ಅಂಗಾಂಗ ದಾನದ ಮಹತ್ವ ಸಾರಿದ ಕಾರುಣ್ಯ ರಾಮ್​, ಅಶ್ವಿನಿ ಪುನೀತ್ ರಾಜ್​ಕುಮಾರ್​, ಧ್ರುವ ಸರ್ಜಾ

Updated on: Sep 25, 2023 | 5:09 PM

ಅಂಗಾಂಗ ದಾನ ಶಿಬಿರದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್​ ರಾಜ್​ಕುಮಾರ್, ನಟ ಧ್ರುವ ಸರ್ಜಾ, ನಟಿ ಕಾರುಣ್ಯ ರಾಮ್​ ಭಾಗಿ ಆಗಿದ್ದಾರೆ. ಜನರಲ್ಲಿ ಅಂಗಾಂಗ ದಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ಕೆ ಈ ಸೆಲೆಬ್ರಿಟಿಗಳು ಸಾಥ್​ ನೀಡಿದ್ದಾರೆ. ಈ ಶಿಬಿರದಲ್ಲಿ ಸುಮಾರು 700ರಿಂದ 1000 ಮಂದಿ ಅಂಗಾಂಗ ದಾನ ಪ್ರತಿಗೆ ಸಹಿ ಮಾಡಿದರು.

1 / 5
ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ನಟಿಯಾಗಿ ಸಕ್ರಿಯವಾಗಿರುವ ಕಾರುಣ್ಯ ರಾಮ್ ಅವರು ಒಂದಷ್ಟು ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಕೊಂಡಿದ್ದಾರೆ. ಅದಕ್ಕೆ ಇಲ್ಲಿದೆ ಒಂದು ಲೇಟೆಸ್ಟ್​ ಉದಾಹರಣೆ. ಅಂಗಾಂಗ ದಾನ ಶಿಬಿರದಲ್ಲಿ ಭಾಗಿಯಾಗಿ ಅವರು ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.

ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ನಟಿಯಾಗಿ ಸಕ್ರಿಯವಾಗಿರುವ ಕಾರುಣ್ಯ ರಾಮ್ ಅವರು ಒಂದಷ್ಟು ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಕೊಂಡಿದ್ದಾರೆ. ಅದಕ್ಕೆ ಇಲ್ಲಿದೆ ಒಂದು ಲೇಟೆಸ್ಟ್​ ಉದಾಹರಣೆ. ಅಂಗಾಂಗ ದಾನ ಶಿಬಿರದಲ್ಲಿ ಭಾಗಿಯಾಗಿ ಅವರು ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.

2 / 5
ಕರ್ನಾಟಕ ಸಿಂಡಿಕೇಟ್ ಫೌಂಡೇಶನ್ ಮತ್ತು ಕಿಮ್ಸ್ ಆಸ್ಪತ್ರೆಯ ಸಹಯೋಗದಲ್ಲಿ ಇಂದು (ಸೆಪ್ಟೆಂಬರ್​ 25) ಅಂಗಾಂಗ ದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್​ ರಾಜ್​ಕುಮಾರ್ ಮತ್ತು ನಟ ಧ್ರುವ ಸರ್ಜಾ ಅವರು ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದರು.

ಕರ್ನಾಟಕ ಸಿಂಡಿಕೇಟ್ ಫೌಂಡೇಶನ್ ಮತ್ತು ಕಿಮ್ಸ್ ಆಸ್ಪತ್ರೆಯ ಸಹಯೋಗದಲ್ಲಿ ಇಂದು (ಸೆಪ್ಟೆಂಬರ್​ 25) ಅಂಗಾಂಗ ದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್​ ರಾಜ್​ಕುಮಾರ್ ಮತ್ತು ನಟ ಧ್ರುವ ಸರ್ಜಾ ಅವರು ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದರು.

3 / 5
ದೀಪ ಬೆಳಗುವ ಮೂಲಕ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಖ್ಯಾತ ನಟಿ ಕಾರುಣ್ಯ ರಾಮ್ ಅವರು, 'ಅಂಗಾಗ ದಾನ ಮಾಡಿದರೆ ನಮ್ಮ ಮರಣದ ನಂತರವೂ ನಮ್ಮ ಉಪಯೋಗ ಆಗುತ್ತದೆ. ಈ ಕಾರ್ಯದಿಂದ ಪುಣ್ಯ ಸಿಗುತ್ತದೆ. ಹಾಗಾಗಿ ಎಲ್ಲರೂ ಅಂಗಾಗ ದಾನ ಮಾಡಿ' ಎಂದು ಮನವಿ ಮಾಡಿದರು.

ದೀಪ ಬೆಳಗುವ ಮೂಲಕ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಖ್ಯಾತ ನಟಿ ಕಾರುಣ್ಯ ರಾಮ್ ಅವರು, 'ಅಂಗಾಗ ದಾನ ಮಾಡಿದರೆ ನಮ್ಮ ಮರಣದ ನಂತರವೂ ನಮ್ಮ ಉಪಯೋಗ ಆಗುತ್ತದೆ. ಈ ಕಾರ್ಯದಿಂದ ಪುಣ್ಯ ಸಿಗುತ್ತದೆ. ಹಾಗಾಗಿ ಎಲ್ಲರೂ ಅಂಗಾಗ ದಾನ ಮಾಡಿ' ಎಂದು ಮನವಿ ಮಾಡಿದರು.

