ಕೊಡಗು ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿರ್ಬಂಧ; ಪ್ರವೇಶ ಸಿಗಬೇಕಾದರೆ ಏನು ಮಾಡಬೇಕು ಗೊತ್ತಾ?

ಕರ್ನಾಟಕ ಚುನಾವಣೆ ಹಿನ್ನೆಲೆ ನಾಳೆ ಕೊಡುಗು ಜಿಲ್ಲೆಯಲ್ಲಿರುವ ರಾಜಾ ಸೀಟ್, ಅಬ್ಬಿ ಫಾಲ್ಸ್, ಸನ್ನಿಸೈಡ್ ಮ್ಯೂಸಿಯಂ ಮತ್ತು ಮಲ್ಲಳ್ಳಿ ಫಾಲ್ಸ್‌ಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

| Updated By: Digi Tech Desk

Updated on:May 11, 2023 | 4:42 PM

Kodagu tourist places Restrictions on entry to tourist spots in Kodagu

ಮತದಾನ ನಡೆಯಲಿರುವ ಹಿನ್ನೆಲೆ ನಾಳೆ ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡಿದರೆ ಪ್ರವೇಶ ಸಿಗುವುದಿಲ್ಲ. ಯಾವೆಲ್ಲಾ ತಾಣಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ? ಪ್ರವೇಶ ಸಿಗಬೇಕೆಂದರೆ ಏನು ಮಾಡಬೇಕು? ಮುಂದಕ್ಕೆ ಹೇಳುತ್ತೇವೆ ನೋಡಿ.

1 / 8
Kodagu tourist places Restrictions on entry to tourist spots in Kodagu

ಮೇ 10 ರಂದು ರಾಜಾ ಸೀಟ್​ ತಾಣಕ್ಕೆ ಪ್ರವಾಸಿಗರು ಭೇಟಿ ನೀಡಿದರೆ ಒಳಗೆ ಪ್ರವೇಶ ಸಿಗುವುದಿಲ್ಲ. (ಫೋಟೋ: expedia)

2 / 8
Kodagu tourist places Restrictions on entry to tourist spots in Kodagu

ಹೇಗೂ ರಜೆ ಇದೆ, ಅಬ್ಬಿ ಫಾಲ್ಸ್​ ನೋಡಿ ಬರೋಣ ಅಂತ ಇಲ್ಲಿಗೆ ಹೋದರೆ ವಾಪಸ್ ಬರಬೇಕಾದಿತು. ಇಲ್ಲಿಗೂ ಪ್ರವೇಶ ನಿರ್ಬಂಧಿಸಲಾಗಿದೆ. (ಫೋಟೋ: fabhotels)

3 / 8
Kodagu tourist places Restrictions on entry to tourist spots in Kodagu

ಅಬ್ಬಿ ಫಾಲ್ಸ್​ಗೆ ಹೇಗೂ ಪ್ರವೇಶ ಸಿಗಲ್ಲ, ಮಲ್ಲಳ್ಳಿ ಫಾಲ್ಸ್‌ಗಾದರೂ ಹೋಗಿ ಬರೋಣ ಎಂದು ಇಲ್ಲಿಗೆ ಭೇಟಿ ನೀಡಿದರೂ ಪ್ರಯೋಜನವಿಲ್ಲ. ಏಕೆಂದರೆ, ಇಲ್ಲಿಯೂ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. (ಫೋಟೋ: thrillophilia)

4 / 8
Kodagu tourist places Restrictions on entry to tourist spots in Kodagu

ಸನ್ನಿಸೈಡ್ ಮ್ಯೂಸಿಯಂಗೆ ನಾಳೆ ಭೇಟಿ ನೀಡಬೇಕು ಎನ್ನುವವರಿಗೂ ಪ್ರವೇಶ ಸಿಗುವುದಿಲ್ಲ. ಇಲ್ಲಿಗೂ ಪ್ರವೇಶ ನಿರ್ಬಂಧಿಸಲಾಗಿದೆ. (ಫೋಟೋ: coorg.com)

5 / 8
Kodagu tourist places Restrictions on entry to tourist spots in Kodagu

ಹೆಚ್ಚಿನ ಜನರು ಮತದಾನ ಮಾಡಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸತೀಶ ಬಿ.ಸಿ ಹೇಳಿದ್ದಾರೆ. ಬೇರೆ ರಾಜ್ಯಗಳ ಮಕ್ಕಳು ಮತ್ತು ಪ್ರವಾಸಿಗರಿಗೆ ಇದು ಅನ್ವಯಿಸುವುದಿಲ್ಲ ಅಂತ ಹೇಳಿದ್ದಾರೆ.

6 / 8
Kodagu tourist places Restrictions on entry to tourist spots in Kodagu

ಜಿಲ್ಲೆಯ ಜನರು ತಮ್ಮ ಅಮೂಲ್ಯವಾದ ಮತ ಚಲಾಯಿಸಿದವರಿಗೆ ಮಾತ್ರ ನಾಳೆ ಈ ಎಲ್ಲಾ ತಾಣಗಳಿಗೆ ಪ್ರವೇಶ ಸಿಗಲಿದೆ. ಬೆರಳಿಗೆ ಹಾಕುವ ಅಳಿಸಲಾಗದ ಶಾಯಿ ತೋರಿಸಿದರಷ್ಟೇ ಪ್ರವೇಶಕ್ಕೆ ಅನುಮತಿ ಸಿಗಲಿದೆ.

