ಕೋಗಿಲು ವಿಚಾರದಲ್ಲಿ ಜಟಾಪಟಿ: ತಿರುವನಂತಪುರದಲ್ಲಿ ಕೇರಳ ಸಿಎಂ ಪಿಣರಾಯಿ ಜತೆ ಸಿದ್ದರಾಮಯ್ಯ ಆತ್ಮೀಯ ಕುಶಲೋಪರಿ!
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳು, ಶೆಡ್ಗಳ ತೆರವು ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ತೀವ್ರ ವಾಗ್ದಾಳಿ ನಡೆಸಿದ್ದರು. ಆದರೆ, ಸರ್ಕಾರದ ಕ್ರಮವನ್ನು ಡಿಸಿಎಂ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡು ಕೇರಳ ಸಿಎಂಗೆ ತಿರುಗೇಟು ನೀಡಿದ್ದರು. ಅದಾದ ನಂತರ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಕೋಗಿಲು ನಿರಾಶ್ರಿತರಿಗೆ ತಕ್ಷಣವೇ ಮನೆಗಳನ್ನು ನೀಡಲು ಸರ್ಕಾರ ಮುಂದಾಗಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ಸಂದರ್ಭದಲ್ಲಿ ಕೇರಳ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ತಿರುವನಂತಪುರದಲ್ಲಿ ಭೇಟಿಯಾಗಿದ್ದಾರೆ.

1 / 6

2 / 6

3 / 6

4 / 6

5 / 6

6 / 6




