AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF chapter 2 Trailer: ರಾಕಿ vs ಅಧೀರ; ಇಲ್ಲಿದೆ ‘ಕೆಜಿಎಫ್​ ಚಾಪ್ಟರ್ 2’ ಸ್ಟಿಲ್​​ಗಳು

‘ರಕ್ತದಿಂದ ಬರೆದ ಕಥೆ ಇದು, ಶಾಹಿಯಿಂದ ಮುಂದುವರಿಸೋಕೆ ಆಗಲ್ಲ. ಮುಂದುವರಿಸಬೇಕು ಎಂದರೆ ಮತ್ತೆ ರಕ್ತವನ್ನೇ ಕೇಳತ್ತೆ’, ‘ಅಲ್ಲಿ ಬೀಳುವ ಹೆಣಗಳೂ ಉಪಯೋಗಕ್ಕೆ ಬರುತ್ತದೆ, ಬೇಕಿದ್ದರೆ ರಣಹದ್ದುಗಳನ್ನು ಕೇಳು’ ಎಂಬಿತ್ಯಾದಿ ಡೈಲಾಗ್​ಗಳು ಟ್ರೇಲರ್​ನಲ್ಲಿ ಹೈಲೈಟ್​ ಆಗಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Mar 27, 2022 | 7:27 PM

ಹಲವು ಸಮಯದಿಂದ ಕಾಯುತ್ತಿದ್ದ ದಿನ ಬಂದೇಬಿಟ್ಟಿದೆ. ‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಇಂದು (ಮಾರ್ಚ್​ 27) ರಿಲೀಸ್ ಆಗಿದೆ. ‘ಕೆಜಿಎಫ್​’ ಸಿನಿಮಾ ತೆರೆಕಂಡು ಮೂರು ವರ್ಷಗಳ ಬಳಿಕ ‘ಕೆಜಿಎಫ್​ 2’ ತೆರೆಗೆ ಬರುತ್ತಿದೆ.

ಹಲವು ಸಮಯದಿಂದ ಕಾಯುತ್ತಿದ್ದ ದಿನ ಬಂದೇಬಿಟ್ಟಿದೆ. ‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಇಂದು (ಮಾರ್ಚ್​ 27) ರಿಲೀಸ್ ಆಗಿದೆ. ‘ಕೆಜಿಎಫ್​’ ಸಿನಿಮಾ ತೆರೆಕಂಡು ಮೂರು ವರ್ಷಗಳ ಬಳಿಕ ‘ಕೆಜಿಎಫ್​ 2’ ತೆರೆಗೆ ಬರುತ್ತಿದೆ.

1 / 8
ಈ ಸಿನಿಮಾ ಹೇಗಿದೆ ಎನ್ನುವ ಝಲಕ್ ಇಂದು ರಿಲೀಸ್ ಆದ ಟ್ರೇಲರ್​ನಲ್ಲಿ ಸಿಕ್ಕಿದೆ. ಶಿವರಾಜ್​ಕುಮಾರ್ ಅವರು ಟ್ರೇಲರ್ ರಿಲೀಸ್ ಮಾಡಿ ಚಿತ್ರಕ್ಕೆ ಆಲ್​ ದಿ ಬೆಸ್ಟ್​ ಹೇಳಿದರು.

ಈ ಸಿನಿಮಾ ಹೇಗಿದೆ ಎನ್ನುವ ಝಲಕ್ ಇಂದು ರಿಲೀಸ್ ಆದ ಟ್ರೇಲರ್​ನಲ್ಲಿ ಸಿಕ್ಕಿದೆ. ಶಿವರಾಜ್​ಕುಮಾರ್ ಅವರು ಟ್ರೇಲರ್ ರಿಲೀಸ್ ಮಾಡಿ ಚಿತ್ರಕ್ಕೆ ಆಲ್​ ದಿ ಬೆಸ್ಟ್​ ಹೇಳಿದರು.

