- TV9 Kannada Photo gallery Kogilu Layout Row: Karnataka CM Siddaramaiah Meets Kerala CM Pinarayi Vijayan in Thiruvananthapuram, See Photos
ಕೋಗಿಲು ವಿಚಾರದಲ್ಲಿ ಜಟಾಪಟಿ: ತಿರುವನಂತಪುರದಲ್ಲಿ ಕೇರಳ ಸಿಎಂ ಪಿಣರಾಯಿ ಜತೆ ಸಿದ್ದರಾಮಯ್ಯ ಆತ್ಮೀಯ ಕುಶಲೋಪರಿ!
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳು, ಶೆಡ್ಗಳ ತೆರವು ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ತೀವ್ರ ವಾಗ್ದಾಳಿ ನಡೆಸಿದ್ದರು. ಆದರೆ, ಸರ್ಕಾರದ ಕ್ರಮವನ್ನು ಡಿಸಿಎಂ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡು ಕೇರಳ ಸಿಎಂಗೆ ತಿರುಗೇಟು ನೀಡಿದ್ದರು. ಅದಾದ ನಂತರ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಕೋಗಿಲು ನಿರಾಶ್ರಿತರಿಗೆ ತಕ್ಷಣವೇ ಮನೆಗಳನ್ನು ನೀಡಲು ಸರ್ಕಾರ ಮುಂದಾಗಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ಸಂದರ್ಭದಲ್ಲಿ ಕೇರಳ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ತಿರುವನಂತಪುರದಲ್ಲಿ ಭೇಟಿಯಾಗಿದ್ದಾರೆ.
Updated on: Dec 31, 2025 | 11:48 AM

ಕೇರಳದ ವರ್ಕಳದಲ್ಲಿ ಶಿವಗಿರಿ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ರಾಜಧಾನಿ ತಿರುವನಂತಪುರಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಕೇರಳ ಸಿಎಂ ಪಿಣರಾಯಿ ವಿಜಯನ್ರನ್ನು ಭೇಟಿಯಾಗಿ ಆತ್ಮೀಯವಾಗಿ ಮಾತನಾಡಿದರು.

ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ಗೌರವ ಸಲ್ಲಿಸಿದರು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ ಉಪಸ್ಥಿತರಿದ್ದರು. ಈ ವೇಳೆ ವೇದಿಕೆಯಲ್ಲಿ ಪಿಣರಾಯಿ ವಿಜಯನ್, ಸಿದ್ದರಾಮಯ್ಯ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.

ಕೇರಳದ ವರ್ಕಳದಲ್ಲಿ ನಡೆಯಲಿರುವ ಶಿವಗಿರಿ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಬ್ರಹ್ಮಶ್ರೀ ಜ್ಞಾನತೀರ್ಥ ಸ್ವಾಮೀಜಿಯವರು ಹಾಗೂ ಗುರುಗಳ ಅನುಯಾಯಿಗಳಿಂದ ದೊರೆತ ಆತ್ಮೀಯ ಸ್ವಾಗತದಿಂದ ಹರ್ಷಿತನಾದೆ ಎಂದು ಸಿದ್ದರಾಮಯ್ಯ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಒಂದು ಕಾಲದಲ್ಲಿ ಜಾತಿಯಾಧಾರಿತ ಶೋಷಣೆ, ಅಸಮಾನತೆಗಳಿಂದ ನರಳುತ್ತಿದ್ದ ಕೇರಳದಲ್ಲಿ ಸಮಾನತೆಯ ಬೆಳಕು ಹರಿಸಿದ ನಾರಾಯಣ ಗುರುಗಳು ನಡೆದಾಡಿದ ನೆಲದಲ್ಲಿ ಜರುಗಲಿರುವ ಯಾತ್ರಾರ್ಥಿಗಳ ಮಹಾ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನಾನು ಕಾತುರನಾಗಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೇರಳದ ಶಿವಗಿರಿ ಮಠದಲ್ಲಿ ಆಯೋಜಿಸಿರುವ ಯಾತ್ರಾರ್ಥಿಗಳ ಸಮಾವೇಶದಲ್ಲಿ ಪಾಲ್ಗೊಳ್ಳುವ ಮುನ್ನ ಸಮಸಮಾಜದ ಕನಸು ಬಿತ್ತಿದ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿ ಸ್ಥಳಕ್ಕೆ ಭೇಟಿನೀಡಿ, ಗುರುಗಳಿಗೆ ನಮಿಸಿದೆ ಎಂದು ಸಿದ್ದರಾಮಯ್ಯ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.

ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್, ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯರಾದ ಬಿಕೆ ಹರಿಪ್ರಸಾದ್ ಸೇರಿದಂತೆ ಹಲವು ಗಣ್ಯರು ಈ ವೇಳೆ ಹಾಜರಿದ್ದರು ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಕಾರ್ಯನಿರ್ವಹಣೆ.
Read More



