AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಾಂಗ ದಾನದ ಮಹತ್ವ ಸಾರಿದ ಕಾರುಣ್ಯ ರಾಮ್​, ಅಶ್ವಿನಿ ಪುನೀತ್ ರಾಜ್​ಕುಮಾರ್​, ಧ್ರುವ ಸರ್ಜಾ

ಅಂಗಾಂಗ ದಾನ ಶಿಬಿರದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್​ ರಾಜ್​ಕುಮಾರ್, ನಟ ಧ್ರುವ ಸರ್ಜಾ, ನಟಿ ಕಾರುಣ್ಯ ರಾಮ್​ ಭಾಗಿ ಆಗಿದ್ದಾರೆ. ಜನರಲ್ಲಿ ಅಂಗಾಂಗ ದಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ಕೆ ಈ ಸೆಲೆಬ್ರಿಟಿಗಳು ಸಾಥ್​ ನೀಡಿದ್ದಾರೆ. ಈ ಶಿಬಿರದಲ್ಲಿ ಸುಮಾರು 700ರಿಂದ 1000 ಮಂದಿ ಅಂಗಾಂಗ ದಾನ ಪ್ರತಿಗೆ ಸಹಿ ಮಾಡಿದರು.

ಮದನ್​ ಕುಮಾರ್​
|

Updated on: Sep 25, 2023 | 5:09 PM

Share
ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ನಟಿಯಾಗಿ ಸಕ್ರಿಯವಾಗಿರುವ ಕಾರುಣ್ಯ ರಾಮ್ ಅವರು ಒಂದಷ್ಟು ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಕೊಂಡಿದ್ದಾರೆ. ಅದಕ್ಕೆ ಇಲ್ಲಿದೆ ಒಂದು ಲೇಟೆಸ್ಟ್​ ಉದಾಹರಣೆ. ಅಂಗಾಂಗ ದಾನ ಶಿಬಿರದಲ್ಲಿ ಭಾಗಿಯಾಗಿ ಅವರು ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.

ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ನಟಿಯಾಗಿ ಸಕ್ರಿಯವಾಗಿರುವ ಕಾರುಣ್ಯ ರಾಮ್ ಅವರು ಒಂದಷ್ಟು ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಕೊಂಡಿದ್ದಾರೆ. ಅದಕ್ಕೆ ಇಲ್ಲಿದೆ ಒಂದು ಲೇಟೆಸ್ಟ್​ ಉದಾಹರಣೆ. ಅಂಗಾಂಗ ದಾನ ಶಿಬಿರದಲ್ಲಿ ಭಾಗಿಯಾಗಿ ಅವರು ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.

1 / 5
ಕರ್ನಾಟಕ ಸಿಂಡಿಕೇಟ್ ಫೌಂಡೇಶನ್ ಮತ್ತು ಕಿಮ್ಸ್ ಆಸ್ಪತ್ರೆಯ ಸಹಯೋಗದಲ್ಲಿ ಇಂದು (ಸೆಪ್ಟೆಂಬರ್​ 25) ಅಂಗಾಂಗ ದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್​ ರಾಜ್​ಕುಮಾರ್ ಮತ್ತು ನಟ ಧ್ರುವ ಸರ್ಜಾ ಅವರು ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದರು.

ಕರ್ನಾಟಕ ಸಿಂಡಿಕೇಟ್ ಫೌಂಡೇಶನ್ ಮತ್ತು ಕಿಮ್ಸ್ ಆಸ್ಪತ್ರೆಯ ಸಹಯೋಗದಲ್ಲಿ ಇಂದು (ಸೆಪ್ಟೆಂಬರ್​ 25) ಅಂಗಾಂಗ ದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್​ ರಾಜ್​ಕುಮಾರ್ ಮತ್ತು ನಟ ಧ್ರುವ ಸರ್ಜಾ ಅವರು ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದರು.

2 / 5
ದೀಪ ಬೆಳಗುವ ಮೂಲಕ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಖ್ಯಾತ ನಟಿ ಕಾರುಣ್ಯ ರಾಮ್ ಅವರು, 'ಅಂಗಾಗ ದಾನ ಮಾಡಿದರೆ ನಮ್ಮ ಮರಣದ ನಂತರವೂ ನಮ್ಮ ಉಪಯೋಗ ಆಗುತ್ತದೆ. ಈ ಕಾರ್ಯದಿಂದ ಪುಣ್ಯ ಸಿಗುತ್ತದೆ. ಹಾಗಾಗಿ ಎಲ್ಲರೂ ಅಂಗಾಗ ದಾನ ಮಾಡಿ' ಎಂದು ಮನವಿ ಮಾಡಿದರು.

ದೀಪ ಬೆಳಗುವ ಮೂಲಕ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಖ್ಯಾತ ನಟಿ ಕಾರುಣ್ಯ ರಾಮ್ ಅವರು, 'ಅಂಗಾಗ ದಾನ ಮಾಡಿದರೆ ನಮ್ಮ ಮರಣದ ನಂತರವೂ ನಮ್ಮ ಉಪಯೋಗ ಆಗುತ್ತದೆ. ಈ ಕಾರ್ಯದಿಂದ ಪುಣ್ಯ ಸಿಗುತ್ತದೆ. ಹಾಗಾಗಿ ಎಲ್ಲರೂ ಅಂಗಾಗ ದಾನ ಮಾಡಿ' ಎಂದು ಮನವಿ ಮಾಡಿದರು.