7 / 8
Kodagu tourist places Restrictions on entry to tourist spots in Kodagu

ಇದರೊಂದಿಗೆ ಜಿಲ್ಲೆಯ ಕೆಲವು ಹೋಟೆಲ್‌ಗಳು ಜನರು ತಮ್ಮ ಬೆರಳುಗಳ ಮೇಲೆ ಅಳಿಸಲಾಗದ ಶಾಯಿ ಗುರುತು ತೋರಿಸಿದರೆ ಹೋಟೆಲ್ ಬುಕಿಂಗ್‌ನಲ್ಲಿ ಶೇ 10 ರಿಂದ ಶೇ 20 ರಷ್ಟು ರಿಯಾಯಿತಿ ಪಡೆಯಲಿದ್ದಾರೆ. (ಫೋಟೋ: trivago.in)

8 / 8

Published On - 7:21 pm, Tue, 9 May 23

Follow us
ಗ್ಯಾರಂಟಿ ಯೋಜನೆ ಫಲಾನುಭವಿಗಳ ವಿವರ ಸ್ಟೋರ್ ಮಾಡಿಕೊಂಡಿರುವ ಈಶ್ವರ್
ಗ್ಯಾರಂಟಿ ಯೋಜನೆ ಫಲಾನುಭವಿಗಳ ವಿವರ ಸ್ಟೋರ್ ಮಾಡಿಕೊಂಡಿರುವ ಈಶ್ವರ್
ಯಡಿಯೂರಪ್ಪ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್​​ಗೆ ₹ 1000 ಕೋಟಿ: ಯತ್ನಾಳ್
ಯಡಿಯೂರಪ್ಪ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್​​ಗೆ ₹ 1000 ಕೋಟಿ: ಯತ್ನಾಳ್
ಕಾಂಗ್ರೆಸ್ ಕುತಂತ್ರದಿಂದ ನಿಖಿಲ್ ಎರಡು ಬಾರಿ ಸೋಲಬೇಕಾಯಿತು: ಕುಮಾರಸ್ವಾಮಿ
ಕಾಂಗ್ರೆಸ್ ಕುತಂತ್ರದಿಂದ ನಿಖಿಲ್ ಎರಡು ಬಾರಿ ಸೋಲಬೇಕಾಯಿತು: ಕುಮಾರಸ್ವಾಮಿ
ವಿಶೇಷಚೇತನ ಮಹಿಳೆ ಕಂಡು ಮಾತನಾಡಿಸಿದ ಮೋದಿ
ವಿಶೇಷಚೇತನ ಮಹಿಳೆ ಕಂಡು ಮಾತನಾಡಿಸಿದ ಮೋದಿ
ಚನ್ನಪಟ್ಟಣದ ಹುಣಸನಹಳ್ಳಿಯಲ್ಲಿ ಮತಯಾಚನೆ ಮಾಡಿದ ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣದ ಹುಣಸನಹಳ್ಳಿಯಲ್ಲಿ ಮತಯಾಚನೆ ಮಾಡಿದ ನಿಖಿಲ್ ಕುಮಾರಸ್ವಾಮಿ
ಅಕ್ರಮದ ದಾಖಲೆ ಬಿಡುಗಡೆ ಮಾಡಿ ಎಂದಿದ್ದಕ್ಕೆ ಸುರೇಶ್ ಹಾರಿಕೆ ಉತ್ತರ ನೀಡಿದರು
ಅಕ್ರಮದ ದಾಖಲೆ ಬಿಡುಗಡೆ ಮಾಡಿ ಎಂದಿದ್ದಕ್ಕೆ ಸುರೇಶ್ ಹಾರಿಕೆ ಉತ್ತರ ನೀಡಿದರು
ನನ್ನನ್ನು ಕೆಣಕುವ ಹೇಳಿಕೆಗಳನ್ನು ಕಾಂಗ್ರೆಸ್ ನೀಡುತ್ತಿದೆ: ಕುಮಾರಸ್ವಾಮಿ
ನನ್ನನ್ನು ಕೆಣಕುವ ಹೇಳಿಕೆಗಳನ್ನು ಕಾಂಗ್ರೆಸ್ ನೀಡುತ್ತಿದೆ: ಕುಮಾರಸ್ವಾಮಿ
ಸೂಕ್ತ ಪರಿಹಾರ ನೀಡದಿದ್ದರೆ ವಿಧಾನಸೌಧದ ಮುಂದೆ ಧರಣಿ, ರೈತನ ಎಚ್ಚರಿಕೆ
ಸೂಕ್ತ ಪರಿಹಾರ ನೀಡದಿದ್ದರೆ ವಿಧಾನಸೌಧದ ಮುಂದೆ ಧರಣಿ, ರೈತನ ಎಚ್ಚರಿಕೆ
ಹಾಸನಾಂಬ ದರ್ಶನಕ್ಕೆ ನಾಲ್ಕನೇ ದಿನವೂ ಭಕ್ತ ಸಾಗರ
ಹಾಸನಾಂಬ ದರ್ಶನಕ್ಕೆ ನಾಲ್ಕನೇ ದಿನವೂ ಭಕ್ತ ಸಾಗರ
ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್​ಡಿಎ ಗೆಲ್ಲಲಿದೆ: ಪ್ರತಾಪ್ ಸಿಂಹ
ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್​ಡಿಎ ಗೆಲ್ಲಲಿದೆ: ಪ್ರತಾಪ್ ಸಿಂಹ