2 / 8
ಕೆಜಿಎಫ್​ನ ಅಧಿಪತಿ ಆಗಿದ್ದ ಗರುಡನನ್ನು ಹತ್ಯೆ ಮಾಡಿದ ನಂತರದಲ್ಲಿ ಆ ಸಾಮ್ರಾಜ್ಯ ರಾಕಿಯ ಕೈ ಸೇರಿದೆ. ರಾಕಿ ನಟೋರಿಯಸ್​ ಗ್ಯಾಂಗ್​ಸ್ಟರ್​ ಹಾಗೂ ಉದ್ಯಮಿ ಎರಡೂ ಹೌದು. ‘

ಕೆಜಿಎಫ್​ನ ಅಧಿಪತಿ ಆಗಿದ್ದ ಗರುಡನನ್ನು ಹತ್ಯೆ ಮಾಡಿದ ನಂತರದಲ್ಲಿ ಆ ಸಾಮ್ರಾಜ್ಯ ರಾಕಿಯ ಕೈ ಸೇರಿದೆ. ರಾಕಿ ನಟೋರಿಯಸ್​ ಗ್ಯಾಂಗ್​ಸ್ಟರ್​ ಹಾಗೂ ಉದ್ಯಮಿ ಎರಡೂ ಹೌದು. ‘

3 / 8
‘ಕೆಜಿಎಫ್​ ಚಾಪ್ಟರ್​ 2 ’ ಟ್ರೇಲರ್ ತುಂಬಾನೇ ಅದ್ಭುತವಾಗಿ ಮೂಡಿ ಬಂದಿದೆ. ಯಶ್ ಪಾತ್ರ ಸಖತ್ ಹೈಲೈಟ್​ ಆಗಿದೆ. ಅಧೀರನಾಗಿ ಸಂಜಯ್​ ದತ್​ ಮಿಂಚಿದ್ದಾರೆ. ರಾಕಿ ಹಾಗೂ ಅಧೀರನ ನಡುವೆ ದೊಡ್ಡ ಫೈಟ್​ ಇದೆ ಎನ್ನುವ ಸೂಚನೆ ಟ್ರೇಲರ್​ನಲ್ಲಿ ಸಿಕ್ಕಿದೆ.

‘ಕೆಜಿಎಫ್​ ಚಾಪ್ಟರ್​ 2 ’ ಟ್ರೇಲರ್ ತುಂಬಾನೇ ಅದ್ಭುತವಾಗಿ ಮೂಡಿ ಬಂದಿದೆ. ಯಶ್ ಪಾತ್ರ ಸಖತ್ ಹೈಲೈಟ್​ ಆಗಿದೆ. ಅಧೀರನಾಗಿ ಸಂಜಯ್​ ದತ್​ ಮಿಂಚಿದ್ದಾರೆ. ರಾಕಿ ಹಾಗೂ ಅಧೀರನ ನಡುವೆ ದೊಡ್ಡ ಫೈಟ್​ ಇದೆ ಎನ್ನುವ ಸೂಚನೆ ಟ್ರೇಲರ್​ನಲ್ಲಿ ಸಿಕ್ಕಿದೆ.

4 / 8
‘ರಕ್ತದಿಂದ ಬರೆದ ಕಥೆ ಇದು, ಶಾಹಿಯಿಂದ ಮುಂದುವರಿಸೋಕೆ ಆಗಲ್ಲ. ಮುಂದುವರಿಸಬೇಕು ಎಂದರೆ ಮತ್ತೆ ರಕ್ತವನ್ನೇ ಕೇಳತ್ತೆ’, ‘ಅಲ್ಲಿ ಬೀಳುವ ಹೆಣಗಳೂ ಉಪಯೋಗಕ್ಕೆ ಬರುತ್ತದೆ, ಬೇಕಿದ್ದರೆ ರಣಹದ್ದುಗಳನ್ನು ಕೇಳು’ ಎಂಬಿತ್ಯಾದಿ ಡೈಲಾಗ್​ಗಳು ಟ್ರೇಲರ್​ನಲ್ಲಿ ಹೈಲೈಟ್​ ಆಗಿದೆ. ಸಿನಿಮಾದ ಹಿನ್ನೆಲೆ ಸಂಗೀತ ಟ್ರೇಲರ್​ನ ತೂಕವನ್ನು ಹೆಚ್ಚಿಸಿದೆ.

