- Kannada News Photo gallery Kerala: Seva Bharti volunteers lead rescue efforts following devastating Wayanad landslide kannada news
ಅನ್ನ, ನೀರಿನಿಂದ ಹಿಡಿದು ಅಂತ್ಯಕ್ರಿಯೆವರೆಗೆ, ವಯನಾಡು ಭೂಕುಸಿತ ಸ್ಥಳದಲ್ಲಿ ಬೀಡುಬಿಟ್ಟಿರುವ ಸೇವಾ ಭಾರತಿ ಸ್ವಯಂಸೇವಕರು
ಕೇರಳದ ವಯನಾಡಿನಲ್ಲಿ ಭೂಕುಸಿತದ ನಂತರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ದುರಂತದಲ್ಲಿ ಇಲ್ಲಿಯವರೆಗೆ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಂತ್ರಸ್ತರ ನೆರವಿಗೆ ಅನೇಕ ಜನರು ಮತ್ತು ಸಂಘ ಸಂಸ್ಥೆಗಳು ಮುಂದೆ ಬರುತ್ತಿವೆ. ಸೇವಾ ಭಾರತಿ ಸ್ವಯಂಸೇವಕರು ಸಹ ಜನರಿಗೆ ಸಹಾಯ ಮಾಡುವಲ್ಲಿ ನಿರತರಾಗಿದ್ದಾರೆ.
Updated on:Jul 31, 2024 | 12:09 PM

ಕೇರಳದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಇದೀಗ ಗುಡ್ಡಗಳು ಕುಸಿದು ಪ್ರವಾಹ ಸ್ಥಿತಿಯೂ ನಿರ್ಮಾಣವಾಗಿದೆ. ಎನ್ಡಿಆರ್ಎಫ್ ಹಾಗೂ ಇತರರ ಜತೆ ರಕ್ಷಣಾ ಕಾರ್ಯದಲ್ಲಿ ಸೇವಾ ಭಾರತಿ ಕೂಡ ಕೈಜೋಡಿಸಿದೆ.

ಕೇಳದ ಪ್ರವಾಹ ಪೀಡಿತ ಪ್ರದೇಶದಲ್ಲಿ ನಿರಾಶ್ರಿತರಿಗೆ ಆಹಾರ ಒದಗಿಸುವುದು, ವೈದ್ಯಕೀಯ ವ್ಯವಸ್ಥೆಯಿಂದ ಹಿಡಿದು ಶವಗಳ ಅಂತ್ಯಕ್ರಿಯೆಯವರೆಗೂ ಸೇವಾ ಭಾರತಿ ಸ್ವಯಂಸೇವಕರು ಕೆಲಸ ಮಾಡುತ್ತಿದ್ದಾರೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನೆ, ವಾಯುಪಡೆ, ಎನ್ಡಿಆರ್ಎಫ್, ಎಸ್ಡಿಆರ್ಎಫ್ ತಂಡಗಳು ಹಗಲು ರಾತ್ರಿ ಎನ್ನದೇ ಜನರಿಗಾಗಿ ಹುಡುಕಾಟ ನಡೆಸುತ್ತಿವೆ. ಇದರೊಂದಿಗೆ ಸೇವಾ ಭಾರತಿಯ ಸ್ವಯಂಸೇವಕರು ಸಹ ಮುಂಚೂಣಿಯಲ್ಲಿದ್ದಾರೆ ಮತ್ತು ಜನರಿಗೆ ಸಹಾಯ ಮಾಡುವಲ್ಲಿ ನಿರತರಾಗಿದ್ದಾರೆ.

ಸದ್ಯ ವಯನಾಡಿನ ಆಸ್ಪತ್ರೆಗಳಲ್ಲಿ ಜನರ ದಂಡೇ ಇದೆ. ಮೃತ ದೇಹಗಳನ್ನು ಗುರುತಿಸಲಾಗುತ್ತಿದ್ದು, ಜನರು ಭಯಭೀತ ಕಣ್ಣುಗಳಿಂದ ತಮ್ಮ ಪ್ರೀತಿಪಾತ್ರರನ್ನು ಹುಡುಕುತ್ತಿದ್ದಾರೆ. ಬದುಕುಳಿಯದವರನ್ನು ಸ್ಟ್ರೆಚರ್ಗಳಲ್ಲಿ ಹೊರತೆಗೆಯಲಾಯಿತು, ಸುರಕ್ಷಿತವಾಗಿ ಹೆಲಿಕಾಪ್ಟರ್ನಲ್ಲಿ ಹಿಂದಿರುಗಿದರು.

ವಯನಾಡಿನಲ್ಲಿ ರಾತ್ರಿ ವೇಳೆ ಮೂರು ಭೂಕುಸಿತಗಳು ಸಂಭವಿಸಿವೆ, ಅನೇಕ ಹಳ್ಳಿಗಳು ಕೊಚ್ಚಿಹೋಗಿದ್ದು, ಇದುವರೆಗೆ 150ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.

ಕೇರಳದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಇದೇ ಕಾರಣಕ್ಕೆ ವಯನಾಡಿನಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಕಣ್ಣು ಹಾಯಿಸಿದಷ್ಟು ದೂರ ನೀರೇ ಗೋಚರಿಸುತ್ತಿದೆ.
Published On - 12:09 pm, Wed, 31 July 24

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್ ಇಂಡಿಯಾ ವೆಬ್ಸೈಟ್ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್ನಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ
Read More
