AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghee Benefits: ಬೇಸಿಗೆಯಲ್ಲಿ ತುಪ್ಪ ಸೇವನೆಯ ಪ್ರಯೋಜನಗಳೇನು? ಇಲ್ಲಿದೆ ಉಪಯುಕ್ತ ಮಾಹಿತಿ

ಬೇಸಗೆಯಲ್ಲಿ ತುಪ್ಪ ಸೇವನೆಯಿಂದ ಹಲವು ಆರೋಗ್ಯಕರ ಪ್ರಯೋಜನಗಳಿವೆ. ಶಕ್ತಿ ವರ್ಧನೆ, ತ್ವಚೆಯ ಸೌಂದರ್ಯ, ಮೂಳೆ, ಹೊಟ್ಟೆಯ ಆರೋಗ್ಯ ಇತ್ಯಾದಿ ತುಪ್ಪ ಸೇವಿಸುವುದರಿಂದ ಉತ್ತಮವಾಗುತ್ತದೆ. ರೋಗ ನಿರೋಧಕ ಶಕ್ತಿ ಕೂಡ ಹೆಚ್ಚುತ್ತದೆ.

TV9 Web
| Updated By: ganapathi bhat

Updated on: Apr 04, 2022 | 9:06 AM

ಶಕ್ತಿ ವರ್ಧಕ: ತುಪ್ಪದಲ್ಲಿ ಇರುವ ಆರೋಗ್ಯಕರ ಕೊಬ್ಬಿನ ಅಂಶ ದೇಹಕ್ಕೆ ಪ್ರಯೋಜನಕಾರಿ ಆಗಿದೆ. ಇದನ್ನು ಸೀಮಿತ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ದೇಹಕ್ಕೆ ಶಕ್ತಿ ದೊರೆಯುತ್ತದೆ. ತುಪ್ಪ ತಿನ್ನುವುದರಿಂದ ದೇಹದಲ್ಲಿ ಪೋಷಕಾಂಶಗಳು ಉತ್ತಮವಾಗಿ ಹೀರಲ್ಪಡುತ್ತದೆ ಎಂದೂ ಹೇಳಲಾಗುತ್ತದೆ.

ಶಕ್ತಿ ವರ್ಧಕ: ತುಪ್ಪದಲ್ಲಿ ಇರುವ ಆರೋಗ್ಯಕರ ಕೊಬ್ಬಿನ ಅಂಶ ದೇಹಕ್ಕೆ ಪ್ರಯೋಜನಕಾರಿ ಆಗಿದೆ. ಇದನ್ನು ಸೀಮಿತ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ದೇಹಕ್ಕೆ ಶಕ್ತಿ ದೊರೆಯುತ್ತದೆ. ತುಪ್ಪ ತಿನ್ನುವುದರಿಂದ ದೇಹದಲ್ಲಿ ಪೋಷಕಾಂಶಗಳು ಉತ್ತಮವಾಗಿ ಹೀರಲ್ಪಡುತ್ತದೆ ಎಂದೂ ಹೇಳಲಾಗುತ್ತದೆ.

1 / 5
ತ್ವಚೆಯ ಸೌಂದರ್ಯ: ಬೇಸಿಗೆಯಲ್ಲಿ ದೇಹ ನಿರ್ಜಲೀಕರಣ ಆಗುವ ಸಮಸ್ಯೆ ಸಾಮಾನ್ಯವಾಗಿದೆ. ಏಕೆಂದರೆ ಈ ಸಮಯದಲ್ಲಿ ಅತಿಯಾದ ಬೆವರುವಿಕೆ, ಬಿಸಿಲು, ಸುಸ್ತು ಇರುತ್ತದೆ. ನಿಯಮಿತವಾಗಿ ತುಪ್ಪವನ್ನು ಸೇವಿಸುವುದರಿಂದ ಈ ನಿರ್ಜಲೀಕರಣದ ಸಮಸ್ಯೆಯನ್ನು ತಪ್ಪಿಸಬಹುದು. ಬೇಕಾದಲ್ಲಿ ತುಪ್ಪವನ್ನು ತ್ವಚೆಗೆ ಸವರುವುದರಿಂದ ಚರ್ಮವನ್ನು ಇನ್ನಷ್ಟು ತೇವಾಂಶದಿಂದ ಇರಿಸಿಕೊಳ್ಳಬಹುದು.