‘ರಕ್ತದಿಂದ ಬರೆದ ಕಥೆ ಇದು, ಶಾಹಿಯಿಂದ ಮುಂದುವರಿಸೋಕೆ ಆಗಲ್ಲ. ಮುಂದುವರಿಸಬೇಕು ಎಂದರೆ ಮತ್ತೆ ರಕ್ತವನ್ನೇ ಕೇಳತ್ತೆ’, ‘ಅಲ್ಲಿ ಬೀಳುವ ಹೆಣಗಳೂ ಉಪಯೋಗಕ್ಕೆ ಬರುತ್ತದೆ, ಬೇಕಿದ್ದರೆ ರಣಹದ್ದುಗಳನ್ನು ಕೇಳು’ ಎಂಬಿತ್ಯಾದಿ ಡೈಲಾಗ್​ಗಳು ಟ್ರೇಲರ್​ನಲ್ಲಿ ಹೈಲೈಟ್​ ಆಗಿದೆ. ಸಿನಿಮಾದ ಹಿನ್ನೆಲೆ ಸಂಗೀತ ಟ್ರೇಲರ್​ನ ತೂಕವನ್ನು ಹೆಚ್ಚಿಸಿದೆ.

5 / 8
‘ಕೆಜಿಎಫ್​’ ಸಿನಿಮಾ ಸೃಷ್ಟಿಸಿದ ಹೈಪ್​ ತುಂಬಾನೇ ದೊಡ್ಡಮಟ್ಟದ್ದು. ಈ ಕಾರಣಕ್ಕೆ ‘ಕೆಜಿಎಫ್​ 2’ ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಮೊದಲೇ ಸಿನಿಮಾ ತೆರೆಗೆ ಬಂದು ಅಬ್ಬರಿಸಬೇಕಿತ್ತು. ಮೊದಲ ಚಾಪ್ಟರ್​ ಪೂರ್ಣಗೊಳ್ಳುತ್ತಿದ್ದಂತೆ ಎರಡನೇ ಚಾಪ್ಟರ್​ ಕೆಲಸಗಳು ಆರಂಭಗೊಂಡಿದ್ದವು. ಆದರೆ, ಕೊವಿಡ್​ ಮೂರು ಅಲೆಗಳಿಂದ ಸಿನಿಮಾ ಕೆಲಸಗಳು ವಿಳಂಬ ಆದವು. ಈಗ ಮೂರನೇ ಅಲೆ ತಣ್ಣಗಾಗಿದೆ. ಹೀಗಾಗಿ, ಸಿನಿಮಾ ಏಪ್ರಿಲ್​ 14ರಂದು ರಿಲೀಸ್ ಆಗುತ್ತಿದೆ.

‘ಕೆಜಿಎಫ್​’ ಸಿನಿಮಾ ಸೃಷ್ಟಿಸಿದ ಹೈಪ್​ ತುಂಬಾನೇ ದೊಡ್ಡಮಟ್ಟದ್ದು. ಈ ಕಾರಣಕ್ಕೆ ‘ಕೆಜಿಎಫ್​ 2’ ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಮೊದಲೇ ಸಿನಿಮಾ ತೆರೆಗೆ ಬಂದು ಅಬ್ಬರಿಸಬೇಕಿತ್ತು. ಮೊದಲ ಚಾಪ್ಟರ್​ ಪೂರ್ಣಗೊಳ್ಳುತ್ತಿದ್ದಂತೆ ಎರಡನೇ ಚಾಪ್ಟರ್​ ಕೆಲಸಗಳು ಆರಂಭಗೊಂಡಿದ್ದವು. ಆದರೆ, ಕೊವಿಡ್​ ಮೂರು ಅಲೆಗಳಿಂದ ಸಿನಿಮಾ ಕೆಲಸಗಳು ವಿಳಂಬ ಆದವು. ಈಗ ಮೂರನೇ ಅಲೆ ತಣ್ಣಗಾಗಿದೆ. ಹೀಗಾಗಿ, ಸಿನಿಮಾ ಏಪ್ರಿಲ್​ 14ರಂದು ರಿಲೀಸ್ ಆಗುತ್ತಿದೆ.

