಲೊ ಮುಂಭಾಗದಲ್ಲಿ ಎರಡು ಸಾವಿರಕ್ಕೂ ಅಧಿಕ ಹೆರಿಗೆ ಮಾಡಿಸಿರುವ ತುಮಕೂರಿನ‌ ಪಾವಗಡದ ಸೂಲಗಿತ್ತಿ ನರಸಮ್ಮ ಅವರ ಚಿತ್ರವನ್ನು ಮಧ್ಯಭಾಗದಲ್ಲಿ 30 ಸಾವಿರಕ್ಕೂ ಅಧಿಕ ಔಷಧಿಯ ಸಸಿಗಳನ್ನು ಪೊಷಿಸಿದ ಹಾಲಕ್ಕಿ ತುಳಸಿಗೌಡ ಹಾಗೂ ಕೊನೆಗೆ ಸಾವಿರಾರು ಮರಗಳನ್ನು ಬೆಳೆಸಿದ ಸಾಲುಮರದ ತಿಮ್ಮಕ್ಕ ಅವರ ಚಿತ್ರವನ್ನು ಬಳಸಿದ್ದು ಅವರ ಸಾಧನೆಗಳನ್ನು ತಿಳಿಸುವ ಪ್ರಯತ್ನ ಮಾಡಲಾಗಿದೆ.

3 / 6
ಇನ್ನು ಕರ್ನಾಟಕದ ಟ್ಯಾಬ್ಲೊ ಜೊತೆಗೆ ರಾಜ್ಯದ ಸಂಸ್ಕೃತಿ ಪ್ರದರ್ಶಿಸುವ ನೃತ್ಯ ಕಲಾವಿದರಿಗೂ ಅವಕಾಶ ನೀಡಲಾಗಿದೆ. ಟ್ಯಾಬ್ಲೊ ಜೊತೆಗೆ ಉತ್ತರ ಕನ್ನಡ ಜಿಲ್ಲೆಯ ಹಾಲಕ್ಕಿ ಸುಗ್ಗಿ ಕುಣಿತದ ಕಲಾವಿದರು ಹೆಜ್ಜೆ ಹಾಕುತ್ತಿದ್ದಾರೆ. ಇವರ ಜೊತೆಗೆ ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆಯಿಂದ ಆಯೋಜನೆ ಗೊಂಡಿರುವ ನೃತ್ಯ ಪ್ರದರ್ಶನದಲ್ಲಿ ಕೊಪ್ಪಳದ ಕಕುನೂರು ಮೂಲದ ನಂದಿ ಧ್ವಜ ಕುಣಿತ ಕಲಾವಿದರು, ಬೆಂಗಳೂರಿನ ಉಡುಪಿ ಮೂಲದ ಮೂವರು ಭರತನಾಟ್ಯ ಕಲಾವಿದರು ಭಾಗಿಯಾಗಿದ್ದಾರೆ.

ಇನ್ನು ಕರ್ನಾಟಕದ ಟ್ಯಾಬ್ಲೊ ಜೊತೆಗೆ ರಾಜ್ಯದ ಸಂಸ್ಕೃತಿ ಪ್ರದರ್ಶಿಸುವ ನೃತ್ಯ ಕಲಾವಿದರಿಗೂ ಅವಕಾಶ ನೀಡಲಾಗಿದೆ. ಟ್ಯಾಬ್ಲೊ ಜೊತೆಗೆ ಉತ್ತರ ಕನ್ನಡ ಜಿಲ್ಲೆಯ ಹಾಲಕ್ಕಿ ಸುಗ್ಗಿ ಕುಣಿತದ ಕಲಾವಿದರು ಹೆಜ್ಜೆ ಹಾಕುತ್ತಿದ್ದಾರೆ. ಇವರ ಜೊತೆಗೆ ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆಯಿಂದ ಆಯೋಜನೆ ಗೊಂಡಿರುವ ನೃತ್ಯ ಪ್ರದರ್ಶನದಲ್ಲಿ ಕೊಪ್ಪಳದ ಕಕುನೂರು ಮೂಲದ ನಂದಿ ಧ್ವಜ ಕುಣಿತ ಕಲಾವಿದರು, ಬೆಂಗಳೂರಿನ ಉಡುಪಿ ಮೂಲದ ಮೂವರು ಭರತನಾಟ್ಯ ಕಲಾವಿದರು ಭಾಗಿಯಾಗಿದ್ದಾರೆ.