ತ್ವಚೆಯ ಸೌಂದರ್ಯ: ಬೇಸಿಗೆಯಲ್ಲಿ ದೇಹ ನಿರ್ಜಲೀಕರಣ ಆಗುವ ಸಮಸ್ಯೆ ಸಾಮಾನ್ಯವಾಗಿದೆ. ಏಕೆಂದರೆ ಈ ಸಮಯದಲ್ಲಿ ಅತಿಯಾದ ಬೆವರುವಿಕೆ, ಬಿಸಿಲು, ಸುಸ್ತು ಇರುತ್ತದೆ. ನಿಯಮಿತವಾಗಿ ತುಪ್ಪವನ್ನು ಸೇವಿಸುವುದರಿಂದ ಈ ನಿರ್ಜಲೀಕರಣದ ಸಮಸ್ಯೆಯನ್ನು ತಪ್ಪಿಸಬಹುದು. ಬೇಕಾದಲ್ಲಿ ತುಪ್ಪವನ್ನು ತ್ವಚೆಗೆ ಸವರುವುದರಿಂದ ಚರ್ಮವನ್ನು ಇನ್ನಷ್ಟು ತೇವಾಂಶದಿಂದ ಇರಿಸಿಕೊಳ್ಳಬಹುದು.

2 / 5
ರೋಗನಿರೋಧಕ ಶಕ್ತಿ ಹೆಚ್ಚಿಸಬಹುದು: ದೇಹದಲ್ಲಿ ರೋಗನಿರೋಧಕ ಶಕ್ತಿ ದುರ್ಬಲಗೊಂಡಾಗ ರೋಗಗಳು ನಮ್ಮನ್ನು ತಮ್ಮ ಹಿಡಿತಕ್ಕೆ ಎಳೆದುಕೊಂಡು ಬಿಡುತ್ತವೆ. ತುಪ್ಪದಲ್ಲಿ ಇರುವ ಗುಣಲಕ್ಷಣಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಆಹಾರ ಪದಾರ್ಥದಲ್ಲಿ ಒಳ್ಳೆಯ ಗುಣಮಟ್ಟದ ತುಪ್ಪ ಬಳಸುವುದರಿಂದ ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

ರೋಗನಿರೋಧಕ ಶಕ್ತಿ ಹೆಚ್ಚಿಸಬಹುದು: ದೇಹದಲ್ಲಿ ರೋಗನಿರೋಧಕ ಶಕ್ತಿ ದುರ್ಬಲಗೊಂಡಾಗ ರೋಗಗಳು ನಮ್ಮನ್ನು ತಮ್ಮ ಹಿಡಿತಕ್ಕೆ ಎಳೆದುಕೊಂಡು ಬಿಡುತ್ತವೆ. ತುಪ್ಪದಲ್ಲಿ ಇರುವ ಗುಣಲಕ್ಷಣಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಆಹಾರ ಪದಾರ್ಥದಲ್ಲಿ ಒಳ್ಳೆಯ ಗುಣಮಟ್ಟದ ತುಪ್ಪ ಬಳಸುವುದರಿಂದ ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