3 / 5
ಧ್ರುವ ಸರ್ಜಾ ಕೂಡ ಈ ಬಗ್ಗೆ ಮಾತನಾಡಿದರು. 'ಅನೇಕರಿಗೆ ನಾವು ಯೂಸ್ ಲೆಸ್ ಅಂತ ಹೇಳುತ್ತೇವೆ. ಆದರೆ ಯಾರೂ ಕೂಡ ಯೂಸ್ ಲೆಸ್ ಅಲ್ಲ. ಯೂಸ್ಡ್ ಲೆಸ್ ಅಷ್ಟೇ! ಅಂಗಾಂಗ ದಾನ ಮಾಡಿದರೆ ಮತ್ತೊಬ್ಬರಿಗೆ ಉಪಯೋಗ ಆಗುತ್ತೆ. ನಾವು ಸತ್ತ ಬಳಿಕವೂ ಮತ್ತೊಬ್ಬರಿಗೆ ಹೆಲ್ಪ್​ ಆಗುತ್ತೆ. ಎಲ್ಲರೂ ದಯವಿಟ್ಟು ಇದಕ್ಕೆ ಕೈ ಜೋಡಿಸಿ. ನಿಮ್ಮ ಪಕ್ಕದವರಿಗೂ ಹೇಳಿ. ಎಲ್ಲ ಕಡೆ ಇಂಥ ಶಿಬಿರ ಮಾಡಬೇಕು' ಎಂದು ಅವರ ಹೇಳಿದರು.

ಧ್ರುವ ಸರ್ಜಾ ಕೂಡ ಈ ಬಗ್ಗೆ ಮಾತನಾಡಿದರು. 'ಅನೇಕರಿಗೆ ನಾವು ಯೂಸ್ ಲೆಸ್ ಅಂತ ಹೇಳುತ್ತೇವೆ. ಆದರೆ ಯಾರೂ ಕೂಡ ಯೂಸ್ ಲೆಸ್ ಅಲ್ಲ. ಯೂಸ್ಡ್ ಲೆಸ್ ಅಷ್ಟೇ! ಅಂಗಾಂಗ ದಾನ ಮಾಡಿದರೆ ಮತ್ತೊಬ್ಬರಿಗೆ ಉಪಯೋಗ ಆಗುತ್ತೆ. ನಾವು ಸತ್ತ ಬಳಿಕವೂ ಮತ್ತೊಬ್ಬರಿಗೆ ಹೆಲ್ಪ್​ ಆಗುತ್ತೆ. ಎಲ್ಲರೂ ದಯವಿಟ್ಟು ಇದಕ್ಕೆ ಕೈ ಜೋಡಿಸಿ. ನಿಮ್ಮ ಪಕ್ಕದವರಿಗೂ ಹೇಳಿ. ಎಲ್ಲ ಕಡೆ ಇಂಥ ಶಿಬಿರ ಮಾಡಬೇಕು' ಎಂದು ಅವರ ಹೇಳಿದರು.

4 / 5
ಈ ಕಾರ್ಯಕ್ರಮದಲ್ಲಿ ಅಂದಾಜು 700ರಿಂದ 1000 ಮಂದಿ ಅಂಗಾಂಗ ದಾನ ಪ್ರತಿಗೆ ಸಹಿ ಮಾಡಿದರು ಎಂಬುದು ವಿಶೇಷ. ಈ ಕಾರ್ಯಕ್ರಮದಲ್ಲಿ ಆರ್ಗನ್ ಡೊನೇಷನ್ ಡಿಪಾರ್ಟ್ಮೆಂಟ್ ಜೊತೆ ಹೆಲ್ತ್ ಆ್ಯಂಡ್​ ವೆಲ್ತ್ ಜಾಯಿಂಟ್ ಡೈರೆಕ್ಟರ್, ಕಿಮ್ಸ್ ಅಧ್ಯಕ್ಷರು ಭಾಗಿ ಆಗಿದ್ದರು.

ಈ ಕಾರ್ಯಕ್ರಮದಲ್ಲಿ ಅಂದಾಜು 700ರಿಂದ 1000 ಮಂದಿ ಅಂಗಾಂಗ ದಾನ ಪ್ರತಿಗೆ ಸಹಿ ಮಾಡಿದರು ಎಂಬುದು ವಿಶೇಷ. ಈ ಕಾರ್ಯಕ್ರಮದಲ್ಲಿ ಆರ್ಗನ್ ಡೊನೇಷನ್ ಡಿಪಾರ್ಟ್ಮೆಂಟ್ ಜೊತೆ ಹೆಲ್ತ್ ಆ್ಯಂಡ್​ ವೆಲ್ತ್ ಜಾಯಿಂಟ್ ಡೈರೆಕ್ಟರ್, ಕಿಮ್ಸ್ ಅಧ್ಯಕ್ಷರು ಭಾಗಿ ಆಗಿದ್ದರು.

5 / 5
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್