4 / 6
ಕರ್ನಾಟಕ ಸತತ 14 ನೇ ಬಾರಿ ಗಣರಾಜೋತ್ಸವ ಪರೇಡ್ ನಲ್ಲಿ ತನ್ನ ಸ್ತಬ್ಧ ಚಿತ್ರ ಪ್ರದರ್ಶನ ಮಾಡುತ್ತಿದೆ. ಈವರೆಗೂ ಸತತ 14 ವರ್ಷಗಳ ಕಾಲ ಟ್ಯಾಬ್ಲೊ ಪ್ರದರ್ಶನ ಮಾಡಲು ಯಾರಿಗೂ ಅವಕಾಶ ಸಿಕ್ಕಿಲ್ಲ ಹೀಗಾಗಿ ಕರ್ನಾಟಕ ಸತತ 14 ವರ್ಷಗಳ ಪ್ರದರ್ಶನದ ಮೂಲಕ ಹೊಸ ಸಾಧನೆ ಮಾಡಿದಂತಾಗಿದೆ.

ಕರ್ನಾಟಕ ಸತತ 14 ನೇ ಬಾರಿ ಗಣರಾಜೋತ್ಸವ ಪರೇಡ್ ನಲ್ಲಿ ತನ್ನ ಸ್ತಬ್ಧ ಚಿತ್ರ ಪ್ರದರ್ಶನ ಮಾಡುತ್ತಿದೆ. ಈವರೆಗೂ ಸತತ 14 ವರ್ಷಗಳ ಕಾಲ ಟ್ಯಾಬ್ಲೊ ಪ್ರದರ್ಶನ ಮಾಡಲು ಯಾರಿಗೂ ಅವಕಾಶ ಸಿಕ್ಕಿಲ್ಲ ಹೀಗಾಗಿ ಕರ್ನಾಟಕ ಸತತ 14 ವರ್ಷಗಳ ಪ್ರದರ್ಶನದ ಮೂಲಕ ಹೊಸ ಸಾಧನೆ ಮಾಡಿದಂತಾಗಿದೆ.

5 / 6
ಆರಂಭದಲ್ಲಿ ಕರ್ನಾಟಕಕ್ಕೆ ಈ ಬಾರಿಗೆ ಅವಕಾಶ ನೀಡಲು ಕೇಂದ್ರದ ಆಯ್ಕೆ ಸಮಿತಿ ನಿರಾಕರಿಸಿತ್ತು. ಸತತ ಪ್ರದರ್ಶನದ ಹಿನ್ನೆಲೆ ಬೇರೆ ರಾಜ್ಯಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಈ ನಿರ್ಧಾರ ಮಾಡಲಾಗಿತ್ತು. ಆದರೆ ರಾಜ್ಯದಿಂದ ತೀವ್ರ ಟೀಕೆ ವ್ಯಕ್ತವಾದ ಬಳಿಕ ಮತ್ತೆ ಕರ್ನಾಟಕದ ಟ್ಯಾಬ್ಲೊ ಭಾಗಿಯಾಗಲು ಅವಕಾಶ ನೀಡಲಾಯಿತು.

ಆರಂಭದಲ್ಲಿ ಕರ್ನಾಟಕಕ್ಕೆ ಈ ಬಾರಿಗೆ ಅವಕಾಶ ನೀಡಲು ಕೇಂದ್ರದ ಆಯ್ಕೆ ಸಮಿತಿ ನಿರಾಕರಿಸಿತ್ತು. ಸತತ ಪ್ರದರ್ಶನದ ಹಿನ್ನೆಲೆ ಬೇರೆ ರಾಜ್ಯಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಈ ನಿರ್ಧಾರ ಮಾಡಲಾಗಿತ್ತು. ಆದರೆ ರಾಜ್ಯದಿಂದ ತೀವ್ರ ಟೀಕೆ ವ್ಯಕ್ತವಾದ ಬಳಿಕ ಮತ್ತೆ ಕರ್ನಾಟಕದ ಟ್ಯಾಬ್ಲೊ ಭಾಗಿಯಾಗಲು ಅವಕಾಶ ನೀಡಲಾಯಿತು.

6 / 6

Published On - 4:09 pm, Thu, 26 January 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