ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಾಡಿಬಿಲ್ಡರ್ ಶವ ಪತ್ತೆ: ಯುವ ದೇಹದಾರ್ಢ್ಯ ಪಟು ಫೋಟೋಗಳು ಇಲ್ಲಿವೆ
ನೇಣು ಬಿಗಿದ ಸ್ಥಿತಿಯಲ್ಲಿ ದೇಹದಾರ್ಢ್ಯಪಟು ಶ್ರೀನಾಥ್ ಶವ ಪತ್ತೆಯಾಗಿದೆ. ಬೆಂಗಳೂರಿನ ಕೆ.ಆರ್.ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಘಟನೆ ನಡೆದಿದೆ.
Updated on:Jan 11, 2023 | 8:01 PM

ನೇಣು ಬಿಗಿದ ಸ್ಥಿತಿಯಲ್ಲಿ ದೇಹದಾರ್ಢ್ಯಪಟು ಶ್ರೀನಾಥ್ ಶವ ಪತ್ತೆಯಾಗಿದೆ.

ಬೆಂಗಳೂರಿನ ಕೆ.ಆರ್.ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಘಟನೆ ನಡೆದಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ನಿವಾಸಿಯಾಗಿರುವ ಶ್ರೀನಾಥ್ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಡಿ ಫಾರ್ಮ್ ಓದುತ್ತಿದ್ರು.

ಆದ್ರೆ ನಿನ್ನೆ ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶ್ರೀನಾಥ್ ಶವ ಪತ್ತೆಯಾಗಿದೆ.

ಫಾರ್ಮಾ ಡಿ ವ್ಯಾಸಾಂಗ ಮಾಡುವುದರ ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು.

ದೇಹದಾರ್ಢ್ಯ ಪಟು ಶ್ರೀನಾಥ್

ಈ ಸಂಬಂಧ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಐದು ವರ್ಷದ ಹಿಂದೆ ಬೆಂಗಳೂರಿಗೆ ಓದಲು ಬಂದಿದ್ದ ಶ್ರೀನಾಥ್ ಗೆಳೆಯನ ಜೊತೆ ವಾಸವಾಗಿದ್ದರು. ಇನ್ನೊಂದು ವರ್ಷ ಆಗಿದ್ರೆ ಡಿ ಫಾರ್ಮಾ ಸಹ ಮುಗಿಯುತ್ತಿತ್ತು.

ತಂದೆಯಿಂದ ಒಂದು ತಿಂಗಳ ಹಿಂದೆ ಅವಲಹಳ್ಳಿ ಬಳಿ ಜಿಮ್ ಓಪನ್ ಮಾಡಲು 3 ಲಕ್ಷ ರೂ ಹಣವನ್ನು ಸಹ ಪಡೆದುಕೊಂಡಿದ್ದನು ಎಂದು ತಿಳಿದುಬಂದಿದೆ.

ದೇಹದಾರ್ಢ್ಯಪಟು ಶ್ರೀನಾಥ್ ಸಾವು ಆತ್ಮಹತ್ಯೆಯೋ? ಕೊಲೆಯೋ? ಎನ್ನುವುದು ತಿಳಿದುಬಂದಿಲ್ಲ

ದೇಹದಾರ್ಢ್ಯಪಟು ಶ್ರೀನಾಥ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Published On - 8:00 pm, Wed, 11 January 23

TV9 Kannada
Read More