6 / 8
ಈ ಮೊದಲು ರಿಲೀಸ್ ಆಗಿದ್ದ ‘ತೂಫಾನ್​..’ ಹಾಡು ಅಬ್ಬರಿಸಿದೆ. ಕನ್ನಡ ವರ್ಷನ್​ಗಿಂತ ಹಿಂದಿ ವರ್ಷನ್​ನ ಹಾಡು ಹೆಚ್ಚು ವೀಕ್ಷಣೆ ಕಂಡಿದೆ. ಇದರಿಂದ ಸಿನಿಮಾ ಮೇಲೆ ಬಾಲಿವುಡ್​ ಮಂದಿ ಎಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂಬುದು ಸಾಬೀತಾಗಿದೆ.

ಈ ಮೊದಲು ರಿಲೀಸ್ ಆಗಿದ್ದ ‘ತೂಫಾನ್​..’ ಹಾಡು ಅಬ್ಬರಿಸಿದೆ. ಕನ್ನಡ ವರ್ಷನ್​ಗಿಂತ ಹಿಂದಿ ವರ್ಷನ್​ನ ಹಾಡು ಹೆಚ್ಚು ವೀಕ್ಷಣೆ ಕಂಡಿದೆ. ಇದರಿಂದ ಸಿನಿಮಾ ಮೇಲೆ ಬಾಲಿವುಡ್​ ಮಂದಿ ಎಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂಬುದು ಸಾಬೀತಾಗಿದೆ.

7 / 8
‘ಕೆಜಿಎಫ್​ 2’ ಸಿನಿಮಾದಲ್ಲಿ ದೊಡ್ಡ ತಾರಾಗಣ ಇದೆ. ಬಾಲಿವುಡ್​ನ ಖ್ಯಾತ ನಟ ಸಂಜಯ್ ದತ್​ ಅಧೀರನಾಗಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೂಲಕ ರವೀನಾ ಟಂಡನ್​ ಹಲವು ವರ್ಷಗಳ ಬಳಿಕ ಸ್ಯಾಂಡಲ್​ವುಡ್​ಗೆ ಮರಳುತ್ತಿದ್ದಾರೆ. ಬಹುಭಾಷಾ ನಟ ಪ್ರಕಾಶ್ ರಾಜ್​ ಚಿತ್ರದಲ್ಲಿ ನಟಿಸಿದ್ದಾರೆ. ಯಶ್​ಗೆ ಜತೆಯಾಗಿ ಶ್ರೀನಿಧಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

‘ಕೆಜಿಎಫ್​ 2’ ಸಿನಿಮಾದಲ್ಲಿ ದೊಡ್ಡ ತಾರಾಗಣ ಇದೆ. ಬಾಲಿವುಡ್​ನ ಖ್ಯಾತ ನಟ ಸಂಜಯ್ ದತ್​ ಅಧೀರನಾಗಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೂಲಕ ರವೀನಾ ಟಂಡನ್​ ಹಲವು ವರ್ಷಗಳ ಬಳಿಕ ಸ್ಯಾಂಡಲ್​ವುಡ್​ಗೆ ಮರಳುತ್ತಿದ್ದಾರೆ. ಬಹುಭಾಷಾ ನಟ ಪ್ರಕಾಶ್ ರಾಜ್​ ಚಿತ್ರದಲ್ಲಿ ನಟಿಸಿದ್ದಾರೆ. ಯಶ್​ಗೆ ಜತೆಯಾಗಿ ಶ್ರೀನಿಧಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

8 / 8

Published On - 7:24 pm, Sun, 27 March 22

Follow us
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