3 / 5
ಹೊಟ್ಟೆಯ ಆರೋಗ್ಯ: ತುಪ್ಪ ಸೇವನೆಯಿಂದ ನಮ್ಮ ದೇಹದ ಜೀರ್ಣಾಂಗ ವ್ಯವಸ್ಥೆಯು ಉತ್ತಮವಾಗಿ ಉಳಿಯುತ್ತದೆ. ಈ ಬಗ್ಗೆ ಆಯುರ್ವೇದದಲ್ಲಿ ಕೂಡ ತಿಳಿಸಲಾಗಿದೆ. ಬೇಸಿಗೆಯಲ್ಲಿ ಮಲಬದ್ಧತೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಪ್ರತಿದಿನ ತುಪ್ಪದಿಂದ ಮಾಡಿದ ಪದಾರ್ಥಗಳನ್ನು ಸೇವನೆ ಮಾಡಿ. ಇದು ನಿಮಗೆ ಆರೋಗ್ಯಕರ ಪ್ರಯೋಜನ ನೀಡುತ್ತದೆ.

ಹೊಟ್ಟೆಯ ಆರೋಗ್ಯ: ತುಪ್ಪ ಸೇವನೆಯಿಂದ ನಮ್ಮ ದೇಹದ ಜೀರ್ಣಾಂಗ ವ್ಯವಸ್ಥೆಯು ಉತ್ತಮವಾಗಿ ಉಳಿಯುತ್ತದೆ. ಈ ಬಗ್ಗೆ ಆಯುರ್ವೇದದಲ್ಲಿ ಕೂಡ ತಿಳಿಸಲಾಗಿದೆ. ಬೇಸಿಗೆಯಲ್ಲಿ ಮಲಬದ್ಧತೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಪ್ರತಿದಿನ ತುಪ್ಪದಿಂದ ಮಾಡಿದ ಪದಾರ್ಥಗಳನ್ನು ಸೇವನೆ ಮಾಡಿ. ಇದು ನಿಮಗೆ ಆರೋಗ್ಯಕರ ಪ್ರಯೋಜನ ನೀಡುತ್ತದೆ.

4 / 5
ಮೂಳೆ ಆರೋಗ್ಯ: ತುಪ್ಪವು ಮೂಳೆಗಳ ಆರೋಗ್ಯಕ್ಕೆ ಕೂಡ ಪ್ರಯೋಜನಕಾರಿ ಆಗಿದೆ. ವಾಸ್ತವವಾಗಿ ಮೂಳೆಗಳಿಗೆ ಅಗತ್ಯವಾದ ವಿಟಮಿನ್ ಕೆ 2 ತುಪ್ಪದಲ್ಲಿ ಹೇರಳವಾಗಿ ಲಭ್ಯವಿದೆ. ಇದು ದೇಹಕ್ಕೆ ಕ್ಯಾಲ್ಸಿಯಂ ಒದಗಿಸಲು ಸಹಾಯ ಮಾಡುತ್ತದೆ. ತುಪ್ಪ ಸೇವನೆಯಿಂದ ಮೂಳೆಗಳು ಗಟ್ಟಿಯಾಗುತ್ತದೆ.

ಮೂಳೆ ಆರೋಗ್ಯ: ತುಪ್ಪವು ಮೂಳೆಗಳ ಆರೋಗ್ಯಕ್ಕೆ ಕೂಡ ಪ್ರಯೋಜನಕಾರಿ ಆಗಿದೆ. ವಾಸ್ತವವಾಗಿ ಮೂಳೆಗಳಿಗೆ ಅಗತ್ಯವಾದ ವಿಟಮಿನ್ ಕೆ 2 ತುಪ್ಪದಲ್ಲಿ ಹೇರಳವಾಗಿ ಲಭ್ಯವಿದೆ. ಇದು ದೇಹಕ್ಕೆ ಕ್ಯಾಲ್ಸಿಯಂ ಒದಗಿಸಲು ಸಹಾಯ ಮಾಡುತ್ತದೆ. ತುಪ್ಪ ಸೇವನೆಯಿಂದ ಮೂಳೆಗಳು ಗಟ್ಟಿಯಾಗುತ್ತದೆ.

5 / 5
Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