4 / 5
ಧ್ರುವ ಸರ್ಜಾ ಕೂಡ ಈ ಬಗ್ಗೆ ಮಾತನಾಡಿದರು. 'ಅನೇಕರಿಗೆ ನಾವು ಯೂಸ್ ಲೆಸ್ ಅಂತ ಹೇಳುತ್ತೇವೆ. ಆದರೆ ಯಾರೂ ಕೂಡ ಯೂಸ್ ಲೆಸ್ ಅಲ್ಲ. ಯೂಸ್ಡ್ ಲೆಸ್ ಅಷ್ಟೇ! ಅಂಗಾಂಗ ದಾನ ಮಾಡಿದರೆ ಮತ್ತೊಬ್ಬರಿಗೆ ಉಪಯೋಗ ಆಗುತ್ತೆ. ನಾವು ಸತ್ತ ಬಳಿಕವೂ ಮತ್ತೊಬ್ಬರಿಗೆ ಹೆಲ್ಪ್​ ಆಗುತ್ತೆ. ಎಲ್ಲರೂ ದಯವಿಟ್ಟು ಇದಕ್ಕೆ ಕೈ ಜೋಡಿಸಿ. ನಿಮ್ಮ ಪಕ್ಕದವರಿಗೂ ಹೇಳಿ. ಎಲ್ಲ ಕಡೆ ಇಂಥ ಶಿಬಿರ ಮಾಡಬೇಕು' ಎಂದು ಅವರ ಹೇಳಿದರು.

ಧ್ರುವ ಸರ್ಜಾ ಕೂಡ ಈ ಬಗ್ಗೆ ಮಾತನಾಡಿದರು. 'ಅನೇಕರಿಗೆ ನಾವು ಯೂಸ್ ಲೆಸ್ ಅಂತ ಹೇಳುತ್ತೇವೆ. ಆದರೆ ಯಾರೂ ಕೂಡ ಯೂಸ್ ಲೆಸ್ ಅಲ್ಲ. ಯೂಸ್ಡ್ ಲೆಸ್ ಅಷ್ಟೇ! ಅಂಗಾಂಗ ದಾನ ಮಾಡಿದರೆ ಮತ್ತೊಬ್ಬರಿಗೆ ಉಪಯೋಗ ಆಗುತ್ತೆ. ನಾವು ಸತ್ತ ಬಳಿಕವೂ ಮತ್ತೊಬ್ಬರಿಗೆ ಹೆಲ್ಪ್​ ಆಗುತ್ತೆ. ಎಲ್ಲರೂ ದಯವಿಟ್ಟು ಇದಕ್ಕೆ ಕೈ ಜೋಡಿಸಿ. ನಿಮ್ಮ ಪಕ್ಕದವರಿಗೂ ಹೇಳಿ. ಎಲ್ಲ ಕಡೆ ಇಂಥ ಶಿಬಿರ ಮಾಡಬೇಕು' ಎಂದು ಅವರ ಹೇಳಿದರು.

5 / 5
ಈ ಕಾರ್ಯಕ್ರಮದಲ್ಲಿ ಅಂದಾಜು 700ರಿಂದ 1000 ಮಂದಿ ಅಂಗಾಂಗ ದಾನ ಪ್ರತಿಗೆ ಸಹಿ ಮಾಡಿದರು ಎಂಬುದು ವಿಶೇಷ. ಈ ಕಾರ್ಯಕ್ರಮದಲ್ಲಿ ಆರ್ಗನ್ ಡೊನೇಷನ್ ಡಿಪಾರ್ಟ್ಮೆಂಟ್ ಜೊತೆ ಹೆಲ್ತ್ ಆ್ಯಂಡ್​ ವೆಲ್ತ್ ಜಾಯಿಂಟ್ ಡೈರೆಕ್ಟರ್, ಕಿಮ್ಸ್ ಅಧ್ಯಕ್ಷರು ಭಾಗಿ ಆಗಿದ್ದರು.

ಈ ಕಾರ್ಯಕ್ರಮದಲ್ಲಿ ಅಂದಾಜು 700ರಿಂದ 1000 ಮಂದಿ ಅಂಗಾಂಗ ದಾನ ಪ್ರತಿಗೆ ಸಹಿ ಮಾಡಿದರು ಎಂಬುದು ವಿಶೇಷ. ಈ ಕಾರ್ಯಕ್ರಮದಲ್ಲಿ ಆರ್ಗನ್ ಡೊನೇಷನ್ ಡಿಪಾರ್ಟ್ಮೆಂಟ್ ಜೊತೆ ಹೆಲ್ತ್ ಆ್ಯಂಡ್​ ವೆಲ್ತ್ ಜಾಯಿಂಟ್ ಡೈರೆಕ್ಟರ್, ಕಿಮ್ಸ್ ಅಧ್ಯಕ್ಷರು ಭಾಗಿ ಆಗಿದ್ದರು.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us